AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿಲ್ಲದೆ ಘಟಪ್ರಭಾ ನದಿ ಖಾಲಿ: ಸರ್ಕಾರದ ವಿರುದ್ಧ ರೈತರು ಆಕ್ರೋಶ, ಉಗ್ರ ಪ್ರತಿಭಟನೆ ಎಚ್ಚರಿಕೆ

ಬಾಗಲಕೋಟೆ ಜಿಲ್ಲೆಯ ಘಟಪ್ರಭಾ ನದಿ ಖಾಲಿಯಾಗಿದೆ. ಘಟಪ್ರಭಾ ತೀರದ ರೈತರ ಕೃಷಿ ಹಾಗೂ ಜಾನುವಾರುಗಳಿಗೆ ನೀರಿಲ್ಲದಂತಾಗಿದೆ. ಈಗಾಗಲೇ ‌ಮುಧೋಳ‌ ನಗರದಲ್ಲಿ ಒಂದು ಸುತ್ತು ರೈತರು ಪ್ರತಿಭಟನೆ ಮಾಡಿದ್ದಾರೆ. ಘಟಪ್ರಭಾ ವ್ಯಾಪ್ತಿಯ ಕಟ್ಟ ಕಡೆ ರೈತನಿಗೂ ನೀರು ತಲುಪುವಷ್ಟು ನೀರು ಹರಿಸಬೇಕು. ನೀರು ಬಿಡದಿದ್ದರೆ ಮುಂದೆ ಪ್ರತಿಭಟನೆ ಉಗ್ರ ರೂಪ ಪಡೆಯುತ್ತದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ನೀರಿಲ್ಲದೆ ಘಟಪ್ರಭಾ ನದಿ ಖಾಲಿ: ಸರ್ಕಾರದ ವಿರುದ್ಧ ರೈತರು ಆಕ್ರೋಶ, ಉಗ್ರ ಪ್ರತಿಭಟನೆ ಎಚ್ಚರಿಕೆ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಗಂಗಾಧರ​ ಬ. ಸಾಬೋಜಿ

Updated on:Feb 19, 2024 | 9:54 PM

ಬಾಗಲಕೋಟೆ, ಫೆಬ್ರವರಿ 19: ಪ್ರತಿ ವರ್ಷ ಬರಗಾಲ (drought) ವಿಲ್ಲದ ಸಮಯದಲ್ಲೂ ಆ ನದಿ ಖಾಲಿಯಾಗಿದ್ದೇ ತಡ ನೀರು ಹರಿಸಲಾಗುತ್ತಿತ್ತು. ಆದರೆ ಈ ಬಾರಿ ಬರಗಾಲವಿದೆ ರೈತರ ಬದುಕು ದುಸ್ತರವಾಗಿದೆ. ಇಂತಹ ಸಮಯದಲ್ಲೂ ನದಿ ಖಾಲಿಯಾದರೂ ಹನಿ ನೀರು ಬಿಟ್ಟಿಲ್ಲ. ಇದರಿಂದ ರೈತರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಇಡೀ ಜಿಲ್ಲೆ ಬರಪೀಡಿತ ಜಿಲ್ಲೆಯಾಗಿದೆ. ಮಳೆಯಿಲ್ಲದೆ ಎಲ್ಲ ಜಲಮೂಲಗಳು ಬತ್ತಿ, ರೈತರ ಕೃಷಿಗೆ ಜಾನುವಾರುಗಳಿಗೆ ನೀರಿಲ್ಲದಂತಾಗಿದೆ. ಘಟಪ್ರಭಾ ನದಿ (Ghataprabha River) ಖಾಲಿಯಾಗಿದ್ದು, ಘಟಪ್ರಭಾ ತೀರದ ರೈತರ ಕೃಷಿ ಹಾಗೂ ಜಾನುವಾರುಗಳಿಗೆ ನೀರಿಲ್ಲದಂತಾಗಿದೆ. ಪ್ರತಿ ವರ್ಷವು ಘಟಪ್ರಭಾ ನದಿ ಖಾಲಿಯಾದಾಗ ಹಿಡಕಲ್‌ ಜಲಾಶಯದಿಂದ ನೀರು ಬಿಡುತ್ತ ಬರಲಾಗುತ್ತಿದೆ. ಆದರೆ ಈ ಬಾರಿ ನದಿ ಖಾಲಿಯಾಗಿ ತಿಂಗಳು ಕಳೆದರೂ ನೀರು ಬಿಟ್ಟಿಲ್ಲ. ಇದರಿಂದ ಘಟಪ್ರಭಾ ತೀರದ ರೈತರು ನೀರಿಲ್ಲದೆ ಪರದಾಡುತ್ತಿದ್ದಾರೆ.

