AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುಲಿಂಗೇಶ್ವರ ಸ್ವಾಮೀಜಿ ಚಿನ್ನದ ಸರ, ಕಿರೀಟ ನಾಪತ್ತೆ: ರಂಭಾಪುರಿ ಶ್ರೀ ವಿರುದ್ಧ ಭಕ್ತರಿಂದ ಗಂಭೀರ ಆರೋಪ

ಬಾಗಲಕೋಟೆ ಜಿಲ್ಲೆಯ ರಂಭಾಪುರಿ ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೀಗಾಗಿ ಕಲಾದಗಿಯ ಗುರುಲಿಂಗೇಶ್ವರ ಮಠದಲ್ಲಿ ಭಕ್ತರಿಂದ ಪ್ರತಿಭಟನೆ ಮಾಡಲಾಗಿದೆ. ರಂಭಾಪುರಿ ಶಾಖಾ ಮಠ ಎಂದು ನಾವು ಒಪ್ಪಿಕೊಳ್ಳುವುದೇ ಇಲ್ಲ. ರಂಭಾಪುರಿ ಶ್ರೀಗಳು ಗಂಗಾಧರ ಸ್ವಾಮೀಜಿ‌ ಮಠದ ಆಸ್ತಿ ಕಬಳಿಕೆ ಪ್ರಯತ್ನ ನಡೆಸಿದ್ದಾರೆ ಎಂದು ಭಕ್ತರು ಗಂಭೀರ ಆರೋಪ ಮಾಡಿದ್ದಾರೆ.

ಗುರುಲಿಂಗೇಶ್ವರ ಸ್ವಾಮೀಜಿ ಚಿನ್ನದ ಸರ, ಕಿರೀಟ ನಾಪತ್ತೆ: ರಂಭಾಪುರಿ ಶ್ರೀ ವಿರುದ್ಧ ಭಕ್ತರಿಂದ ಗಂಭೀರ ಆರೋಪ
ಭಕ್ತರಿಂದ ಪ್ರತಿಭಟನೆ, ರಂಭಾಪುರಿಶ್ರೀ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Feb 17, 2024 | 4:55 PM

Share

ಬಾಗಲಕೋಟೆ, ಫೆಬ್ರವರಿ 17: ಜಿಲ್ಲೆಯ ರಂಭಾಪುರಿ (rambhapuri  Seer) ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಲಾದಗಿ ಮಠದ ಪೀಠಾಧಿಪತಿಯಾಗಿ ಗಂಗಾಧರ ಸ್ವಾಮೀಜಿ ನೇಮಕ ಭಕ್ತರನ್ನು ರೊಚ್ಚಿಗೆಬ್ಬಿಸಿದೆ. ಗಂಗಾಧರ ಸ್ವಾಮೀಜಿಯು ಮಠದ ದುರಸ್ತಿ, ಮಠದ ಹೊಲದ ಉಳುಮೆ ಮಾಡಿರುವುದು ಭಕ್ತರ ಕೋಪ ಮತ್ತಷ್ಟು ಹೆಚ್ಚುವಂತೆ ಮಾಡಿದೆ. ಬಾಗಲಕೋಟೆ ತಾಲೂಕಿನ ಕಲಾದಗಿಯ ಗುರುಲಿಂಗೇಶ್ವರ ಮಠದಲ್ಲಿ ಭಕ್ತರಿಂದ ಪ್ರತಿಭಟನೆ ಮಾಡಲಾಗಿದೆ. ರಂಭಾಪುರಿ ಶಾಖಾ ಮಠ ಎಂದು ನಾವು ಒಪ್ಪಿಕೊಳ್ಳುವುದೇ ಇಲ್ಲ. ಗುರುಲಿಂಗೇಶ್ವರ ಮಠಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಗುರುಲಿಂಗೇಶ್ವರಶ್ರೀ, ಅಡಿವೆಪ್ಪಶ್ರೀ, ಪಡದಪ್ಪಶ್ರೀ ನಮಗೆ ಗೊತ್ತು. ಇವರ್ಯಾರು ರಕ್ತಸಂಬಂಧದ ಸ್ವಾಮೀಜಿಗಳಲ್ಲ ಎಂದು ಆಕ್ರೋಶ ವಕ್ತಪಡಿಸಿದ್ದಾರೆ.

ಮಠದ ಆಸ್ತಿ ಕಬಳಿಕೆ ಪ್ರಯತ್ನ: ಭಕ್ತರು ಆಕ್ರೋಶ

ಚಂದ್ರಶೇಖರ ಶಿವಾಚಾರ್ಯರು ರಂಭಾಪುರಿ ಪೀಠದ ಮೂಲ ಸ್ವಾಮೀಜಿ ಗಂಗಾಧರ ಸ್ವಾಮೀಜಿಯ ಸಂಬಂಧಿಕರು. ಈಗ ಇರುವ ಗಂಗಾಧರ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿಯ ಸಹೋದರಿಯ ಮಗ. ರಂಭಾಪುರಿ ಶ್ರೀಗಳು ಗಂಗಾಧರ ಸ್ವಾಮೀಜಿ‌ ಮಠದ ಆಸ್ತಿ ಕಬಳಿಕೆ ಪ್ರಯತ್ನ ನಡೆಸಿದ್ದಾರೆ ಎಂದು ಭಕ್ತರು ಆರೋಪಿಸಿದ್ದಾರೆ.

