AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಕುಸಿದ ಬಿಳಿಜೋಳದ ಬೆಲೆ, ರೈತರು ಕಂಗಾಲು

ಉತ್ತರ ಕರ್ನಾಟಕದ ಜನರಿಗೆ ರೊಟ್ಟಿ ಊಟ ಅಂದರೆ ಪಂಚಪ್ರಾಣ. ರೊಟ್ಟಿ ಇಲ್ಲದೆ ಉತ್ತರ ಕರ್ನಾಟಕದ ಜನರ ಊಟ ಸಂಪೂರ್ಣವಾಗುವುದಿಲ್ಲ. ಆದ್ದರಿಂದ ಬಿಳಿಜೋಳವನ್ನು ಈ ಭಾಗರ ರೈತರು ಹೆಚ್ಚಾಗಿ ಬೆಳೆಯುತ್ತಾರೆ. ಆದರೆ ಈ ವರ್ಷ ಬಿಳಿ ಜೋಳದ ಬೆಲೆ ಪಾತಾಳಕ್ಕೆ ಕುಸಿದಿದೆ. ಕ್ವಿಂಟಲ್​ಗೆ ಈ ಹಿಂದೆ 6-7 ಸಾವಿರ ರೂ. ಇರುತ್ತಿದ್ದ ಬೆಲೆ, ಈಗ ದಿಢೀರ್​ನೆ ಕುಸಿದಿದೆ. ಇದರಿಂದ ರೈತರಿಗೆ ಹಾಕಿದ ಬಂಡವಾಳವೂ ಬಾರದಂತಾಗಿದೆ. ಕೆಲ ರೈತರು ಬಂದಷ್ಟು ಬರಲಿ ಅಂತ ಮಾರಾಟ ಮಾಡಿದರೆ, ಎಷ್ಟೋ ರೈತರು ಬೆಲೆ ನಿರೀಕ್ಷೆಯಲ್ಲಿ ಮಾರಾಟ ಮಾಡದೆ ನೂರಾರು ಕ್ವಿಂಟಲ್ ಬಿಳಿಜೋಳವನ್ನು ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದಾರೆ.

ಬಾಗಲಕೋಟೆ: ಕುಸಿದ ಬಿಳಿಜೋಳದ ಬೆಲೆ, ರೈತರು ಕಂಗಾಲು
ಬಿಳಿಜೋಳ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Mar 24, 2025 | 7:37 AM

Share

ಬಾಗಲಕೋಟೆ, ಮಾರ್ಚ್​ 24: ಬಾಗಲಕೋಟೆ (Bagalkot) ಜಿಲ್ಲೆಯಲ್ಲಿ ಬಿಳಿಜೋಳ (White Maize) ಪ್ರಮುಖ ಬೆಳೆಯಾಗಿದೆ. ಆದರೆ, ಬಿಳಿಜೋಳ ಬೆಲೆ ಈಗ ದಿಢೀರ್ ಪಾತಾಳಕ್ಕೆ ಕುಸಿದಿದ್ದು ರೈತರ ಮುಖ ಕಪ್ಪಾಗಿದೆ. 70 ಕೆಜಿ ಪ್ಯಾಕೆಟ್ ಗೆ 1800ರಿಂದ 2500 ರೂ ಇದ್ರೆ ಕ್ವಿಂಟಲ್ ಬಿಳಿಜೋಳಕ್ಕೆ 2500 ಹೆಚ್ಚೆಂದರೆ 3 ಸಾವಿರ ಬೆಲೆ ಇದೆ. ಮೇಲಾಗಿ ಮಾರುಕಟ್ಟೆಗೆ ಬರುವ ಜೋಳದ ಪ್ರಮಾಣ ಕೂಡ ಕಡಿಮೆಯಾಗಿದೆ. ಬೆಲೆ ಇಳಿಕೆಯಿಂದ ರೈತರು ಜೋಳ ಬದಲಿಗೆ ಕಡಲೆ ಕಡೆ ಹೆಚ್ಚು ಗಮನ ಹರಿಸಿದ್ದು, ಮಾರುಕಟ್ಟೆಯಲ್ಲಿ ಜೋಳದ ವ್ಯಾಪಾಸ್ಥರಿಗೂ ಹೆಚ್ಚು ಜೋಳ ಸಿಗುತ್ತಿಲ್ಲ. ಜೊತೆಗೆ ಉತ್ತಮ ಗುಣಮಟ್ಟದ ಜೋಳ ಸಿಗುತ್ತಿಲ್ಲವಂತೆ. ಇದರಿಂದ ನಮಗೂ ಹೆಚ್ಚು ಲಾಭಾಂಶ ಸಿಗುತ್ತಿಲ್ಲ ಎಂದು ವ್ಯಾಪಾರಸ್ಥರು ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ಪ್ರತಿ ವರ್ಷ ಹಿಂಗಾರಿನಲ್ಲಿ ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿಳಿಜೋಳ ಬೆಳೆಯತ್ತಿದ್ದರು. 2-3 ವರ್ಷದ ಹಿಂದೆ ಬಿಳಿಜೋಳಕ್ಕೆ ಒಂದು ಕ್ವಿಂಟಲ್​ಗೆ 7-8 ಸಾವಿರ ರೂ. ಬೆಲೆ ಸಿಗುತ್ತಿತ್ತು. ಆದರೆ, ಈಗ ಕ್ವಿಂಟಲ್​ಗೆ 2500 ರಿಂದ 3000 ಕ್ಕೆ ಬೆಲೆ ಇಳಿಕೆಯಾಗಿದೆ. ಈ ಮಧ್ಯೆ ಬೆಲೆ ಮೇಲಿಂದ ಮೇಲೆ ಇಳಿಕೆಯಾಗುತ್ತಿರುವುದರಿಂದ ರೈತರು ಬಿಳಿಜೋಳ ಬಿತ್ತನೆ ಮಾಡುವುದನ್ನು ಕಡಿಮೆ ಮಾಡಿದ್ದಾರೆ. ಇದರಿಂದ ಬಿಳಿಜೋಳ ಬೆಳೆಯುವ ಪ್ರದೇಶ 70 ಸಾವಿರ ಹೆಕ್ಟೇರ್​ಗೆ ಇಳಿಕೆಯಾಗಿದೆ. ಬೆಲೆ ಇಳಿಕೆ ಬಿಳಿ ಜೋಳದಿಂದ ರೈತರು ವಿಮುಖವಾಗುವಂತೆ ಮಾಡಿದೆ.

