AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿಲ್ಲದೆ ಘಟಪ್ರಭಾ ನದಿ ಖಾಲಿ: ಸರ್ಕಾರದ ವಿರುದ್ಧ ರೈತರು ಆಕ್ರೋಶ, ಉಗ್ರ ಪ್ರತಿಭಟನೆ ಎಚ್ಚರಿಕೆ

ಬಾಗಲಕೋಟೆ ಜಿಲ್ಲೆಯ ಘಟಪ್ರಭಾ ನದಿ ಖಾಲಿಯಾಗಿದೆ. ಘಟಪ್ರಭಾ ತೀರದ ರೈತರ ಕೃಷಿ ಹಾಗೂ ಜಾನುವಾರುಗಳಿಗೆ ನೀರಿಲ್ಲದಂತಾಗಿದೆ. ಈಗಾಗಲೇ ‌ಮುಧೋಳ‌ ನಗರದಲ್ಲಿ ಒಂದು ಸುತ್ತು ರೈತರು ಪ್ರತಿಭಟನೆ ಮಾಡಿದ್ದಾರೆ. ಘಟಪ್ರಭಾ ವ್ಯಾಪ್ತಿಯ ಕಟ್ಟ ಕಡೆ ರೈತನಿಗೂ ನೀರು ತಲುಪುವಷ್ಟು ನೀರು ಹರಿಸಬೇಕು. ನೀರು ಬಿಡದಿದ್ದರೆ ಮುಂದೆ ಪ್ರತಿಭಟನೆ ಉಗ್ರ ರೂಪ ಪಡೆಯುತ್ತದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ನೀರಿಲ್ಲದೆ ಘಟಪ್ರಭಾ ನದಿ ಖಾಲಿ: ಸರ್ಕಾರದ ವಿರುದ್ಧ ರೈತರು ಆಕ್ರೋಶ, ಉಗ್ರ ಪ್ರತಿಭಟನೆ ಎಚ್ಚರಿಕೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Feb 19, 2024 | 9:54 PM

Share

ಬಾಗಲಕೋಟೆ, ಫೆಬ್ರವರಿ 19: ಪ್ರತಿ ವರ್ಷ ಬರಗಾಲ (drought) ವಿಲ್ಲದ ಸಮಯದಲ್ಲೂ ಆ ನದಿ ಖಾಲಿಯಾಗಿದ್ದೇ ತಡ ನೀರು ಹರಿಸಲಾಗುತ್ತಿತ್ತು. ಆದರೆ ಈ ಬಾರಿ ಬರಗಾಲವಿದೆ ರೈತರ ಬದುಕು ದುಸ್ತರವಾಗಿದೆ. ಇಂತಹ ಸಮಯದಲ್ಲೂ ನದಿ ಖಾಲಿಯಾದರೂ ಹನಿ ನೀರು ಬಿಟ್ಟಿಲ್ಲ. ಇದರಿಂದ ರೈತರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಇಡೀ ಜಿಲ್ಲೆ ಬರಪೀಡಿತ ಜಿಲ್ಲೆಯಾಗಿದೆ. ಮಳೆಯಿಲ್ಲದೆ ಎಲ್ಲ ಜಲಮೂಲಗಳು ಬತ್ತಿ, ರೈತರ ಕೃಷಿಗೆ ಜಾನುವಾರುಗಳಿಗೆ ನೀರಿಲ್ಲದಂತಾಗಿದೆ. ಘಟಪ್ರಭಾ ನದಿ (Ghataprabha River) ಖಾಲಿಯಾಗಿದ್ದು, ಘಟಪ್ರಭಾ ತೀರದ ರೈತರ ಕೃಷಿ ಹಾಗೂ ಜಾನುವಾರುಗಳಿಗೆ ನೀರಿಲ್ಲದಂತಾಗಿದೆ. ಪ್ರತಿ ವರ್ಷವು ಘಟಪ್ರಭಾ ನದಿ ಖಾಲಿಯಾದಾಗ ಹಿಡಕಲ್‌ ಜಲಾಶಯದಿಂದ ನೀರು ಬಿಡುತ್ತ ಬರಲಾಗುತ್ತಿದೆ. ಆದರೆ ಈ ಬಾರಿ ನದಿ ಖಾಲಿಯಾಗಿ ತಿಂಗಳು ಕಳೆದರೂ ನೀರು ಬಿಟ್ಟಿಲ್ಲ. ಇದರಿಂದ ಘಟಪ್ರಭಾ ತೀರದ ರೈತರು ನೀರಿಲ್ಲದೆ ಪರದಾಡುತ್ತಿದ್ದಾರೆ.

