AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ಗಳ​ ರಾಬರಿ ಪ್ರಕರಣ: ಅಂತಾರಾಜ್ಯ ಕಳ್ಳರು ಅಂದರ್​; ಹಣ, ಬಂಗಾರ ಸೀಜ್​

ಬಾಗಲಕೋಟೆ ಜಿಲ್ಲೆಯಲ್ಲಿ ನಡೆದ ಎಸ್​ಬಿಐ ಕಾಕನೂರು ಮತ್ತು ಕುಳಗೇರಿ ವೀರಪುಲಿಕೇಶಿ ಬ್ಯಾಂಕ್ ದರೋಡೆ ಪ್ರಕರಣಗಳ ಸಂಬಂಧ ಬಾಗಲಕೋಟೆ ಜಿಲ್ಲಾ ಪೊಲೀಸರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನ ಅರೆಸ್ಟ್​ ಮಾಡಲಾಗಿದ್ದು, ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಬ್ಯಾಂಕ್​ಗಳ​ ರಾಬರಿ ಪ್ರಕರಣ: ಅಂತಾರಾಜ್ಯ ಕಳ್ಳರು ಅಂದರ್​; ಹಣ, ಬಂಗಾರ ಸೀಜ್​
ಪೊಲೀಸರು ವಶಪಡಿಸಿಕೊಂಡಿರುವ ಹಣ ಮತ್ತು ಬಂಗಾರ.
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Nov 25, 2025 | 12:41 PM

Share

ಬಾಗಲಕೋಟೆ/ ಬೆಂಗಳೂರು, ನವೆಂಬರ್​​ 25: ಕಾಕನೂರು ಗ್ರಾಮದಲ್ಲಿ ಎಸ್​​ಬಿಐ ದರೋಡೆ ಮತ್ತು ಕುಳಗೇರಿ ವೀರಪುಲಿಕೇಶಿ‌ ಬ್ಯಾಂಕ್ ಕಳ್ಳತನ ಪ್ರಕರಣ ಸಂಬಂಧ ಬಾಗಲಕೋಟೆ ಜಿಲ್ಲಾ ಪೊಲೀಸರು ಅಂತಾರಾಜ್ಯ ಕಳ್ಳರ‌ ಹೆಡೆಮುರಿ ಕಟ್ಟಿದ್ದಾರೆ. ಉತ್ತರ‌ ಪ್ರದೇಶದ ಕಕ್ರಾಳ ಗ್ರಾಮದ ಮಹಮ್ಮದ ನವಾನ್ ಹಾಗೂ ಕಮರುಲ್‌ಖಾನ್ ಬಂಧಿತ ಆರೋಪಿಗಳಾಗಿದ್ದು, ಹಣ ಮತ್ತು ಆಭರಣವನ್ನು ಜಪ್ತಿ ಮಾಡಲಾಗಿದೆ.

2025ರ ಸೆಪ್ಟಂಬರ್​ 2ರಂದು ಕಾಕನೂರು ಗ್ರಾಮದಲ್ಲಿನ ಎಸ್​ಬಿಐ ದರೋಡೆ ನಡೆದಿತ್ತು.ಗ್ಯಾಸ್ ಕಟರನಿಂದ ಲಾಕರ್ ಮುರಿದು, ಚಿನ್ನಾಭರಣ ಕದ್ದು ಊವರ ಗ್ಯಾಂಗ್​​ ಎಸ್ಕೇಪ್​ ಆಗಿತ್ತು. ಸಿಸಿ ಕ್ಯಾಮರಾಗಳಿಗೆ ಬ್ಲ್ಯಾಕ್​ ಸ್ಪ್ರೇ ಹೊಡೆದು, ವೈರ್​ ಕಟ್​​ ಮಾಡಿ ಆರೋಪಿಗಳು ಚಾಲಾಕಿತನ ಮೆರೆದಿದ್ದರು. ಕುಳಗೇರಿಯ ವೀರಪುಲಿಕೇಶಿ‌ ಬ್ಯಾಂಕ್​​ನಲ್ಲೂ ದರೋಡೆ ನಡೆದಿತ್ತು. ಪ್ರಕರಣಗಳ ಸಂಬಂಧ 1,55,000 ರೂ. ನಗದು ಸೇರಿ ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಾಗಲಕೋಟೆ ಎಸ್ಪಿ ಸಿದ್ಧಾರ್ಥ ಗೋಯಲ್ ಮಾರ್ಗದರ್ಶನದಲ್ಲಿ ಬಾದಾಮಿ ಹಾಗೂ ಕೆರೂರು ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಇದನ್ನೂ ಓದಿ: ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್​; ಮತ್ತೆ 42 ಲಕ್ಷ ರೂ. ಜಪ್ತಿ, ಈವರೆಗೆರಿ ಕವರಿಯಾದ ಹಣವೆಷ್ಟು?

23 ಕೆಜಿ ಬೆಳ್ಳಿ ಕದ್ದ ಕಳ್ಳ ಒಂದೇ ಗಂಟೆಯಲ್ಲಿ ಅರೆಸ್ಟ್​

Bng Silver Theft

ಆಯಾಜಿ ಚೌಧರಿ

23 ಕೆಜಿ ಬೆಳ್ಳಿ ಕದ್ದಿದ್ದ ಖತರ್ನಾಕ್​ ಕಳ್ಳನನ್ನು ಒಂದು ಗಂಟೆಯಲ್ಲಿಯೇ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಆಯಾಜಿ ಚೌಧರಿ (43) ಬಂಧಿತ ಆರೋಪಿಯಾಗಿದ್ದು, ನವೆಂಬರ್​​ 23ರ ಸಂಜೆ 7 ಗಂಟೆ ಸುಮಾರಿಗೆ ಕಳ್ಳತನ ನಡೆದಿತ್ತು. ಕೆಲಸಗಾರ ಆ್ಯಕ್ಟೀವಾದಲ್ಲಿ ಬೆಳ್ಳಿ ತರುತ್ತಿದ್ದ ವೇಳೆ ಆರೋಪಿ ಬೆಳ್ಳಿ ಕದ್ದು ಎಸ್ಕೇಪ್​​ ಆಗಿದ್ದ. ಸಿಬ್ಬಂದಿ ಆ್ಯಕ್ಟೀವಾ ಡಿಕ್ಕಿಯಲ್ಲಿ ಮತ್ತು  ಮುಂಭಾಗ ಇಟ್ಟಿದ್ದ ಬ್ಯಾಗ್​ಗಳ ಪೈಕಿ ಮುಂಭಾಗವಿದ್ದ ಬ್ಯಾಗ್​​ನಲ್ಲಿದ್ದ​​ 36 ಲಕ್ಷ ಮೌಲ್ಯದ 23 ಕೆ.ಜಿ. ಬೆಳ್ಳಿ ಕದ್ದು ಆಜಿಯಾ ಪರಾರಿಯಾಗಿದ್ದ. ವಿಚಾರಣೆ ವೇಳೆ ಆರೋಪಿ ಕಾಟನ್ ಪೇಟೆ ಠಾಣೆ ರೌಡಿಶೀಟರ್, ಈತನ ಮೇಲೆ 50 ಪ್ರಕರಣಗಳಿವೆ ಅನ್ನೋದು ಗೊತ್ತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:37 pm, Tue, 25 November 25

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More