ಬಿಳಿ ಜೋಳವನ್ನು ಬೆಳೆಯಲು ಎಕರೆಗೆ 15ರಿಂದ 20 ಸಾವಿರ ರೂ. ಖರ್ಚು ಮಾಡುತ್ತಾರೆ. ಎಕರೆಗೆ ಬಿಳಿಜೋಳ 3-4 ಕ್ವಿಂಟಲ್ ಬೆಳೆಯಬಹುದು. ಆದರೆ ಈ ಬೆಲೆಯಲ್ಲಿ ಹಾಕಿದ ಬಂಡವಾಳ ಕೂಡ ಬಾರದಂತಾಗಿದೆ. ಆದರೂ ಕೆಲ ರೈತರು ಬಂದಷ್ಟು ಬರಲಿ ಅಂತ ಮಾರಾಟ ಮಾಡಿದರೆ ಕೆಲ ರೈತರು ಮನೆಯಲ್ಲಿ ಜೋಳ ಇಟ್ಟುಕೊಂಡು ಕೂತಿದ್ದಾರೆ.

ಇದನ್ನೂ ಓದಿ
Image
ಹಳ್ಳಿ ಬಾಹುಬಲಿಯ ಸಾಹಸ: ಏಕಾಂಗಿಯಾಗಿ 30 ಟನ್ ಕಬ್ಬು ಲೋಡ್ ಮಾಡಿದ ಯುವಕ
Image
7 ವರ್ಷಗಳ ಹಿಂದೆ ಕಾಣೆಯಾಗಿದ್ದ ಬಾದಾಮಿ ಮಹಿಳೆ ಸಿನಿಮೀಯ ರೀತಿಯಲ್ಲಿ ವಾಪಸ್
Image
ಬಾಗಲಕೋಟೆ ಜಿಲ್ಲೆಯ ಜಾನಪದ ಗಾಯಕ ವೆಂಕಪ್ಪ ಅಂಬಾಜಿಗೆ ಒಲಿದ ಪದ್ಮಶ್ರೀ
Image
ಕನ್ಯಾಕುಮಾರಿ ಟು ಕಾಶ್ಮೀರ: ಸ್ಕೂಟಿಲಿ 8033 ಕಿಮೀ ರೈಡ್​ ಮಾಡಿದ ಯುವತಿ

ಇದನ್ನೂ ನೋಡಿ: ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!

ಬಾಗಲಕೋಟೆಯ ಬಸಪ್ಪ ಯಳ್ಳಿಗುತ್ತಿ ಎಂಬ ರೈತರು ಎಂಬುವರು ಬಂಡವಾಳದ ತಕ್ಕ ಬೆಲೆ ಸಿಗದ ಕಾರಣ ಮನೆಯಲ್ಲಿ ಬರೊಬ್ಬರಿ 150 ಕ್ವಿಂಟಲ್ ಬಿಳಿಜೋಳ ಇಟ್ಟುಕೊಂಡು ಕೂತಿದ್ದಾರೆ. ಒಳ್ಳೆಯ ಬೆಲೆ ಬರಬಹುದೆಂಬ ನಿರೀಕ್ಷೆ ಒಂದು ಕಡೆಯಾದರೇ, ಜೋಳಕ್ಕೆ ನುಸಿ ಹತ್ತುವ ಚಿಂತೆ ಕೂಡ ಶುರುವಾಗಿದೆ. ಸರ್ಕಾರ 3421 ರೂ. ಬೆಂಬಲ ಬೆಲೆ ಘೋಷಣೆ ಮಾಡಿದೆ ಆದರೆ, ಕೇವಲ ಘೋಷಣೆ ಮಾಡಿದರೆ ಏನು ಬಂತು ಆದಷ್ಟು ಬೇಗ ಖರೀದಿ ಕೆಂದ್ರ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ಬಿಳಿಜೋಳ ಬೆಲೆ ಇಳಿಕೆ ರೈತರನ್ನು ಚಿಂತೆಗೀಡು ಮಾಡಿದ್ದು, ಬೆಲೆ ಇಳಿಕೆಯಿಂದ ಬಿಳಿಜೋಳ ಬಿತ್ತನೆ ಪ್ರಮಾಣವೇ ಕಡಿಮೆಯಾಗುತ್ತಿರುವುದು ವಿಪರ್ಯಾಸವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್