AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ನಿರಂತರ ಮಳೆಗೆ ಗೋಡೆ ಕುಸಿದು ಬಾಲಕ ಸಾವು; ಮತ್ತೋರ್ವನಿಗೆ ಗಂಭೀರ ಗಾಯ

ಕರ್ನಾಟಕದಲ್ಲಿ ಕೊಂಚ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಅಬ್ಬರಿಸಲು ಶುರು ಆಗಿದೆ. ಧಾರಾಕಾರ ಮಳೆಗೆ ಹಲವೆಡೆ ಅವಾಂತರಗಳು ಉಂಟಾಗಿವೆ. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಮನೆ ಮೇಲ್ಚಾವಣಿ ಮತ್ತು ಗೋಡೆ ಕುಸಿದು ಬಾಲಕ ಸಾವನ್ನಪ್ಪಿರುವಂತಹ ಭೀಕರ ಘಟನೆ ನಡೆದಿದೆ.

ಬಾಗಲಕೋಟೆ: ನಿರಂತರ ಮಳೆಗೆ ಗೋಡೆ ಕುಸಿದು ಬಾಲಕ ಸಾವು; ಮತ್ತೋರ್ವನಿಗೆ ಗಂಭೀರ ಗಾಯ
ಮಳೆಗೆ ಕುಸಿದ ಗೋಡೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Sep 27, 2025 | 11:15 AM

Share

ಬಾಗಲಕೋಟೆ, ಸೆಪ್ಟೆಂಬರ್​ 27: ರಾಜ್ಯದಲ್ಲಿ ಕೊಂಚ ಬಿಡುವು ನೀಡಿದ್ದ ಮಳೆರಾಯ (rain) ಮತ್ತೆ ಅಬ್ಬರಿಸಲು ಶುರುವಾಗಿದೆ. ಪರಿಣಾಮ ಮನೆ ಮೇಲ್ಚಾವಣಿ, ಗೋಡೆ ಕುಸಿದು ಬಾಲಕ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ನಡೆದಿದೆ. ಬೆಳಗಿನ ಜಾವ 5 ಗಂಟೆಗೆ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿದುಬಿದ್ದು, ದರ್ಶನ್ ಲಾತೂರ(11) ಮೃತಪಟ್ಟಿದ್ದಾನೆ. ಮತ್ತೋರ್ವ ಬಾಲಕ ಶ್ರೀಶೈಲ್​ಗೆ ಗಂಭೀರ ಗಾಯಗಳಾಗಿವೆ.

ಮೃತ ದರ್ಶನ್ ಲಾತೂರ, ನಾಗಪ್ಪ ಲಾತೂರ್ ಎಂಬುವವರ ಮಗ. ಮಹಾಲಿಂಗಪುರದ ಅಂಬೇಡ್ಕರ್ ವೃತ್ತದ ಬಳಿ ಮನೆ ಇದ್ದು, ಇಬ್ಬರು ಮಕ್ಕಳು ಮನೆಯ ಕೋಣೆಯಲ್ಲಿ ತಾಯಿಯೊಂದಿಗೆ ಮಲಗಿದ್ದರು. ಬೆಳಗ್ಗೆ ತಾಯಿ ಎದ್ದು ಬೇರೆ ಕೊಠಡಿಗೆ ಬರುತ್ತಿದ್ದಂತೆ ಇತ್ತ ಗೋಡೆ ಕುಸಿದುಬಿದ್ದಿದೆ.

ಇದನ್ನೂ ಓದಿ: Karnataka Weather: ಇಂದಿನಿಂದ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆ, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಅವಘಡದಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಗಾಯಗೊಂಡ ಬಾಲಕ ಶ್ರೀಶೈಲ್​ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೆತ್ತ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮಟ್ಟಿದೆ.

ತೋಟದ ಮನೆಯಲ್ಲಿ ಸಿಲುಕಿದ್ದ 8 ಜನರ ರಕ್ಷಣೆ

ವಿಜಯಪುರ ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹದಿಂದ ಜನರು ತತ್ತರಿಸಿದ್ದಾರೆ. ಆಲಮೇಲ ತಾಲೂಕಿನ ತಾವರಖೇಡ ಗ್ರಾಮದಲ್ಲಿ ಭೀಮಾ ನದಿ ಪ್ರವಾಹದಿಂದ ಮನೆಗಳು ಜಲಾವೃತಗೊಂಡಿದೆ. ಪ್ರವಾಹ ಸ್ಥಿತಿಯ ನಡುವೆಯೂ ತೋಟದಲ್ಲಿ ಕುಟುಂಬಗಳು ವಾಸವಿದ್ದರು. ತೋಟದ ಮನೆಗಳಲ್ಲಿದ್ದ 8 ಜನರನ್ನು ಬೋಟ್ ಮೂಲಕ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಧಾರಾಕಾರ ಮಳೆ: ಸೇತುವೆಗಳು ಮುಳುಗಡೆ

ಕಲಬುರಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಜಿಲ್ಲೆಯ ಚಿಂಚೋಳಿ ತಾಲೂಕಿನ ಮುಲ್ಲಾಮಾರಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ 2 ಕಿರು ಸೇತುವೆಗಳು ಮುಳುಗಡೆ ಆಗಿವೆ. ನಿನ್ನೆಯಿಂದ ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ಗ್ರಾಮಸ್ಥರು ಪರದಾಡುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