ಬಾಲ್​ಗಾಗಿ ಕಿತ್ತಾಟ: ಮುಖ, ಮೂತಿ ನೋಡದೆ ಶಿಕ್ಷಕನಿಗೆ ಬಿಯರ್ ಬಾಟ್ಲಿಯಿಂದ ಹೊಡೆದ ಯುವಕ

ಜಮಖಂಡಿ ತಾಲೂಕಿನ ಸಾವಳಗಿಯಲ್ಲಿ ಕ್ರಿಕೆಟ್ ಬಾಲ್ ವಿಚಾರಕ್ಕೆ ಯುವಕನೊಬ್ಬ ಶಿಕ್ಷಕನಿಗೆ ಬಿಯರ್ ಬಾಟಲಿಯಿಂದ ಇರಿದಿದ್ದಾನೆ. 36 ವರ್ಷದ ಶಿಕ್ಷಕ ರಾಮಪ್ಪ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದೆ. ಬಾಟಲಿಯಿಂದ ಇರಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಗ್ರಾಮದಲ್ಲಿ ಆಘಾತ ಹುಟ್ಟಿಸಿದೆ.

ಬಾಲ್​ಗಾಗಿ ಕಿತ್ತಾಟ: ಮುಖ, ಮೂತಿ ನೋಡದೆ ಶಿಕ್ಷಕನಿಗೆ ಬಿಯರ್ ಬಾಟ್ಲಿಯಿಂದ ಹೊಡೆದ ಯುವಕ
ಆರೋಪಿ ಪವನ್​
Edited By: ವಿವೇಕ ಬಿರಾದಾರ

Updated on: May 14, 2025 | 10:40 PM

ಬಾಗಲಕೋಟೆ, ಮೇ 14: ಕ್ರಿಕೆಟ್ ಬಾಲ್ ವಿಚಾರಕ್ಕೆ ಜಗಳ ತೆಗೆದು ಯುವಕ ಒಡೆದ ಬಿಯರ್​ (Beer) ಬಾಟಲ್​ನಿಂದ ಶಿಕ್ಷಕನಿಗೆ (Teacher) ಇರಿದ ಘಟನೆ ಜಮಖಂಡಿ (Jamakandi) ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಶಿಕ್ಷಕ ರಾಮಪ್ಪ ಪೂಜಾರಿ (36) ಎಂಬುವರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪವನ್ ಜಾಧವ್ (21) ಬಾಟಲ್​ನಿಂದ ಇರಿದಿರುವ ಯುವಕ.

ಬಿಎಲ್​ಡಿಇ ಖಾಸಗಿ ಸಂಸ್ಥೆಯ ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ ರಾಮಪ್ಪ ಪೂಜಾರಿ ಮತ್ತು ಪವನ್ ಜಾಧವ್ ಅಕಪಕ್ಕದ ಮನೆಯವರು. ಕ್ರಿಕೆಟ್ ಆಡುವಾಗ ಬಾಲ್ ಶಿಕ್ಷಕ ರಾಮಪ್ಪ ಪೂಜಾರಿ ಮನೆ‌ಯಲ್ಲಿ ಬಿದ್ದಿತ್ತು. ನಿಮ್ಮ ಮನೆಯಲ್ಲಿ ಬಾಲ್ ಹೋಗಿದೆ ಕೊಡಿ ಎಂದು ಆರೋಪಿ ಪವನ್​ ಜಾಧವ್​, ರಾಮಪ್ಪ ಪೂಜಾರಿಯವರಿಗೆ ಕೇಳಿದ್ದಾರೆ. ಅದಕ್ಕೆ, ರಾಮಪ್ಪ ಪೂಜಾರಿ ಇಲ್ಲಿ ಬಾಲ್ ಬಂದಿಲ್ಲ ಎಂದಿದ್ದಾರೆ. ಈ ವಿಚಾರವಾಗಿ ಇಬ್ಬರ ನಡುವೆ ಕಿರಿಕ್ ಆಗಿದೆ.

