AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಆ ದೇವತೆಯ ಸನ್ನಿಧಾನದಲ್ಲಿ ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು ಮಾಯಾ; ಎಲ್ಲಿದೆ ದೇವಸ್ಥಾನ ಅಂತೀರಾ? ಇಲ್ಲಿದೆ ವಿವರ

ಆ ದೇವತೆಯ ಸನ್ನಿಧಾನದಲ್ಲಿ ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ. ಅದನ್ನು ಸೇವಿಸಿದರೆ ಕಾಯಿಲೆಗಳು ಮಾಯವಾಗುತ್ತವಂತೆ. ಮಕ್ಕಳಾಗದವರ ಒಡಲು ತುಂಬುತ್ತದಂತೆ. ದೇವರ ಸನ್ನಿಧಾನದಲ್ಲಿ ಸಿಗುವ ಆ ಅಂಬಲಿ ಪ್ರಸಾದಕ್ಕೆ ಭಕ್ತರು ಭಕ್ತಿಯಿಂದ ದಿನಗಟ್ಟಲೆ ಕಾಣುತ್ತಾರೆ. ಅಷ್ಟಕ್ಕೂ ಆ ದೇವತೆ ಯಾರು?ಎಲ್ಲಿದೆ ಆ ದೇವಸ್ಥಾನ ಇಲ್ಲಿದೆ ನೋಡಿ ಡಿಟೇಲ್ಸ್.

ಬಾಗಲಕೋಟೆ: ಆ ದೇವತೆಯ ಸನ್ನಿಧಾನದಲ್ಲಿ ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು ಮಾಯಾ; ಎಲ್ಲಿದೆ ದೇವಸ್ಥಾನ ಅಂತೀರಾ? ಇಲ್ಲಿದೆ ವಿವರ
ಬಾಗಲಕೋಟೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 08, 2023 | 10:56 PM

Share

ಬಾಗಲಕೋಟೆ, ಸೆ.08: ಅದೊಂದು ಬೆಟ್ಟದಲ್ಲಿ ವಿರಾಜಮಾನರಾಗಿರುವ ಭುವನೇಶ್ವರಿ ದೇವಿ(Bhuvaneshwari Devi). ತಾಯಿ ಭುವನೇಶ್ವರಿ ದರ್ಶನ ಪಡೆಯಲು ಸಹಸ್ರಾರು ಭಕ್ತರು, ಎಲ್ಲಕ್ಕಿಂತ ಹೆಚ್ಚಾಗಿ ದೇವಿಯ ಅಮೃತೌಷಧ ಅಂಬಲಿ ಸೇವನೆ. ಈ ದೃಶ್ಯ ಕಂಡು ಬಂದಿದ್ದು ಬಾಗಲಕೋಟೆ (Bagalakote) ಜಿಲ್ಲೆಯ ಬೀಳಗಿ ತಾಲ್ಲೂಕಿನ ಕುಂದರಗಿ ಗ್ರಾಮದ ಭುವನೇಶ್ವರಿ ದೇವಿ ಸನ್ನಿಧಾನದಲ್ಲಿ. ಹೌದು, ಸಮಾಜದಲ್ಲಿನ ಎಲ್ಲ ಭರವಸೆ ಕೈ ಕೊಟ್ಟಾಗ ದೇವರ ಪಾದವೊಂದೆ ಗತಿ. ಕಾಯಿಲೆ, ಅನಾರೋಗ್ಯಕ್ಕೆ ತುತ್ತಾದವರು, ಮಕ್ಕಳಾಗದವರು ಎಲ್ಲರೂ ವೈದ್ಯರ ಪ್ರಯತ್ನ ಕೈ ಮೀರಿದಾಗ ಹೋಗೋದು ದೇವರ ಕಡೆಗೆ. ಅಷ್ಟೊಂದು ನಂಬಿಕೆ ದೇವರ ಮೇಲೆ ನಮ್ಮ ಜನರದ್ದು.

