AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯರನ್ನೂ ಸೇರಿ ಕಾಂಗ್ರೆಸ್ ನಾಯಕರನ್ನು ಪಾಕಿಸ್ತಾನಕ್ಕೆ ಕಳಿಸುವಂತೆ ಕರೆ ನೀಡಿದ ಶ್ರೀರಾಮಸೇನಾ ಮುಖಂಡ

ಸಿದ್ಧರಾಮಯ್ಯನವರ ಬೆಂಬಲಿಗರು ಕರೆ ಮಾಡಿ ಧಮ್ಕಿ ಹಾಕುತ್ತಿದ್ದಾರೆ. ಜೀವ ಬೆದರಿಕೆ ಹಾಕುತ್ತಿದ್ದಾರೆ. ಅವರನ್ನು ಪಾಕಿಸ್ತಾನಕ್ಕೆ ಕಳಿಸಿದರೆ ಇಲ್ಲಿ ಶ್ರೀರಾಮ, ಲಕ್ಷ್ಮಣ ಆಂಜನೇಯ,ಮೂನ್ನೂರು ಕೋಟಿ ದೇವತೆಗಳು ಇರುತ್ತಾರೆ ಎಂದು ಶ್ರೀರಾಮಸೇನಾ ಬಳ್ಳಾರಿ ವಿಭಾಗದ ಅಧ್ಯಕ್ಷ ಸಂಜೀವ ಮರಡಿ ಜರೆ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯರನ್ನೂ ಸೇರಿ ಕಾಂಗ್ರೆಸ್ ನಾಯಕರನ್ನು ಪಾಕಿಸ್ತಾನಕ್ಕೆ ಕಳಿಸುವಂತೆ ಕರೆ ನೀಡಿದ ಶ್ರೀರಾಮಸೇನಾ ಮುಖಂಡ
ಶ್ರೀರಾಮಸೇನಾ ಬಳ್ಳಾರಿ ವಿಭಾಗದ ಅಧ್ಯಕ್ಷ ಸಂಜೀವ ಮರಡಿ
TV9 Web
| Edited By: |

Updated on:Aug 27, 2021 | 4:29 PM

Share

ಬಾಗಲಕೋಟೆ: ಮಾಜಿ ಸಿಎಂ ಸಿದ್ಧರಾಮಯ್ಯನವರನ್ನೂ ಒಳಗೊಂಡಂತೆ ಕಾಂಗ್ರೆಸ್ ನಾಯಕರನ್ನು ಪಾಕಿಸ್ತಾನಕ್ಕೆ ಕಳುಹಿಸುವಂತೆ ಶ್ರೀರಾಮಸೇನಾ ಬಳ್ಳಾರಿ ವಿಭಾಗದ ಅಧ್ಯಕ್ಷ ಸಂಜೀವ ಮರಡಿ ಕರೆ ಕೊಟ್ಟಿದ್ದಾರೆ.  ಬಾದಾಮಿಯಲ್ಲಿನ ಪುರಾತನ ದೇವಾಲಯಗಳ ತೆರವು ವಿಚಾರವಾಗಿ ವಾಗ್ವಾದ ನಡೆಸಿದ ಅವರು, ಶಾಸಕರ‌ ಕುಮ್ಮಕ್ಕಿನಿಂದ ದೇಗುಲ ಸ್ಥಳಾಂತರಗೊಳಿಸಲು ಪ್ರಯತ್ನ ನಡೆದಿದೆ. ಸಿದ್ಧರಾಮಯ್ಯನವರೇ, ನಿಮಗೆ ತಾಕತ್ತಿದ್ದರೆ ದೇಗುಲ ಸ್ಥಳಾಂತರಿಸಿ ಎಂದು ಬಾದಾಮಿಯಲ್ಲಿ ಮಾತನಾಡಿದ್ದೆ. ಪ್ರಮೋದ ಮುತಾಲಿಕ್ ಅವರ ನೇತೃತ್ವದಲ್ಲಿ ಹೋರಾಟ ಮಾಡುವುದಾಗಿ ಹೇಳಿದ್ದೆ. ಆದರೆ ಈಗ ಸಿದ್ಧರಾಮಯ್ಯನವರ ಬೆಂಬಲಿಗರು ಕರೆ ಮಾಡಿ ಧಮ್ಕಿ ಹಾಕುತ್ತಿದ್ದಾರೆ. ಜೀವ ಬೆದರಿಕೆ ಹಾಕುತ್ತಿದ್ದಾರೆ. ಅವರನ್ನು ಪಾಕಿಸ್ತಾನಕ್ಕೆ ಕಳಿಸಿದರೆ ಇಲ್ಲಿ ಶ್ರೀರಾಮ, ಲಕ್ಷ್ಮಣ ಆಂಜನೇಯ,ಮೂನ್ನೂರು ಕೋಟಿ ದೇವತೆಗಳು ಇರುತ್ತಾರೆ ಎಂದು ಶ್ರೀರಾಮಸೇನಾ ಬಳ್ಳಾರಿ ವಿಭಾಗದ ಅಧ್ಯಕ್ಷ ಸಂಜೀವ ಮರಡಿ ಜರೆ ವಾಗ್ದಾಳಿ ನಡೆಸಿದ್ದಾರೆ.

