AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಆ ದೇವತೆಯ ಸನ್ನಿಧಾನದಲ್ಲಿ ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು ಮಾಯಾ; ಎಲ್ಲಿದೆ ದೇವಸ್ಥಾನ ಅಂತೀರಾ? ಇಲ್ಲಿದೆ ವಿವರ

ಆ ದೇವತೆಯ ಸನ್ನಿಧಾನದಲ್ಲಿ ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ. ಅದನ್ನು ಸೇವಿಸಿದರೆ ಕಾಯಿಲೆಗಳು ಮಾಯವಾಗುತ್ತವಂತೆ. ಮಕ್ಕಳಾಗದವರ ಒಡಲು ತುಂಬುತ್ತದಂತೆ. ದೇವರ ಸನ್ನಿಧಾನದಲ್ಲಿ ಸಿಗುವ ಆ ಅಂಬಲಿ ಪ್ರಸಾದಕ್ಕೆ ಭಕ್ತರು ಭಕ್ತಿಯಿಂದ ದಿನಗಟ್ಟಲೆ ಕಾಣುತ್ತಾರೆ. ಅಷ್ಟಕ್ಕೂ ಆ ದೇವತೆ ಯಾರು?ಎಲ್ಲಿದೆ ಆ ದೇವಸ್ಥಾನ ಇಲ್ಲಿದೆ ನೋಡಿ ಡಿಟೇಲ್ಸ್.

ಬಾಗಲಕೋಟೆ: ಆ ದೇವತೆಯ ಸನ್ನಿಧಾನದಲ್ಲಿ ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು ಮಾಯಾ; ಎಲ್ಲಿದೆ ದೇವಸ್ಥಾನ ಅಂತೀರಾ? ಇಲ್ಲಿದೆ ವಿವರ
ಬಾಗಲಕೋಟೆ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 08, 2023 | 10:56 PM

ಬಾಗಲಕೋಟೆ, ಸೆ.08: ಅದೊಂದು ಬೆಟ್ಟದಲ್ಲಿ ವಿರಾಜಮಾನರಾಗಿರುವ ಭುವನೇಶ್ವರಿ ದೇವಿ(Bhuvaneshwari Devi). ತಾಯಿ ಭುವನೇಶ್ವರಿ ದರ್ಶನ ಪಡೆಯಲು ಸಹಸ್ರಾರು ಭಕ್ತರು, ಎಲ್ಲಕ್ಕಿಂತ ಹೆಚ್ಚಾಗಿ ದೇವಿಯ ಅಮೃತೌಷಧ ಅಂಬಲಿ ಸೇವನೆ. ಈ ದೃಶ್ಯ ಕಂಡು ಬಂದಿದ್ದು ಬಾಗಲಕೋಟೆ (Bagalakote) ಜಿಲ್ಲೆಯ ಬೀಳಗಿ ತಾಲ್ಲೂಕಿನ ಕುಂದರಗಿ ಗ್ರಾಮದ ಭುವನೇಶ್ವರಿ ದೇವಿ ಸನ್ನಿಧಾನದಲ್ಲಿ. ಹೌದು, ಸಮಾಜದಲ್ಲಿನ ಎಲ್ಲ ಭರವಸೆ ಕೈ ಕೊಟ್ಟಾಗ ದೇವರ ಪಾದವೊಂದೆ ಗತಿ. ಕಾಯಿಲೆ, ಅನಾರೋಗ್ಯಕ್ಕೆ ತುತ್ತಾದವರು, ಮಕ್ಕಳಾಗದವರು ಎಲ್ಲರೂ ವೈದ್ಯರ ಪ್ರಯತ್ನ ಕೈ ಮೀರಿದಾಗ ಹೋಗೋದು ದೇವರ ಕಡೆಗೆ. ಅಷ್ಟೊಂದು ನಂಬಿಕೆ ದೇವರ ಮೇಲೆ ನಮ್ಮ ಜನರದ್ದು.