ಈ ಬಗ್ಗೆ ಈಗಾಗಲೇ ‌ಮುಧೋಳ‌ ನಗರದಲ್ಲಿ ಒಂದು ಸುತ್ತು ರೈತರು ಪ್ರತಿಭಟನೆ ಮಾಡಿದ್ದಾರೆ. ನಮಗೆ ಒಂದು ಟಿಎಮ್​ಸಿ‌ ನೀರು ಸಾಲುವುದಿಲ್ಲ. ಘಟಪ್ರಭಾ ವ್ಯಾಪ್ತಿಯ ಕಟ್ಟ ಕಡೆ ರೈತನಿಗೂ ನೀರು ತಲುಪುವಷ್ಟು ನೀರು ಹರಿಸಬೇಕು. ಕೂಡಲೆ ನೀರು ಬಿಡದಿದ್ದರೆ ಮುಂದೆ ಪ್ರತಿಭಟನೆ ಉಗ್ರ ರೂಪ ಪಡೆಯುತ್ತದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಸೃಷ್ಟಿಯಾದ ಪಕ್ಷಿಗಳ ಲೋಕ; ಇಲ್ಲಿದೆ ಅದರ ಝಲಕ್​

ಜಿಲ್ಲೆಯಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ‌ಮೂರು ನದಿಗಳು ಹರಿಯುತ್ತವೆ. ಆದರೆ ಈಗ‌ ಮಳೆಯಿಲ್ಲದೇ ಮೂರು ನದಿಗಳು ಖಾಲಿ ಖಾಲಿಯಾಗಿವೆ. ಕೇವಲ‌ ನದಿಗಳು ಅಷ್ಟೇ ಅಲ್ಲದೆ ಕೆರೆ ಕಟ್ಟೆಗಳು ಬರಿದಾಗಿವೆ. ಇಂತಹ ಅವಧಿಯಲ್ಲಿ ಘಟಪ್ರಭಾ ತೀರದ ರೈತರು ನೀರಿಗಾಗಿ ಆಗ್ರಹ ಮಾಡುತ್ತಿದ್ದಾರೆ. ಬೆಳೆಗಳಿಗೆ ಜಾನುವಾರುಗಳಿಗೆ ನೀರಿಲ್ಲದೆ ರೈತರ ಬದುಕು ಕಂಗಾಲಾಗಿದೆ.

ಇದನ್ನೂ ಓದಿ: ನನ್ನ ಕ್ಷೇತ್ರದಲ್ಲಿ ಹೆಚ್ಚಿನ ದರಕ್ಕೆ ಟ್ಯಾಂಕರ್ ನೀರು ಮಾರುವಂತಿಲ್ಲ: ಶಾಸಕ‌ ಎಸ್​ಟಿ‌ ಸೋಮಶೇಖರ್​ ಎಚ್ಚರಿಕೆ

ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷ್ಯ ದೋರಣೆ ತಾಳುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಮಾತಾಡಿದ ಜಿಪಂ ಸಿಇಒ, ಈಗಾಗಲೇ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ ಬಗ್ಗೆ ಡಿಸಿ ಅವರ ನೇತ್ರತ್ವದಲ್ಲಿ ಸಭೆ ಮಾಡಲಾಗಿದೆ. ನೀರು ಬಿಡುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಜೊತೆಗೆ ನಮಗೆ ಹೆಚ್ಚಿನ ಪ್ರಮಾಣದ ನೀರು ಬೇಕು. ಕೇವಲ ಒಂದು ಟಿಎಮ್​ಸಿ ಬಿಟ್ಟರೆ ಅದು ಕೇವಲ‌‌ ಬೆಳಗಾವಿ ಜಿಲ್ಲೆಗೆ ಮಾತ್ರ ಸೀಮಿತ ಆಗುತ್ತದೆ. ಬಾಗಲಕೋಟೆ ಜಿಲ್ಲೆಯ ಘಟಪ್ರಭಾ ‌ಕಡೆ ಹಳ್ಳಿ ರೈತನಿಗೂ ತಲುಪುವಷ್ಟು ನೀರು ಬಿಡಲು ಮನವಿ ಮಾಡಿದ್ದೇವೆ. ಶೀಘ್ರದಲ್ಲೇ ನೀರು ಬಿಡುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:43 pm, Mon, 19 February 24

Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