ಕಾರ್ಕಳದ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ರಾಮಚಂದ್ರಪ್ಪ ಎಂಬ ವ್ಯಕ್ತಿ ಪಾಕಿಸ್ತಾನದ ಪರವಾಗಿ ಮಾತನಾಡಿದ್ದ. ಆ ವ್ಯಕ್ತಿಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ಬೆಂಬಲಿಸಿ ಟ್ವೀಟ್ ಮಾಡಿದ್ದರು. ಆತ ಕಾಂಗ್ರೆಸ್ ಬೆಂಬಲಿಗ ಅಂದರು. ಸಿದ್ಧರಾಮಯ್ಯನವರನ್ನೂ ಸೇರಿಸಿ ಅಂತಹ ಕಾಂಗ್ರೆಸ್ ಮುಖಂಡರನ್ನು ಪಾಕಿಸ್ತಾನಕ್ಕೆ ಕಳುಹಿಸಿ ಎಂದು ಶ್ರೀರಾಮಸೇನಾ ಬಳ್ಳಾರಿ ವಿಭಾಗದ ಅಧ್ಯಕ್ಷ ಸಂಜೀವ ಮರಡಿ ಜರೆ ಹೇಳಿದ್ದಾರೆ.

ಮುಂದುವರೆದ ಮಾತನಾಡಿದ ಅವರು, ಬಾದಾಮಿಯಲ್ಲಿರುವ ಎಲ್ಲ ಪುರಾತನ ದೇವಾಲಯಗಳನ್ನೂ ಉತ್ಖನನ ಮಾಡಬೇಕು. ರಾಜಕಾರಣದ ಕಾರಣಗಳನ್ನು ತ್ಯಜಿಸಿ ಎಲ್ಲ ಹಿಂದೂ ದೇಗುಲಗಳ ಪುನರುತ್ಥಾನ ನಡೆಸಬೆಕು ಎಂದು ಬಾದಾಮಿ ಶಾಸಕರೂ ಆದ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಇದನ್ನೂ ಓದಿ: 

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಸ್ತಾಪಿಸಿ ಸಿದ್ದರಾಮಯ್ಯ ಟೀಕೆ

ಬಾಗಲಕೋಟೆ: ಬಾರ್ ಅಂಡ್ ರೆಸ್ಟೋರೆಂಟ್ ತೆರವುಗೊಳಿಸಲು ಆಗ್ರಹ; ಬಾರ್ ಮುಂದೆ ಮಹಿಳೆಯರಿಂದ ಪ್ರತಿಭಟನೆ

(Bagalkot Sri Ram Sena president Sanjeev says Siddaramaiah and Congress leaders to be sent to Pakistan)

Published On - 4:22 pm, Fri, 27 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?