ಬಾಗಲಕೋಟೆ ಕೆರೂರಿನಲ್ಲಿ ಹಿಂದೂ-ಮುಸ್ಲಿಂ ಯುವಕರ ನಡುವೆ ಘರ್ಷಣೆ ಪ್ರಕರಣ; ಯುವತಿಯರನ್ನು ಚೂಡಾಯಿಸಿದ್ದೇ ಗಲಾಟೆಗೆ ಕಾರಣ!

ಕೆರೂರು ಗಲಾಟೆಗೆ ಸಂಬಂಧಿಸಿ 4 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಗುಂಪಿನ 18 ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.

ಬಾಗಲಕೋಟೆ ಕೆರೂರಿನಲ್ಲಿ ಹಿಂದೂ-ಮುಸ್ಲಿಂ ಯುವಕರ ನಡುವೆ ಘರ್ಷಣೆ ಪ್ರಕರಣ; ಯುವತಿಯರನ್ನು ಚೂಡಾಯಿಸಿದ್ದೇ ಗಲಾಟೆಗೆ ಕಾರಣ!
ಕೆರೂರು ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ, ಎಸ್​ಪಿ ಜಯಪ್ರಕಾಶ್
Updated By: sandhya thejappa

Updated on: Jul 07, 2022 | 11:52 AM

ಬಾಗಲಕೋಟೆ: ಹಿಂದೂ (Hindu) ಮತ್ತು ಮುಸ್ಲಿಂ (Muslim) ಯುವಕರ ನಡುವೆ ನಡೆದ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಕೆರೂರು ಪಟ್ಟಣದಲ್ಲಿ 150ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಘಟನೆ ಸಂಬಂಧ ಪೊಲೀಸರು ಇದುವರೆಗೆ ಸುಮಾರು 18 ಜನರನ್ನ ವಶಕ್ಕೆ ಪಡೆದಿದ್ದಾರೆ. ನಾಪತ್ತೆಯಾದ 15ಕ್ಕೂ ಹೆಚ್ಚು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದ್ದು, ಎಸ್​ಪಿ ಜಯಪ್ರಕಾಶ್ ಕೆರೂರು ಪಟ್ಟಣದಲ್ಲೇ ಮೊಕ್ಕಾಂ ಹೂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್​ಪಿ, ಹಳೇ ದ್ವೇಷ ಹಾಗೂ ಯುವತಿಯರನ್ನು ಚೂಡಾಯಿಸಿದ್ದೇ ಇದಕ್ಕೆ ಕಾರಣ. ಸಾಮಾಜಿಕ ಜಾಲತಾಣದಲ್ಲಿ ಯಾರೂ ಕೂಡ ತಪ್ಪು ಸಂದೇಶ ರವಾನೆ ಮಾಡಬಾರದು ಎಂದಿದ್ದಾರೆ.

ಕೆರೂರು ಗಲಾಟೆಗೆ ಸಂಬಂಧಿಸಿ 4 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಗುಂಪಿನ 18 ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ ಬಾಗಲಕೋಟೆ ಎಸ್​ಪಿ ಜಯಪ್ರಕಾಶ್, ನಿನ್ನೆ ಎರಡು ಕೋಮಿನ ಯುವಕರ ಮಧ್ಯೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಒಂದು ಗುಂಪಿನ 3 ಜನ, ಮತ್ತೊಂದು ಗುಂಪಿನ ಓವ೯ ಸೇರಿ ಒಟ್ಟು ನಾಲ್ವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಇದನ್ನೂ ಓದಿ: Veerendra Heggade: ಹುದ್ದೆಗಾಗಿ ಹಂಬಲಿಸಿದವನು ನಾನಲ್ಲ, ಕೇಳಿದವನೂ ಅಲ್ಲ: ವಿರೇಂದ್ರ ಹೆಗ್ಗಡೆ

ಇದನ್ನೂ ಓದಿ
Best Laptops: ಭಾರತದಲ್ಲಿ 40,000 ರೂ. ಒಳಗೆ ಲಭ್ಯವಿರುವ ಬೆಸ್ಟ್ ಲ್ಯಾಪ್​ಟಾಪ್​ಗಳು ಇಲ್ಲಿದೆ ನೋಡಿ
ನಾಲ್ವರು ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ ಗಡಿ ಭದ್ರತಾ ಪಡೆ
Viral Video: ಇಂಗ್ಲೆಂಡ್ ರಾಜಕೀಯ ಬಿಕ್ಕಟ್ಟು: ನೇರಪ್ರಸಾರದ ವೇಳೆ ಮೇಜಿನ ಮೇಲೆ ಕಾಲಿಟ್ಟು ಆರಾಮವಾಗಿ ಕುಳಿತ ಟಿವಿ ನಿರೂಪಕನ ವಿಡಿಯೋ ವೈರಲ್
ಭಾರತಕ್ಕೆ ಮತ್ತೊಂದು ಗೌರವ: ಸುಡಾನ್​ನಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನೆ ಕಮಾಂಡರ್​ ಆಗಿ ಭಾರತೀಯ ಸೇನೆಯ ಅಧಿಕಾರಿ ನೇಮಕ

ಘಟನೆಯಲ್ಲಿ ಒಂದು ಬೈಕ್ ಮತ್ತು ತಳ್ಳುವ ಗಾಡಿ ಸುಟ್ಟಿದ್ದಾರೆ. 6 ಬೈಕ್​ಗಳು ಜಖಂ ಆಗಿವೆ. ಭದ್ರತೆಗಾಗಿ 5 ಐಆರ್​ಬಿ ತುಕುಡಿಗಳು ಸೇರಿದಂತೆ ಹೆಚ್ಚಿನ ಆಫೀಸರ್​ಗಳನ್ನು ನಿಯೋಜಿಸಲಾಗಿದೆ ಎಂದು ಎಸ್​ಪಿ ಜಯಪ್ರಕಾಶ್ ಹೇಳಿದರು.

ಶಾಲಾ-ಕಾಲೇಜುಗಳಿಗೆ ರಜೆ:
ನಿನ್ನೆ ರಾತ್ರಿ ಹಿಂದೂ ಮುಸ್ಲಿಂ ಯುವಕರ ನಡುವೆ ಗಲಾಟೆ ನಡೆದಿತ್ತು. ಕೆರೂರು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನೆಲೆಸಿರುವ ಹಿನ್ನೆಲೆ ನಾಳೆ ರಾತ್ರಿ 8 ಗಂಟೆಯವರೆಗೂ 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: Viral Video: ಮ್ಯಾಂಗ್ರೋವ್ ಕಾಡುಗಳ ಮರುಸ್ಥಾಪಿಸುವ ಫಿಶ್​ಬೋನ್ ಚಾನೆಲ್ ಪ್ಲಾಂಟೇಶನ್ ವಿಧಾನದ ವಿಡಿಯೋ ವೈರಲ್

Published On - 11:42 am, Thu, 7 July 22