AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಉಪಚುನಾವಣೆ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ: ಆಪ್ತನ ಮಗನ ಗೆಲುವಿಗೆ ಪಣ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾವೇರಿದೆ. ಹೆಚ್.ವೈ. ಮೇಟಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಏಪ್ರಿಲ್ 9ರಂದು ಚುನಾವಣೆ ನಡೆಯಲಿದೆ. ಇದೀಗ ಬಾಗಲಕೋಟೆ ಉಪಚುನಾವಣೆ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯರ ಎಂಟ್ರಿ ಆಗಿದೆ. ಉಮೇಶ್ ಮೇಟಿ ಪರ ಪ್ರಚಾರ ನಡೆಸಲಿದ್ದು, ಆಪ್ತನ ಮಗನ ಗೆಲುವಿಗೆ ಪಣತೊಟ್ಟಿದ್ದಾರೆ.

ಬಾಗಲಕೋಟೆ ಉಪಚುನಾವಣೆ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ: ಆಪ್ತನ ಮಗನ ಗೆಲುವಿಗೆ ಪಣ
ಸಿಎಂ ಸಿದ್ದರಾಮಯ್ಯ, ಉಮೇಶ್ ಮೇಟಿImage Credit source: thehindu.com
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Mar 29, 2026 | 6:04 PM

Share

ಬಾಗಲಕೋಟೆ, ಮಾರ್ಚ್​ 29: ಏ.9ರಂದು ನಡೆಯಲಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿರುಬಿಸಿಲಿನಲ್ಲೂ ಕಾಂಗ್ರೆಸ್​​ ನಾಯಕರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದು, ನಾಳೆಯಿಂದ ಅಭ್ಯರ್ಥಿ ಉಮೇಶ್ ಮೇಟಿ ಪರ ಮತಬೇಟೆಗೆ ಇಳಿಯಲಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ 5 ದಿನ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಆಪ್ತರಾಗಿದ್ದ ಹಾಲುಮತದ ಹೆಚ್.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿತ್ತು. ಟಿಕೆಟ್​​ಗಾಗಿ ಮೇಟಿ ಕುಟುಂಬದ ಮಧ್ಯಯೇ ಫೈಟ್ ನಡೆದಿತ್ತು. ಬಳಿಕ ಹೆಚ್​​.ವೈ. ಮೇಟಿ ಅವರ ಎರಡನೇ ಮಗ ಉಮೆಶ್ ಮೇಟಿ​​ಯನ್ನು ಕಾಂಗ್ರೆಸ್​​ ತನ್ನ ಅಭ್ಯರ್ಥಿಯಾಗಿ ಘೋಷಿಸಿತ್ತು.

ಆಪ್ತನ ಮಗನ ಗೆಲ್ಲಿಸಲು 5 ದಿನ ಪ್ರಚಾರ

ಸದ್ಯ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ, ಸರ್ಕಾರದ ವರ್ಚಸ್ಸಿನ ಜೊತೆ ಸಮುದಾಯ ಗೌರವ ಕಾಪಾಡಬೇಕಿದೆ. ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಒಮ್ಮೆ ಮಾತ್ರ ಪ್ರಚಾರ ನಡೆಸಿದ್ದರು. ಆದರೆ ಇದೀಗ ಆಪ್ತನ ಮಗನ ಗೆಲ್ಲಿಸಲು 5 ದಿನ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ ಉಪ ಚುನಾವಣೆ: ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ

ನಾಳೆ ಅಂದರೆ ಮಾರ್ಚ್​ 30ರ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬಳ್ಳಾರಿ ಜಿಲ್ಲೆಯ ಜಿಂದಾಲ್ ಏರ್​ಸ್ಟ್ರಿಪ್​ಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ನಂತರ ಹೆಲಿಕಾಪ್ಟರ್​ನಲ್ಲಿ ಆಲಮಟ್ಟಿ ಡ್ಯಾಮ್​ನತ್ತ ಪ್ರಯಾಣ ಬೆಳಸಲಿದ್ದಾರೆ. ಆಲಮಟ್ಟಿ ಡ್ಯಾಮ್ ಹೆಲಿಪ್ಯಾಡ್​ನಿಂದ ಕಾರಿನಲ್ಲಿ ಸುತಗುಂಡಾರ ಗ್ರಾಮಕ್ಕೆ ಆಗಮಿಸುವ ಸಿಎಂ, ಮಧ್ಯಾಹ್ನ 1 ಗಂಟೆಗೆ ಸುತಗುಂಡಾರ ಗ್ರಾಮದಲ್ಲಿ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ: ಮೂರನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು?

ನಂತರ ನಾಯನೇಗಲಿ, ರಾಂಪುರ, ಬೇವೂರು ಗ್ರಾಮಗಳಲ್ಲಿ ಮತಯಾಚನೆ ಬಳಿಕ ಅಂದು ರಾತ್ರಿ ಆಲಮಟ್ಟಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಇನ್ನು ಮಾರ್ಚ್ 31ರಂದು ಬೆಳಗ್ಗೆ 11ಕ್ಕೆ ಮುಗಳೊಳ್ಳಿ, ಮಧ್ಯಾಹ್ನ 1ಗಂಟೆಗೆ ನೀಲಾನಗರ, 4ಗಂಟೆಗೆ ಐಹೊಳೆ ಮತ್ತು 6ಗಂಟೆಗೆ ಅಮೀನಗಢದಲ್ಲಿ ಸಿಎಂ ಸಿದ್ದರಾಮಯ್ಯ ಮತಯಾಚನೆ ಮಾಡಲಿದ್ದಾರೆ. ಏಪ್ರಿಲ್ 3, 4 ಮತ್ತು 6ರಂದು 2ನೇ ಹಂತದಲ್ಲಿ ಮತ್ತೆ ಪ್ರಚಾರ ಮಾಡಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು