AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸೋದ್ಯಮ ಇಲಾಖೆ ಹಣ ವಂಚನೆ ಪ್ರಕರಣ: 19 ಆರೋಪಿಗಳ ಬಂಧನ, ಕೇಸ್ ಶೀಘ್ರ ಸಿಐಡಿಗೆ ಹಸ್ತಾಂತರ

ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆ ಹಣ ವಂಚನೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಆರೋಪಿಗಳು ಇತರೆ ನಾಲ್ಕು ಇಲಾಖೆ ಹಣ ಕೂಡ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸದ್ಯ ಅಕ್ರಮ ಹಣ 6 ಕೋಟಿ ತಲುಪಿದ್ದು ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸುವ ಸಾಧ್ಯತೆ ಇದೆ. ಸದ್ಯ ಈಗ 19 ಜನರನ್ನು ಬಂಧಿಸಲಾಗಿದೆ.

ಪ್ರವಾಸೋದ್ಯಮ ಇಲಾಖೆ ಹಣ ವಂಚನೆ ಪ್ರಕರಣ: 19 ಆರೋಪಿಗಳ ಬಂಧನ,  ಕೇಸ್ ಶೀಘ್ರ ಸಿಐಡಿಗೆ ಹಸ್ತಾಂತರ
ಪ್ರವಾಸೋದ್ಯಮ ಇಲಾಖೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 08, 2024 | 11:43 AM

Share

ಬಾಗಲಕೋಟೆ, ಆಗಸ್ಟ್​.08: ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯ(Bagalkot Tourism Department Scam) 2 ಕೋಟಿ 47 ಲಕ್ಷ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಷ್ಟು ಆರೋಪಿಗಳು ಬಲೆಗೆ ಬಿದ್ದಿದ್ದಾರೆ. ಇದುವರೆಗೂ ಒಟ್ಟು 19 ಜನರನ್ನು ಬಂಧಿಸಲಾಗಿದೆ. ಅತಿ ಶೀಘ್ರದಲ್ಲೇ ಸಿಐಡಿಗೆ (CID) ಈ ಪ್ರಕರಣವನ್ನು ಹಸ್ತಾಂತರಿಸಲು ತಯಾರಿ ನಡೆದಿದೆ.

2021 ರಿಂದ 2024 ರವರೆಗೆ 54 ಬಾರಿ 33 ಖಾತೆಗೆ ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಬಾಗಲಕೋಟೆ ಐಡಿಬಿಐ ಬ್ಯಾಂಕ್ ಗುತ್ತಿಗೆ ನೌಕರ ಸೇಲ್ಸ್ ಎಕ್ಸಿಕ್ಯೂಟಿವ್, ಕಿಂಗ್ ಪಿನ್ ಸೂರಜ್ ಸಗರ, ಐಡಿಬಿಐ ಬ್ಯಾಂಕ್ ಅಸಿಸ್ಟೆಂಟ್ ‌ಮ್ಯಾನೇಜರ್‌ ಗಳಾದ ನಿಶಾ ಹಾಗೂ ಸರಸ್ವತಿ, ಬ್ಯಾಂಕ್‌ ಪಬ್ಲಿಕ್‌ ರಿಲೇಷನ್ಶಿಪ್ ಆಫಿಸರ್ ವಿದ್ಯಾಧರ ಹಿರೆಮಠ, ಲೋನ್ ವಿಭಾಗದ ಅಸಿಸ್ಟೆಂಟ್ ಮ್ಯಾನೇಜರ್ ರೋಹಿತ್, ಹಣ ಹಾಕಿಸಿಕೊಂಡ 14 ಜನ ಸೇರಿ ಒಟ್ಟು 19 ಜನರನ್ನು ಬಂಧಿಸಲಾಗಿದೆ.

ಹಣ ಹಾಕಿಸಿಕೊಂಡ‌ ಖಾತೆದಾರರು 30%, 50% ಕಮಿಷನ್ ಪಡೆದು ಹಣ ಸೂರಜ್‌ಗೆ ಮರಳಿಸುತ್ತಿದ್ದರು. ನಂತರ‌ ಸೂರಜ್‌ ಹಾಗೂ ಆರೋಪಿ ಬ್ಯಾಂಕ್‌ ಸಿಬ್ಬಂದಿ ಹಣ ಹಂಚಿಕೊಳ್ತಿದ್ದರು. ಸದ್ಯ ಇದೀಗ ಈ ಘಟನೆ ಸಂಬಂಧ 19 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆ ಹಣ ವಂಚನೆ ಪ್ರಕರಣ; ಮತ್ತೆ ಆರು ಜನರ ಬಂಧನ

ಇನ್ನು ಬಂಧಿತ ಆರೋಪಿಗಳು ಪ್ರವಾಸೋದ್ಯಮ ಇಲಾಖೆ ಜೊತೆಗೆ ಇತರೆ ನಾಲ್ಕು ಇಲಾಖೆ ಹಣ ಕೂಡ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ 79 ಲಕ್ಷ 75 ಸಾವಿರ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ 86 ಲಕ್ಷದ 40 ಸಾವಿರ, ಕೈಮಗ್ಗ ಮತ್ತು ಜವಳಿ ಇಲಾಖೆಯ 18 ಲಕ್ಷದ 15 ಸಾವಿರ, ಹಿಂದುಳಿದ ವರ್ಗ ಕಲ್ಯಾಣ ಇಲಾಖೆಯ 1 ಕೋಟಿ 76 ಲಕ್ಷದ 58 ಸಾವಿರ ಸೇರಿ ಒಟ್ಟು ಐದು ಇಲಾಖೆಯ 6 ಕೋಟಿ ವಂಚನೆ ನಡೆದಿದೆ. ಇತರೆ ಖಾತೆಗಳ ವಂಚನೆಯಲ್ಲೂ ಇವರದ್ದೇ ಕೈವಾಡ ಇರುವುದು ಬಹುತೇಕ ಖಚಿತವಾಗಿದೆ. ವಂಚನೆ ಹಣ ಆರು ಕೋಟಿಗೆ ತಲುಪಿದ ಹಿನ್ನೆಲೆ ಸಿಐಡಿಗೆ ಪ್ರಕರಣವನ್ನು ಹಸ್ತಾಂತರಿಸುವ ಸಾಧ್ಯತೆ ಇದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್