ಇದನ್ನೂ ಓದಿ: ಗುರುಲಿಂಗೇಶ್ವರ ಮಠದಲ್ಲಿ ಭುಗಿಲೆದ್ದ ಭಕ್ತರ ಆಕ್ರೋಶ, ರಂಭಾಪುರಿ ಶ್ರೀ ಕಾರಿನ ಮೇಲೆ ಚಪ್ಪಲಿ ಎಸೆತ

ಕೃಷ್ಣಾ ಮೇಲ್ದಂಡೆ ಯೋಜನೆಯಿಂದ 50 ಎಕರೆ ಜಮೀನು ಮುಳುಗಡೆಯಾಗಿದೆ. ಜಮೀನಿಗೆ ಪರಿಹಾರ ರೂಪದಲ್ಲಿ ಕೋಟಿ ಕೋಟಿ ಹಣ ಬಂದಿದೆ. ಹೈಸ್ಕೂಲ್‌, ಪಿಯು ಕಾಲೇಜು, ಮಠ ಸಹ ಮುಳುಗಡೆ ಆಗಿದೆ. ಮೊದಲ ಹಂತದಲ್ಲಿ ಕೋಟಿಗೂ ಹೆಚ್ಚು ರೂಪಾಯಿ ಪರಿಹಾರ ಬಂದಿದೆ. ಪ್ರೌಢಶಾಲೆ ಮುಳುಗಡೆಯಾಗಿದ್ದು ಕೋಟಿ ರೂ. ಅನುದಾನ ಬಂದಿದೆ. ಮಠದ ಊರಿನಲ್ಲಿರುವ 20 ಮನೆ ಮುಳುಗಡೆಗೆ 3 ಕೋಟಿ ರೂ. ಬಂದಿದೆ. ಮುಳುಗಡೆ ಆಗಿರುವ 14 ಎಕರೆ ಜಮೀನು ಮೌಲ್ಯ 3.5 ಕೋಟಿ ರೂ. ಇನ್ನೂ 28 ಎಕರೆ ಮುಳುಗಡೆಯಾಗಲಿದೆ, 19 ಕೋಟಿ ರೂ. ಬರುವ ಸಾಧ್ಯತೆ ಇದೆ. ಹೀಗಾಗಿ ಪರಿಹಾರ ಹಣಕ್ಕಾಗಿ ಹುನ್ನಾರ ನಡೆದಿದೆ ಎಂದು ಭಕ್ತರು ಆರೋಪ ಮಾಡಿದ್ದಾರೆ.

ಮಠಕ್ಕೆ ಬೀಗ ಹಾಕುವಂತೆ ಪಟ್ಟು

ಮಠದ 17 ಲಕ್ಷ ರೂ. ಮೌಲ್ಯದ ಕಾರು, ಟ್ರ್ಯಾಕ್ಟರ್‌, ಬೈಕ್‌ ಕಣ್ಮರೆಯಾಗಿದೆ. ಗುರುಲಿಂಗೇಶ್ವರ ಶ್ರೀಗಳ ಚಿನ್ನದ ಕಿರೀಟ, ಚಿನ್ನದ ಸರ ನಾಪತ್ತೆಯಾಗಿದೆ. ಮಠದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲು ನಾವು ಬಿಡುವುದಿಲ್ಲ. ಗಂಗಾಧರಶ್ರೀಗಳನ್ನು ಮಠದ ಸ್ವಾಮೀಜಿ ಅಂತಾ ನಾವು ಒಪ್ಪಿಕೊಳ್ಳಲ್ಲ. ಮಠಕ್ಕೆ ಬೀಗ ಹಾಕುವವರೆಗೂ ನಾವು ಸ್ಥಳದಿಂದ ತೆರಳಲ್ಲವೆಂದು ಭಕ್ತರು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಕ್ರೀಡಾ ಪ್ರಾಧಿಕಾರದಿಂದ ವಿಜಯಾನಂದ ಕಾಶಪ್ಪನವರ್​ಗೆ ಕೊಕ್ ಕೊಟ್ಟು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನೀಡಿದ ಸರ್ಕಾರ

ಇಂಥಾ ಸೇಡಿನ ಸಮರದ ನಡುವೆ ಗುರುಲಿಂಗೇಶ್ವರ ಮಠದಲ್ಲಿ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆ ಮಾಡಲಾಗಿತ್ತು.. ಈ ಕಾರ್ಯಕ್ರಮದಲ್ಲಿ ಭಾಗವಹಿಸೋಕೆ ರಂಭಾಪುರಿ ಶ್ರೀಗಳು ಹೋಗಿದ್ರು.. ಆದ್ರೆ ಉದಗಟ್ಟಿ ಗ್ರಾಮಕ್ಕೆ ತೆರಳುತ್ತಿದ್ದ ರಂಭಾಪುರಿ ಶ್ರೀಗಳ ಕಾರನ್ನ ತಡೆಗಟ್ಟಲು ಭಕ್ತರು ಯತ್ನಿಸಿದ್ದಾರೆ. ಈ ವೇಳೆ ಶ್ರೀಗಳ ವಿರುದ್ಧ ಭಕ್ತರು ಧಿಕ್ಕಾರ ಕೂಗಿದ್ದಾರೆ. ಅಷ್ಟೇ ಅಲ್ಲ ಉದ್ರಿಕ್ತ ಮಹಿಳೆಯೊಬ್ಬರು ಶ್ರೀಗಳ ಕಾರಿನತ್ತ ಚಪ್ಪಲಿ ತೂರಾಟ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್