ನಂತರ ಶಾಲೆಗೆ ಬಂದ ಪವನ್​ ಸ್ಟಾಫ್​ ರೂಂ ಒಳಗೆ ನುಗ್ಗಿ ಬಿಯರ್​ ಬಾಟಲ್​ನಿಂದ ಶಿಕ್ಷಕ ರಾಮಪ್ಪ ಪೂಜಾರಿಗೆ ಇರಿದಿದ್ದಾನೆ. ಇದರಿಂದ ಗಾಯಗೊಂಡ ರಾಮಪ್ಪ ಪೂಜಾರಿಯವರನ್ನು ಸಾವಳಗಿಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಳಗಿ ಠಾಣೆ ಪೊಲೀಸರು ಪವನ್​ ಜಾದವ್​ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ
ಆತ್ಮ ಓಡಿಸುತ್ತೇನೆಂದು ಹೋಟೆಲ್​ನಲ್ಲಿ ಪೂಜೆ: ಮಹಿಳೆಗೆ 5 ಲಕ್ಷ ರೂ. ವಂಚನೆ
ಮಗನಿಂದಲೇ ಹತ್ಯೆಯಾದ ಉದ್ಯಮಿ: ವಿದ್ಯುತ್ ಶಾಕ್ ಕಥೆ ಕಟ್ಟಿ ಸಿಕ್ಕಿಬಿದ್ದ
ಕೊಪ್ಪಳದಲ್ಲಿ ಟಾಟಾ ಏಸ್​ ವಾಹನ ಪಲ್ಟಿಯಾಗಿ ನರೇಗಾ ಕಾರ್ಮಿಕರಿಗೆ ಗಾಯ
ಹಾಸನದ ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಕುಡುಗೋಲಿನಿಂದ ಕೊಚ್ಚಿ ಪತ್ನಿಯನ್ನು ಕೊಂದ ಪತಿ

ಬೀದರ್​: ಕುಡುಗೋಲಿನಿಂದ ಕೊಚ್ಚಿ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ಕಮಲನಗರ ತಾಲೂಕಿನ ಭೋಪಾಳಗಡ ಗ್ರಾಮದಲ್ಲಿ ನಡೆದಿದೆ. ಭೋಪಾಳಗಡ ಗ್ರಾಮದಲ್ಲಿ ನಿರ್ಮಲಾ (35) ಮೃತ ದುರ್ದೈವಿ. ಅಶೋಕ್ ಶಟಕಾರ ಕೊಲೆ ಮಾಡಿದ ಆರೋಪಿ.

ನಿರ್ಮಲಾ ಮತ್ತು ಅಶೋಕ್ ವಿವಾಹವಾಗಿ 20 ವರ್ಷವಾಗಿದೆ. ಆರೋಪಿ ಅಶೋಕ್ ನಿತ್ಯ ಹೆಂಡತಿ ಜೊತೆ ಜಗಳವಾಡುತ್ತಿದ್ದರು. ಗಂಡನ ಕಿರಿಕಿರಿಗೆ ಬೇಸತ್ತು ಪತ್ನಿ ನಿರ್ಮಲಾ ಬೆಳಕೋಣಿ ಗ್ರಾಮದಲ್ಲಿನ ತವರು ಸೇರಿದ್ದರು. 4-5 ದಿನದ ಹಿಂದಷ್ಟೇ ಮೃತ ನಿರ್ಮಲಾ ಮಕ್ಕಳ ಸಲುವಾಗಿ ಪತಿ ಮನೆಗೆ ಮರಳಿದ್ದರು. ಬುಧವಾರ (ಮೇ.14) ಪುನಃ ಗಂಡ-ಹೆಂಡತಿ ಮಧ್ಯೆ ಜಗಳ ನಡೆದಿದೆ.

ಇದನ್ನೂ ಓದಿ: ರಾಮನಗರದಲ್ಲಿ ಅಮಾನುಷ ಕೃತ್ಯ: ಅತ್ಯಾಚಾರ ಎಸಗಿ ಮೂಕ ಬಾಲಕಿ ಕೊಲೆ ಆರೋಪ

ಈ ವೇಳೆ ಅಶೋಕ್ ಶಟಕಾರ ಕುಡುಗೋಲಿನಿಂದ ಪತ್ನಿ ನಿರ್ಮಲಾರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಮೃತ ನಿರ್ಮಲಾ ತಮ್ಮ ಮಹಾದೇವ ಆರೋಪಿ ಅಶೋಕ್ ಮತ್ತು ಆತನ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ್ದಾರೆ. ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us