ಇನ್ನು ಇಲ್ಲಿ ಇಂತಹ ಎಲ್ಲ ಜನರಿಗೆ ನೊಂದು ಬೆಂದವರಿಗೆ ಭುವನೇಶ್ವರಿ ತಾಯಿಯೇ ಆಸರೆ. ಕುಂದರಗಿ ಗ್ರಾಮದ ಸುರಗಿರಿ ಬೆಟ್ಟದಲ್ಲಿ ನೆಲೆಸಿರುವ ಭುವನೇಶ್ವರಿ ತಾಯಿ ಭಕ್ತರ ಕಲ್ಪತರುವಾಗಿದ್ದಾಳೆ. ಇಲ್ಲಿ ಪ್ರತಿ ಶುಕ್ರವಾರ ದೇವಿ ಆರಾಧನೆ ಪೂಜೆ ಮಂತ್ರಪಠಣೆ ಅಭಿಷೇಕ ನಡೆಯುತ್ತದೆ. ಅಂದು ಬಂದ ಭಕ್ತರಿಗೆ ಇಲ್ಲಿ ಅಂಬಲಿ ಪ್ರಸಾದ ಕೊಡಲಾಗುತ್ತದೆ. ಈ ಅಂಬಲಿ ಔಷಧವಿದ್ದಂತೆ, ಯಾವುದೇ ಕಾಯಿಲೆ , ಮಾಹಾಮಾರಿ ಬಂದರೂ ಅಂಬಲಿ ಸೇವಿಸಿದರೆ ವಾಸಿಯಾಗುತ್ತದೆ. ಮಕ್ಕಳಾಗದವರು ಅಂಬಲಿ ಸೇವಿಸಿದರೆ ಮಕ್ಕಳು ಕೂಡ ಅಸಗುತ್ತವೆ. ಭಕ್ತರ ಒಟ್ಟಾರೆ ಎಲ್ಲ ಬೇಡಿಕೆ ಈಡೇರುತ್ತವರ ಎಂಬುದು ಭಕ್ತರ ನಂಬಿಕೆಯಾಗಿದೆ.

ಇದನ್ನೂ ಓದಿ:ಮಧ್ಯರಾತ್ರಿ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿದ ಶಾರುಖ್ ಖಾನ್; ನಟನ ನಂಬಿಕೆಗೆ ಕಾರಣವೇನು?

ಕುಂದರಗಿ ಗ್ರಾಮದಲ್ಲಿ ಕಳೆದ 20 ವರ್ಷದಿಂದ ಈ ದೇವಸ್ಥಾನ ಭುವನೇಶ್ವರಿ ಪವಾಡ ನಡೆಯುತ್ತಾ ಬಂದಿದೆ. ಪ್ರತಿ ಶುಕ್ರವಾರ ದೇವಿ ಸನ್ನಿಧಿಗೆ ಸಹಸ್ರಾರು ಭಕ್ತರು ಬರುತ್ತಾರೆ. ಭುವನೇಶ್ವರಿ ದೇವಿ ಬೇಡಿದ ಭಕ್ತರ ಕಲ್ಪತರು ಎಂಬಂತೆ ಎಲ್ಲ ಹರಕೆ ಈಡೇರಿಸುತ್ತಾಳೆ. ಇನ್ನು ಇಲ್ಲಿ ಅಂಬಲಿ ಪ್ರಸಾದವನ್ನು ಮಾಡುವುದರಲ್ಲೂ ಪರಿಶುದ್ದತೆ ಪಾವಿತ್ರತೆ ಇದೆ. ನದಿ‌ ನೀರನ್ನು‌ತಂದು ಕೇವಲ ಉಪ್ಪು ಹಿಟ್ಟಿನಿಂದ ಅಂಬಲಿ‌ ಮಾಡುತ್ತಾರೆ. ಅಂಬಲಿ ಮಾಡೋದು ರಾಮನಗೌಡ ಮುದಕಣ್ಣವರ ಎಂಬುವರ ಮನೆಯವರು ಮಾತ್ರ.

ಬೇರೆಯವರ ಮನೆಯವರು ಮಾಡಿದ ಅಂಬಲಿ‌ ನಡೆಯುವುದಿಲ್ಲ.ಅಂಬಲಿ ಮಾಡಿ ಅದನ್ನು ದೇವಿ ಮುಂದೆ ಇಟ್ಟು ಪೂಜೆ ಮಾಡಿ ನಂತರ ಬಂದ ಭಕ್ತರಿಗೆ ಹತ್ತಿ ಎಲೆ‌ ಮೂಲಕ ಪ್ರಸಾದದ ರೂಪದಲ್ಲಿ ನೀಡಲಾಗುವುದು.ಆದರೆ ದೇವಿ ಮುಂದಿಟ್ಟು ಪೂಜೆ ಮಾಡಿದಾಗ ಅಂಬಲಿ ಔಷಧಿ ರೂಪ ಪಡೆಯುತ್ತದೆ ಎಂಬುದು ನಂಬಿಕೆ.ಇನ್ನು ಭಕ್ತರು ದೇವಿಗೆ ಹರಕೆ ಹೇಳಿ ಸಂಕಲ್ಪ ಮಾಡಿಕೊಂಡು ಐದು ವಾರದಲ್ಲಿ ಹರಕೆ ಈಡೇರುತ್ತದೆ. ಆಗ ಭಕ್ತರು ದೀಡನಮಸ್ಕಾರ ಉರುಳು ಸೇವೆ ಮಾಡೋದ ದಾಸೋಹ ದೇವಸ್ಥಾನಕ್ಕೆ ವಿವಿಧ ಕಾಣಿಕೆ‌ ನೀಡಿ ದೇವಿಗೆ ಕೃತಾರ್ಥರಾಗ್ತಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