ಇನ್ನು ಇಲ್ಲಿ ಇಂತಹ ಎಲ್ಲ ಜನರಿಗೆ ನೊಂದು ಬೆಂದವರಿಗೆ ಭುವನೇಶ್ವರಿ ತಾಯಿಯೇ ಆಸರೆ. ಕುಂದರಗಿ ಗ್ರಾಮದ ಸುರಗಿರಿ ಬೆಟ್ಟದಲ್ಲಿ ನೆಲೆಸಿರುವ ಭುವನೇಶ್ವರಿ ತಾಯಿ ಭಕ್ತರ ಕಲ್ಪತರುವಾಗಿದ್ದಾಳೆ. ಇಲ್ಲಿ ಪ್ರತಿ ಶುಕ್ರವಾರ ದೇವಿ ಆರಾಧನೆ ಪೂಜೆ ಮಂತ್ರಪಠಣೆ ಅಭಿಷೇಕ ನಡೆಯುತ್ತದೆ. ಅಂದು ಬಂದ ಭಕ್ತರಿಗೆ ಇಲ್ಲಿ ಅಂಬಲಿ ಪ್ರಸಾದ ಕೊಡಲಾಗುತ್ತದೆ. ಈ ಅಂಬಲಿ ಔಷಧವಿದ್ದಂತೆ, ಯಾವುದೇ ಕಾಯಿಲೆ , ಮಾಹಾಮಾರಿ ಬಂದರೂ ಅಂಬಲಿ ಸೇವಿಸಿದರೆ ವಾಸಿಯಾಗುತ್ತದೆ. ಮಕ್ಕಳಾಗದವರು ಅಂಬಲಿ ಸೇವಿಸಿದರೆ ಮಕ್ಕಳು ಕೂಡ ಅಸಗುತ್ತವೆ. ಭಕ್ತರ ಒಟ್ಟಾರೆ ಎಲ್ಲ ಬೇಡಿಕೆ ಈಡೇರುತ್ತವರ ಎಂಬುದು ಭಕ್ತರ ನಂಬಿಕೆಯಾಗಿದೆ.

ಇದನ್ನೂ ಓದಿ:ಮಧ್ಯರಾತ್ರಿ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿದ ಶಾರುಖ್ ಖಾನ್; ನಟನ ನಂಬಿಕೆಗೆ ಕಾರಣವೇನು?

ಕುಂದರಗಿ ಗ್ರಾಮದಲ್ಲಿ ಕಳೆದ 20 ವರ್ಷದಿಂದ ಈ ದೇವಸ್ಥಾನ ಭುವನೇಶ್ವರಿ ಪವಾಡ ನಡೆಯುತ್ತಾ ಬಂದಿದೆ. ಪ್ರತಿ ಶುಕ್ರವಾರ ದೇವಿ ಸನ್ನಿಧಿಗೆ ಸಹಸ್ರಾರು ಭಕ್ತರು ಬರುತ್ತಾರೆ. ಭುವನೇಶ್ವರಿ ದೇವಿ ಬೇಡಿದ ಭಕ್ತರ ಕಲ್ಪತರು ಎಂಬಂತೆ ಎಲ್ಲ ಹರಕೆ ಈಡೇರಿಸುತ್ತಾಳೆ. ಇನ್ನು ಇಲ್ಲಿ ಅಂಬಲಿ ಪ್ರಸಾದವನ್ನು ಮಾಡುವುದರಲ್ಲೂ ಪರಿಶುದ್ದತೆ ಪಾವಿತ್ರತೆ ಇದೆ. ನದಿ‌ ನೀರನ್ನು‌ತಂದು ಕೇವಲ ಉಪ್ಪು ಹಿಟ್ಟಿನಿಂದ ಅಂಬಲಿ‌ ಮಾಡುತ್ತಾರೆ. ಅಂಬಲಿ ಮಾಡೋದು ರಾಮನಗೌಡ ಮುದಕಣ್ಣವರ ಎಂಬುವರ ಮನೆಯವರು ಮಾತ್ರ.

ಬೇರೆಯವರ ಮನೆಯವರು ಮಾಡಿದ ಅಂಬಲಿ‌ ನಡೆಯುವುದಿಲ್ಲ.ಅಂಬಲಿ ಮಾಡಿ ಅದನ್ನು ದೇವಿ ಮುಂದೆ ಇಟ್ಟು ಪೂಜೆ ಮಾಡಿ ನಂತರ ಬಂದ ಭಕ್ತರಿಗೆ ಹತ್ತಿ ಎಲೆ‌ ಮೂಲಕ ಪ್ರಸಾದದ ರೂಪದಲ್ಲಿ ನೀಡಲಾಗುವುದು.ಆದರೆ ದೇವಿ ಮುಂದಿಟ್ಟು ಪೂಜೆ ಮಾಡಿದಾಗ ಅಂಬಲಿ ಔಷಧಿ ರೂಪ ಪಡೆಯುತ್ತದೆ ಎಂಬುದು ನಂಬಿಕೆ.ಇನ್ನು ಭಕ್ತರು ದೇವಿಗೆ ಹರಕೆ ಹೇಳಿ ಸಂಕಲ್ಪ ಮಾಡಿಕೊಂಡು ಐದು ವಾರದಲ್ಲಿ ಹರಕೆ ಈಡೇರುತ್ತದೆ. ಆಗ ಭಕ್ತರು ದೀಡನಮಸ್ಕಾರ ಉರುಳು ಸೇವೆ ಮಾಡೋದ ದಾಸೋಹ ದೇವಸ್ಥಾನಕ್ಕೆ ವಿವಿಧ ಕಾಣಿಕೆ‌ ನೀಡಿ ದೇವಿಗೆ ಕೃತಾರ್ಥರಾಗ್ತಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