ಇಸ್ರೇಲ್​ನಲ್ಲಿ ಸಿಲುಕಿದ ಬಾಗಲಕೋಟೆ ಯುವತಿ: ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರಿಂದ ಪೂಜಾ ತಾಯಿ ಅವರೊಂದಿಗೆ ಮಾತನಾಡಿಸಿದ್ದಾರೆ. 'ಪೂಜಾ ಅವರೊಂದಿಗೆ ಮಾತನಾಡಿದ್ದೇನೆ, ಅವರು ಸುರಕ್ಷಿತವಾಗಿದ್ದಾರೆ. ನೀವು ಯಾವುದೇ ಆತಂಕಕ್ಕೊಳಗಾಗಬೇಡಿ ಎಂದು ಹೇಳುವ ಮೂಲಕ ಪೂಜಾ ಕುಟುಂಬಸ್ಥರಿಗೆ  ಸಿಎಂ ಧೈರ್ಯ ತುಂಬಿದ್ದಾರೆ.

ಬಾಗಲಕೋಟೆ, ಅ.11: ಇಸ್ರೇಲ್​(Israel) ಹಾಗೂ ಪ್ಯಾಲೆಸ್ತೀನ್​ ನಡುವೆ ಸಂಘರ್ಷ ನಡೆಯುತ್ತಿದ್ದು, ಈವರೆಗೂ 3 ಸಾವಿರಕ್ಕಿಂತ ಅಧಿಕ ಜನ ಸಾವನ್ನಪ್ಪಿದ್ದಾರೆ. ಈ ಸ್ಥಳದಲ್ಲಿ ಕರ್ನಾಟಕದ ಬಾಗಲಕೋಟೆ(Bagalakote) ಜಿಲ್ಲೆಯ ರಬಕವಿ ಪಟ್ಟಣದ ಸಾಪ್ಟವೇರ್ ಇಂಜಿನಿಯರ್ ಪೂಜಾ ಉಮದಿ ಕೂಡ ಇದ್ದು, ಇಂದು(ಅ.11) ಕರೆಯ ಮೂಲಕ ಯುವತಿಯ  ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಧೈರ್ಯ ಹೇಳಿದ್ದಾರೆ. ಹೌದು, ಪೂಜಾ ಹಾಗೂ ಅವರ ಕುಟುಂಬಸ್ಥರೊಂದಿಗೆ ಸಚಿವ ಆರ್ ಬಿ ತಿಮ್ಮಾಪೂರ ಕೂಡ ಮಾತುಕತೆ ನಡೆಸಿದ್ದು, ಪೂಜಾ ಅವರೊಂದಿಗೆ ಅಲ್ಲಿನ ಪರಿಸ್ಥಿತಿ ಹಾಗೂ ಸುರಕ್ಷತೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಈ ಕುರಿತು ಪೂಜಾ ಕುಟುಂಬಸ್ಥರಿಗೆ ಧೈರ್ಯ ಹೇಳುವಂತೆ ಮುಖ್ಯಮಂತ್ರಿಗಳಿಗೆ ಸಚಿವ ಆರ್ ಬಿ ತಿಮ್ಮಾಪೂರ ಮನವಿ ಮಾಡಿದ್ದು, ಅದರಂತೆ ಮ್ಮ ಮೊಬೈಲ್​ನಲ್ಲಿಯೇ ಕರೆ ಮಾಡಿಕೊಟ್ಟು, ಸಿದ್ದರಾಮಯ್ಯ ಅವರಿಂದ ಪೂಜಾ ತಾಯಿ ಅವರೊಂದಿಗೆ ಮಾತನಾಡಿಸಿದ್ದಾರೆ. ‘ಪೂಜಾ ಅವರೊಂದಿಗೆ ಮಾತನಾಡಿದ್ದೇನೆ, ಅವರು ಸುರಕ್ಷಿತವಾಗಿದ್ದಾರೆ. ನೀವು ಯಾವುದೇ ಆತಂಕಕ್ಕೊಳಗಾಗಬೇಡಿ ಎಂದು ಹೇಳುವ ಮೂಲಕ ಪೂಜಾ ಕುಟುಂಬಸ್ಥರಿಗೆ  ಸಿಎಂ ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ:ಹಮಾಸ್​ ಉಗ್ರರ ವಶದಿಂದ ಗಾಜಾ ಗಡಿಯನ್ನು ಹಿಂಪಡೆದ ಇಸ್ರೇಲ್​, ಸಂಘರ್ಷದಲ್ಲಿ ಇಲ್ಲಿಯವರೆಗೆ 3 ಸಾವಿರಕ್ಕೂ ಅಧಿಕ ಮಂದಿ ಸಾವು

ಕಳೆದ‌ ಮುಕ್ಕಾಲು ವರ್ಷದಿಂದ ಇಸ್ರೇಲ್​ನಲ್ಲಿರುವ ಪೂಜಾ

ಇನ್ನು ಪೂಜಾ ಅವರು ಕಳೆದ ವರ್ಷದಿಂದ ಇಸ್ರೇಲ್​ನಲ್ಲಿದ್ದು, ಖಾಸಗಿ ಕಂಪನಿಯಲ್ಲಿ ಸಾಪ್ಟವೇರ್ ಇಂಜಿನಿಯರ್ ಆಗಿದ್ದಾರೆ. ಈ ಘಟನೆಯಿಂದ ನಿನ್ನೆ‌(ಅ.10) ಆಕೆಯ ತಂದೆ-ತಾಯಿ ಆತಂಕ ವ್ಯಕ್ತಪಡಿಸಿದ್ದರು. ಇದರಿಂದ ಬಾಗಲಕೋಟೆ ಉಸ್ತುವಾರಿ ಸಚಿವ ತಿಮ್ಮಾಪುರ‌ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಧೈರ್ಯ ತುಂಬಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:08 pm, Wed, 11 October 23

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us