AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಕುಸಿದ ಬಿಳಿಜೋಳದ ಬೆಲೆ, ರೈತರು ಕಂಗಾಲು

ಉತ್ತರ ಕರ್ನಾಟಕದ ಜನರಿಗೆ ರೊಟ್ಟಿ ಊಟ ಅಂದರೆ ಪಂಚಪ್ರಾಣ. ರೊಟ್ಟಿ ಇಲ್ಲದೆ ಉತ್ತರ ಕರ್ನಾಟಕದ ಜನರ ಊಟ ಸಂಪೂರ್ಣವಾಗುವುದಿಲ್ಲ. ಆದ್ದರಿಂದ ಬಿಳಿಜೋಳವನ್ನು ಈ ಭಾಗರ ರೈತರು ಹೆಚ್ಚಾಗಿ ಬೆಳೆಯುತ್ತಾರೆ. ಆದರೆ ಈ ವರ್ಷ ಬಿಳಿ ಜೋಳದ ಬೆಲೆ ಪಾತಾಳಕ್ಕೆ ಕುಸಿದಿದೆ. ಕ್ವಿಂಟಲ್​ಗೆ ಈ ಹಿಂದೆ 6-7 ಸಾವಿರ ರೂ. ಇರುತ್ತಿದ್ದ ಬೆಲೆ, ಈಗ ದಿಢೀರ್​ನೆ ಕುಸಿದಿದೆ. ಇದರಿಂದ ರೈತರಿಗೆ ಹಾಕಿದ ಬಂಡವಾಳವೂ ಬಾರದಂತಾಗಿದೆ. ಕೆಲ ರೈತರು ಬಂದಷ್ಟು ಬರಲಿ ಅಂತ ಮಾರಾಟ ಮಾಡಿದರೆ, ಎಷ್ಟೋ ರೈತರು ಬೆಲೆ ನಿರೀಕ್ಷೆಯಲ್ಲಿ ಮಾರಾಟ ಮಾಡದೆ ನೂರಾರು ಕ್ವಿಂಟಲ್ ಬಿಳಿಜೋಳವನ್ನು ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದಾರೆ.

ಬಾಗಲಕೋಟೆ: ಕುಸಿದ ಬಿಳಿಜೋಳದ ಬೆಲೆ, ರೈತರು ಕಂಗಾಲು
ಬಿಳಿಜೋಳ
ರವಿ ಹೆಚ್ ಮೂಕಿ, ಕಲಘಟಗಿ
| Edited By: ವಿವೇಕ ಬಿರಾದಾರ|

Updated on: Mar 24, 2025 | 7:37 AM

Share

ಬಾಗಲಕೋಟೆ, ಮಾರ್ಚ್​ 24: ಬಾಗಲಕೋಟೆ (Bagalkot) ಜಿಲ್ಲೆಯಲ್ಲಿ ಬಿಳಿಜೋಳ (White Maize) ಪ್ರಮುಖ ಬೆಳೆಯಾಗಿದೆ. ಆದರೆ, ಬಿಳಿಜೋಳ ಬೆಲೆ ಈಗ ದಿಢೀರ್ ಪಾತಾಳಕ್ಕೆ ಕುಸಿದಿದ್ದು ರೈತರ ಮುಖ ಕಪ್ಪಾಗಿದೆ. 70 ಕೆಜಿ ಪ್ಯಾಕೆಟ್ ಗೆ 1800ರಿಂದ 2500 ರೂ ಇದ್ರೆ ಕ್ವಿಂಟಲ್ ಬಿಳಿಜೋಳಕ್ಕೆ 2500 ಹೆಚ್ಚೆಂದರೆ 3 ಸಾವಿರ ಬೆಲೆ ಇದೆ. ಮೇಲಾಗಿ ಮಾರುಕಟ್ಟೆಗೆ ಬರುವ ಜೋಳದ ಪ್ರಮಾಣ ಕೂಡ ಕಡಿಮೆಯಾಗಿದೆ. ಬೆಲೆ ಇಳಿಕೆಯಿಂದ ರೈತರು ಜೋಳ ಬದಲಿಗೆ ಕಡಲೆ ಕಡೆ ಹೆಚ್ಚು ಗಮನ ಹರಿಸಿದ್ದು, ಮಾರುಕಟ್ಟೆಯಲ್ಲಿ ಜೋಳದ ವ್ಯಾಪಾಸ್ಥರಿಗೂ ಹೆಚ್ಚು ಜೋಳ ಸಿಗುತ್ತಿಲ್ಲ. ಜೊತೆಗೆ ಉತ್ತಮ ಗುಣಮಟ್ಟದ ಜೋಳ ಸಿಗುತ್ತಿಲ್ಲವಂತೆ. ಇದರಿಂದ ನಮಗೂ ಹೆಚ್ಚು ಲಾಭಾಂಶ ಸಿಗುತ್ತಿಲ್ಲ ಎಂದು ವ್ಯಾಪಾರಸ್ಥರು ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ಪ್ರತಿ ವರ್ಷ ಹಿಂಗಾರಿನಲ್ಲಿ ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿಳಿಜೋಳ ಬೆಳೆಯತ್ತಿದ್ದರು. 2-3 ವರ್ಷದ ಹಿಂದೆ ಬಿಳಿಜೋಳಕ್ಕೆ ಒಂದು ಕ್ವಿಂಟಲ್​ಗೆ 7-8 ಸಾವಿರ ರೂ. ಬೆಲೆ ಸಿಗುತ್ತಿತ್ತು. ಆದರೆ, ಈಗ ಕ್ವಿಂಟಲ್​ಗೆ 2500 ರಿಂದ 3000 ಕ್ಕೆ ಬೆಲೆ ಇಳಿಕೆಯಾಗಿದೆ. ಈ ಮಧ್ಯೆ ಬೆಲೆ ಮೇಲಿಂದ ಮೇಲೆ ಇಳಿಕೆಯಾಗುತ್ತಿರುವುದರಿಂದ ರೈತರು ಬಿಳಿಜೋಳ ಬಿತ್ತನೆ ಮಾಡುವುದನ್ನು ಕಡಿಮೆ ಮಾಡಿದ್ದಾರೆ. ಇದರಿಂದ ಬಿಳಿಜೋಳ ಬೆಳೆಯುವ ಪ್ರದೇಶ 70 ಸಾವಿರ ಹೆಕ್ಟೇರ್​ಗೆ ಇಳಿಕೆಯಾಗಿದೆ. ಬೆಲೆ ಇಳಿಕೆ ಬಿಳಿ ಜೋಳದಿಂದ ರೈತರು ವಿಮುಖವಾಗುವಂತೆ ಮಾಡಿದೆ.

