AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಕೆರೂರಿನಲ್ಲಿ ಹಿಂದೂ-ಮುಸ್ಲಿಂ ಯುವಕರ ನಡುವೆ ಘರ್ಷಣೆ ಪ್ರಕರಣ; ಯುವತಿಯರನ್ನು ಚೂಡಾಯಿಸಿದ್ದೇ ಗಲಾಟೆಗೆ ಕಾರಣ!

ಕೆರೂರು ಗಲಾಟೆಗೆ ಸಂಬಂಧಿಸಿ 4 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಗುಂಪಿನ 18 ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.

ಬಾಗಲಕೋಟೆ ಕೆರೂರಿನಲ್ಲಿ ಹಿಂದೂ-ಮುಸ್ಲಿಂ ಯುವಕರ ನಡುವೆ ಘರ್ಷಣೆ ಪ್ರಕರಣ; ಯುವತಿಯರನ್ನು ಚೂಡಾಯಿಸಿದ್ದೇ ಗಲಾಟೆಗೆ ಕಾರಣ!
ಕೆರೂರು ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ, ಎಸ್​ಪಿ ಜಯಪ್ರಕಾಶ್
TV9 Web
| Updated By: sandhya thejappa|

Updated on:Jul 07, 2022 | 11:52 AM

Share

ಬಾಗಲಕೋಟೆ: ಹಿಂದೂ (Hindu) ಮತ್ತು ಮುಸ್ಲಿಂ (Muslim) ಯುವಕರ ನಡುವೆ ನಡೆದ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಕೆರೂರು ಪಟ್ಟಣದಲ್ಲಿ 150ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಘಟನೆ ಸಂಬಂಧ ಪೊಲೀಸರು ಇದುವರೆಗೆ ಸುಮಾರು 18 ಜನರನ್ನ ವಶಕ್ಕೆ ಪಡೆದಿದ್ದಾರೆ. ನಾಪತ್ತೆಯಾದ 15ಕ್ಕೂ ಹೆಚ್ಚು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದ್ದು, ಎಸ್​ಪಿ ಜಯಪ್ರಕಾಶ್ ಕೆರೂರು ಪಟ್ಟಣದಲ್ಲೇ ಮೊಕ್ಕಾಂ ಹೂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್​ಪಿ, ಹಳೇ ದ್ವೇಷ ಹಾಗೂ ಯುವತಿಯರನ್ನು ಚೂಡಾಯಿಸಿದ್ದೇ ಇದಕ್ಕೆ ಕಾರಣ. ಸಾಮಾಜಿಕ ಜಾಲತಾಣದಲ್ಲಿ ಯಾರೂ ಕೂಡ ತಪ್ಪು ಸಂದೇಶ ರವಾನೆ ಮಾಡಬಾರದು ಎಂದಿದ್ದಾರೆ.

ಕೆರೂರು ಗಲಾಟೆಗೆ ಸಂಬಂಧಿಸಿ 4 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಗುಂಪಿನ 18 ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ ಬಾಗಲಕೋಟೆ ಎಸ್​ಪಿ ಜಯಪ್ರಕಾಶ್, ನಿನ್ನೆ ಎರಡು ಕೋಮಿನ ಯುವಕರ ಮಧ್ಯೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಒಂದು ಗುಂಪಿನ 3 ಜನ, ಮತ್ತೊಂದು ಗುಂಪಿನ ಓವ೯ ಸೇರಿ ಒಟ್ಟು ನಾಲ್ವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಇದನ್ನೂ ಓದಿ: Veerendra Heggade: ಹುದ್ದೆಗಾಗಿ ಹಂಬಲಿಸಿದವನು ನಾನಲ್ಲ, ಕೇಳಿದವನೂ ಅಲ್ಲ: ವಿರೇಂದ್ರ ಹೆಗ್ಗಡೆ

ಇದನ್ನೂ ಓದಿ
Image
Best Laptops: ಭಾರತದಲ್ಲಿ 40,000 ರೂ. ಒಳಗೆ ಲಭ್ಯವಿರುವ ಬೆಸ್ಟ್ ಲ್ಯಾಪ್​ಟಾಪ್​ಗಳು ಇಲ್ಲಿದೆ ನೋಡಿ
Image
ನಾಲ್ವರು ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ ಗಡಿ ಭದ್ರತಾ ಪಡೆ
Image
Viral Video: ಇಂಗ್ಲೆಂಡ್ ರಾಜಕೀಯ ಬಿಕ್ಕಟ್ಟು: ನೇರಪ್ರಸಾರದ ವೇಳೆ ಮೇಜಿನ ಮೇಲೆ ಕಾಲಿಟ್ಟು ಆರಾಮವಾಗಿ ಕುಳಿತ ಟಿವಿ ನಿರೂಪಕನ ವಿಡಿಯೋ ವೈರಲ್
Image
ಭಾರತಕ್ಕೆ ಮತ್ತೊಂದು ಗೌರವ: ಸುಡಾನ್​ನಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನೆ ಕಮಾಂಡರ್​ ಆಗಿ ಭಾರತೀಯ ಸೇನೆಯ ಅಧಿಕಾರಿ ನೇಮಕ

ಘಟನೆಯಲ್ಲಿ ಒಂದು ಬೈಕ್ ಮತ್ತು ತಳ್ಳುವ ಗಾಡಿ ಸುಟ್ಟಿದ್ದಾರೆ. 6 ಬೈಕ್​ಗಳು ಜಖಂ ಆಗಿವೆ. ಭದ್ರತೆಗಾಗಿ 5 ಐಆರ್​ಬಿ ತುಕುಡಿಗಳು ಸೇರಿದಂತೆ ಹೆಚ್ಚಿನ ಆಫೀಸರ್​ಗಳನ್ನು ನಿಯೋಜಿಸಲಾಗಿದೆ ಎಂದು ಎಸ್​ಪಿ ಜಯಪ್ರಕಾಶ್ ಹೇಳಿದರು.

ಶಾಲಾ-ಕಾಲೇಜುಗಳಿಗೆ ರಜೆ: ನಿನ್ನೆ ರಾತ್ರಿ ಹಿಂದೂ ಮುಸ್ಲಿಂ ಯುವಕರ ನಡುವೆ ಗಲಾಟೆ ನಡೆದಿತ್ತು. ಕೆರೂರು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನೆಲೆಸಿರುವ ಹಿನ್ನೆಲೆ ನಾಳೆ ರಾತ್ರಿ 8 ಗಂಟೆಯವರೆಗೂ 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: Viral Video: ಮ್ಯಾಂಗ್ರೋವ್ ಕಾಡುಗಳ ಮರುಸ್ಥಾಪಿಸುವ ಫಿಶ್​ಬೋನ್ ಚಾನೆಲ್ ಪ್ಲಾಂಟೇಶನ್ ವಿಧಾನದ ವಿಡಿಯೋ ವೈರಲ್

Published On - 11:42 am, Thu, 7 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