AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದರೂ ಪರ ಪುರುಷನ ಜೊತೆ ಅನೈತಿಕ ಸಂಬಂಧ: ಪತಿಯಿಂದಲೇ ಪತ್ನಿಯ ಭೀಕರ ಕೊಲೆ

ಬಾಗಲಕೋಟೆ ಜಿಲ್ಲೆಯ ಗಲಗಲಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ 23 ವರ್ಷದ ಪತ್ನಿ ಭಾಗ್ಯಶ್ರೀಯನ್ನು ಪತಿ ಪ್ರವೀಣ ಜಿಗಲೂರು ನೇಣು ಬಿಗಿದು ಭೀಕರವಾಗಿ ಕೊಲೆ ಮಾಡಿದ್ದಾನೆ. ದಂಪತಿಗೆ 6 ವರ್ಷಗಳ ಹಿಂದೆ ವಿವಾಹವಾಗಿದ್ದು, ಪತ್ನಿಯ ಅನೈತಿಕ ಸಂಬಂಧದ ವಿಚಾರ 2 ವರ್ಷಗಳ ಹಿಂದೆ ಪತಿಗೆ ಗೊತ್ತಾಗಿತ್ತು. ಈ ವಿಚಾರವಾಗಿ ಇಬ್ಬರ ನಡುವೆ ಕಲಹಗಳೂ ನಡೆಯುತ್ತಿದ್ದವು ಎನ್ನಲಾಗಿದೆ.

ಮದುವೆಯಾದರೂ ಪರ ಪುರುಷನ ಜೊತೆ ಅನೈತಿಕ ಸಂಬಂಧ: ಪತಿಯಿಂದಲೇ ಪತ್ನಿಯ ಭೀಕರ ಕೊಲೆ
ಪತಿಯಿಂದಲೇ ಪತ್ನಿಯ ಭೀಕರ ಕೊಲೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 28, 2026 | 2:22 PM

Share

ಬಾಗಲಕೋಟೆ, ಜುಲೈ 28: ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ 23 ವರ್ಷದ ಪತ್ನಿಯನ್ನು ಪತಿ ನೇಣು ಬಿಗಿದು ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗಲಗಲಿ ಗ್ರಾಮದಲ್ಲಿ ನಡೆದಿದೆ. ಮೃತೆಯನ್ನು ಭಾಗ್ಯಶ್ರೀ ಜಿಗಲೂರು ಎಂದು ಗುರುತಿಸಲಾಗಿದ್ದು, ಆರೋಪಿ ಪತಿಯನ್ನು ಪ್ರವೀಣ ಜಿಗಲೂರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಪ್ರವೀಣ ಮೊದಲು ಮರದ ತುಂಡಿನಿಂದ ಪತ್ನಿಯ ಮೇಲೆ ಹಲ್ಲೆ ನಡೆಸಿ, ಬಳಿಕ ಮನೆಯಲ್ಲಿ ನೇಣು ಬಿಗಿದಿದ್ದಾನೆ ಎನ್ನಲಾಗಿದೆ.

ದಂಪತಿಯ ನಡುವೆ ಕಳೆದ ಕೆಲವು ತಿಂಗಳಿಂದ ಆಗಾಗ ಜಗಳವಾಗುತ್ತಿತ್ತು. ಇದರಿಂದ ಸುಮಾರು ಎರಡು ತಿಂಗಳ ಹಿಂದೆ ಭಾಗ್ಯಶ್ರೀ ಪತಿಯ ಮನೆಯಿಂದ ಹೊರಬಂದು ತನ್ನ ತಂದೆ-ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದರು. ಬಳಿಕ ಇನ್ನು ಮುಂದೆ ಶಾಂತಿಯುತವಾಗಿ ಬದುಕೋಣ ಎಂದು ಮನವೊಲಿಸಿ ಪ್ರವೀಣ ಪತ್ನಿಯನ್ನು ಮರಳಿ ಮನೆಗೆ ಕರೆತಂದಿದ್ದ. ಆದರೆ ಮನೆಗೆ ಬಂದ ಅದೇ ದಿನ ಈ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಿಲಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಐಷಾರಾಮಿ ಕಾರುಗಳ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ. ವಂಚನೆ: ನಾಲ್ವರು ಆರೋಪಿಗಳ ಬಂಧನ!

ಘಟನೆ ಬಗ್ಗೆ ಬಾಗಲಕೋಟೆ ಎಸ್ಪಿ ಸಿದ್ದಾರ್ಥ್​​ ಗೋಯಲ್​​ ಪ್ರತಿಕ್ರಿಯಿಸಿದ್ದು, ಮೃತ ಭಾಗ್ಯಶ್ರೀ ಮೈಮೇಲೆ ರಾಡ್​​ನಿಂದ ಹೊಡೆದ ಗುರುತುಗಳು ಕಂಡುಬಂದಿವೆ. ಆಕೆ ಕಿರುಕುಳಕ್ಕೆ ನೇಣು ಹಾಕಿಕೊಂಡಿರಬಹುದು ಅಥವಾ ಹಲ್ಲೆ ಮಾಡಿ ಪತಿ ಪ್ರವೀಣ ನೇಣು ಹಾಕಿರಬಹುದು. ಪ್ರಾಥಮಿಕ ತನಿಖೆ ಪ್ರಕಾರ ಭಾಗ್ಯಶ್ರೀಗೆ ಅನೈತಿಕ ಸಂಬಂಧ ಇರುವುದು ಬಹುತೇಕ ಖಚಿತವಾಗಿದೆ. ಆಕೆಯ ತವರು ಮನೆ ಮಹಾಲಿಂಗಪುರದ ವ್ಯಕ್ತಿಯ ಜೊತೆಗೆ ಸಂಪರ್ಕ ಹೊಂದಿದ್ದಾಳೆ. ಆ ವ್ಯಕ್ತಿಯ ಜೊತೆಗಿನ ಆಕೆಯ ಅಶ್ಲೀಲ ವಿಡಿಯೋಗಳು ಪ್ರವೀಣ್​​ ಮೊಬೈಲ್​ನಲ್ಲಿ ಸಿಕ್ಕಿವೆ. ಅವನ್ನು ಆತ ತನ್ನ ಕೆಲ ಸ್ನೇಹಿತರಿಗೆ ಶೇರ್​​ ಮಾಡಿದ್ದಾನೆ. ದಂಪತಿಗೆ 6 ವರ್ಷಗಳ ಹಿಂದೆ ವಿವಾಹವಾಗಿದ್ದು, ಪತ್ನಿಯ ಅನೈತಿಕ ಸಂಬಂಧದ ವಿಚಾರ 2 ವರ್ಷಗಳ ಹಿಂದೆ ಪತಿಗೆ ಗೊತ್ತಾಗಿತ್ತು. ಈ ವಿಚಾರವಾಗಿ ಇಬ್ಬರ ನಡುವೆ ಕಲಹಗಳೂ ನಡೆಯುತ್ತಿದ್ದವು. ಘಟನೆ ವೇಳೆ ಮನೆಯಲ್ಲಿ ದಂಪತಿ ಮಾತ್ರ ಇದ್ದರು. ಸ್ಥಳದಲ್ಲಿ ಬಿಯರ್​​ ಬಾಟಲಿಗಳು ದೊರೆತಿದ್ದು, ಆರೋಪಿ ಮದ್ಯ ಸೇವಿಸಿದ್ದ ಸಾಧ್ಯತೆಯೂ ಇದೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:21 pm, Tue, 28 July 26

Follow Us
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