ಬಿಳಿ ಜೋಳವನ್ನು ಬೆಳೆಯಲು ಎಕರೆಗೆ 15ರಿಂದ 20 ಸಾವಿರ ರೂ. ಖರ್ಚು ಮಾಡುತ್ತಾರೆ. ಎಕರೆಗೆ ಬಿಳಿಜೋಳ 3-4 ಕ್ವಿಂಟಲ್ ಬೆಳೆಯಬಹುದು. ಆದರೆ ಈ ಬೆಲೆಯಲ್ಲಿ ಹಾಕಿದ ಬಂಡವಾಳ ಕೂಡ ಬಾರದಂತಾಗಿದೆ. ಆದರೂ ಕೆಲ ರೈತರು ಬಂದಷ್ಟು ಬರಲಿ ಅಂತ ಮಾರಾಟ ಮಾಡಿದರೆ ಕೆಲ ರೈತರು ಮನೆಯಲ್ಲಿ ಜೋಳ ಇಟ್ಟುಕೊಂಡು ಕೂತಿದ್ದಾರೆ.

ಇದನ್ನೂ ಓದಿ
Image
ಹಳ್ಳಿ ಬಾಹುಬಲಿಯ ಸಾಹಸ: ಏಕಾಂಗಿಯಾಗಿ 30 ಟನ್ ಕಬ್ಬು ಲೋಡ್ ಮಾಡಿದ ಯುವಕ
Image
7 ವರ್ಷಗಳ ಹಿಂದೆ ಕಾಣೆಯಾಗಿದ್ದ ಬಾದಾಮಿ ಮಹಿಳೆ ಸಿನಿಮೀಯ ರೀತಿಯಲ್ಲಿ ವಾಪಸ್
Image
ಬಾಗಲಕೋಟೆ ಜಿಲ್ಲೆಯ ಜಾನಪದ ಗಾಯಕ ವೆಂಕಪ್ಪ ಅಂಬಾಜಿಗೆ ಒಲಿದ ಪದ್ಮಶ್ರೀ
Image
ಕನ್ಯಾಕುಮಾರಿ ಟು ಕಾಶ್ಮೀರ: ಸ್ಕೂಟಿಲಿ 8033 ಕಿಮೀ ರೈಡ್​ ಮಾಡಿದ ಯುವತಿ

ಇದನ್ನೂ ನೋಡಿ: ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!

ಬಾಗಲಕೋಟೆಯ ಬಸಪ್ಪ ಯಳ್ಳಿಗುತ್ತಿ ಎಂಬ ರೈತರು ಎಂಬುವರು ಬಂಡವಾಳದ ತಕ್ಕ ಬೆಲೆ ಸಿಗದ ಕಾರಣ ಮನೆಯಲ್ಲಿ ಬರೊಬ್ಬರಿ 150 ಕ್ವಿಂಟಲ್ ಬಿಳಿಜೋಳ ಇಟ್ಟುಕೊಂಡು ಕೂತಿದ್ದಾರೆ. ಒಳ್ಳೆಯ ಬೆಲೆ ಬರಬಹುದೆಂಬ ನಿರೀಕ್ಷೆ ಒಂದು ಕಡೆಯಾದರೇ, ಜೋಳಕ್ಕೆ ನುಸಿ ಹತ್ತುವ ಚಿಂತೆ ಕೂಡ ಶುರುವಾಗಿದೆ. ಸರ್ಕಾರ 3421 ರೂ. ಬೆಂಬಲ ಬೆಲೆ ಘೋಷಣೆ ಮಾಡಿದೆ ಆದರೆ, ಕೇವಲ ಘೋಷಣೆ ಮಾಡಿದರೆ ಏನು ಬಂತು ಆದಷ್ಟು ಬೇಗ ಖರೀದಿ ಕೆಂದ್ರ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ಬಿಳಿಜೋಳ ಬೆಲೆ ಇಳಿಕೆ ರೈತರನ್ನು ಚಿಂತೆಗೀಡು ಮಾಡಿದ್ದು, ಬೆಲೆ ಇಳಿಕೆಯಿಂದ ಬಿಳಿಜೋಳ ಬಿತ್ತನೆ ಪ್ರಮಾಣವೇ ಕಡಿಮೆಯಾಗುತ್ತಿರುವುದು ವಿಪರ್ಯಾಸವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More