ಈ ಬಗ್ಗೆ ಈಗಾಗಲೇ ‌ಮುಧೋಳ‌ ನಗರದಲ್ಲಿ ಒಂದು ಸುತ್ತು ರೈತರು ಪ್ರತಿಭಟನೆ ಮಾಡಿದ್ದಾರೆ. ನಮಗೆ ಒಂದು ಟಿಎಮ್​ಸಿ‌ ನೀರು ಸಾಲುವುದಿಲ್ಲ. ಘಟಪ್ರಭಾ ವ್ಯಾಪ್ತಿಯ ಕಟ್ಟ ಕಡೆ ರೈತನಿಗೂ ನೀರು ತಲುಪುವಷ್ಟು ನೀರು ಹರಿಸಬೇಕು. ಕೂಡಲೆ ನೀರು ಬಿಡದಿದ್ದರೆ ಮುಂದೆ ಪ್ರತಿಭಟನೆ ಉಗ್ರ ರೂಪ ಪಡೆಯುತ್ತದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಸೃಷ್ಟಿಯಾದ ಪಕ್ಷಿಗಳ ಲೋಕ; ಇಲ್ಲಿದೆ ಅದರ ಝಲಕ್​

ಜಿಲ್ಲೆಯಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ‌ಮೂರು ನದಿಗಳು ಹರಿಯುತ್ತವೆ. ಆದರೆ ಈಗ‌ ಮಳೆಯಿಲ್ಲದೇ ಮೂರು ನದಿಗಳು ಖಾಲಿ ಖಾಲಿಯಾಗಿವೆ. ಕೇವಲ‌ ನದಿಗಳು ಅಷ್ಟೇ ಅಲ್ಲದೆ ಕೆರೆ ಕಟ್ಟೆಗಳು ಬರಿದಾಗಿವೆ. ಇಂತಹ ಅವಧಿಯಲ್ಲಿ ಘಟಪ್ರಭಾ ತೀರದ ರೈತರು ನೀರಿಗಾಗಿ ಆಗ್ರಹ ಮಾಡುತ್ತಿದ್ದಾರೆ. ಬೆಳೆಗಳಿಗೆ ಜಾನುವಾರುಗಳಿಗೆ ನೀರಿಲ್ಲದೆ ರೈತರ ಬದುಕು ಕಂಗಾಲಾಗಿದೆ.

ಇದನ್ನೂ ಓದಿ: ನನ್ನ ಕ್ಷೇತ್ರದಲ್ಲಿ ಹೆಚ್ಚಿನ ದರಕ್ಕೆ ಟ್ಯಾಂಕರ್ ನೀರು ಮಾರುವಂತಿಲ್ಲ: ಶಾಸಕ‌ ಎಸ್​ಟಿ‌ ಸೋಮಶೇಖರ್​ ಎಚ್ಚರಿಕೆ

ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷ್ಯ ದೋರಣೆ ತಾಳುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಮಾತಾಡಿದ ಜಿಪಂ ಸಿಇಒ, ಈಗಾಗಲೇ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ ಬಗ್ಗೆ ಡಿಸಿ ಅವರ ನೇತ್ರತ್ವದಲ್ಲಿ ಸಭೆ ಮಾಡಲಾಗಿದೆ. ನೀರು ಬಿಡುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಜೊತೆಗೆ ನಮಗೆ ಹೆಚ್ಚಿನ ಪ್ರಮಾಣದ ನೀರು ಬೇಕು. ಕೇವಲ ಒಂದು ಟಿಎಮ್​ಸಿ ಬಿಟ್ಟರೆ ಅದು ಕೇವಲ‌‌ ಬೆಳಗಾವಿ ಜಿಲ್ಲೆಗೆ ಮಾತ್ರ ಸೀಮಿತ ಆಗುತ್ತದೆ. ಬಾಗಲಕೋಟೆ ಜಿಲ್ಲೆಯ ಘಟಪ್ರಭಾ ‌ಕಡೆ ಹಳ್ಳಿ ರೈತನಿಗೂ ತಲುಪುವಷ್ಟು ನೀರು ಬಿಡಲು ಮನವಿ ಮಾಡಿದ್ದೇವೆ. ಶೀಘ್ರದಲ್ಲೇ ನೀರು ಬಿಡುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:43 pm, Mon, 19 February 24

Follow Us
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