AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ‌ಕಾಲೇಜುಗಳಿಗೆ ಸೆಡ್ಡು ಹೊಡೆದ ಸರ್ಕಾರಿ ಪದವಿ ಕಾಲೇಜು: ಕ್ಯಾಂಪಸ್ ಸಂದರ್ಶನದಲ್ಲಿ 2000ಕ್ಕೂ ಅಧಿಕ‌ ವಿದ್ಯಾರ್ಥಿಗಳಿಗೆ ಜಾಬ್

ಸರ್ಕಾರಿ ಕಾಲೇಜುಗಳೆಂದರೆ ಜನರಿಗೆ ಅದೇನೊ ಒಂಥರಾ ತಿರಸ್ಕಾರದ ಮನೋಭಾವ. ಅಲ್ಲಿ ಸರಿಯಾಗಿ ಶಿಕ್ಷಣ ಸಿಗುವುದಿಲ್ಲ. ಅಲ್ಲಿ ಓದಿದರೆ ಮಕ್ಕಳಿಗೆ ಭವಿಷ್ಯವಿಲ್ಲ ಎಂಬವರೇ ಹೆಚ್ಚು. ಆದರೆ ಅದೊಂದು ಸರ್ಕಾರಿ ಪದವಿ ಕಾಲೇಜು ಇಂತಹ ನಂಬಿಕೆಗೆ ವಿರುದ್ಧವಾಗಿದೆ. ಅಲ್ಲಿ ಸಾವಿರಾರು ವಿದ್ಯಾರ್ಥಿಗಳು ಓದುತ್ತಿದ್ದು, ಐದು ವರ್ಷದಲ್ಲಿ 2000ಕ್ಕೂ ಅಧಿಕ ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಉದ್ಯೋಗ ಪಡೆದಿದ್ದಾರೆ.

ಖಾಸಗಿ ‌ಕಾಲೇಜುಗಳಿಗೆ ಸೆಡ್ಡು ಹೊಡೆದ ಸರ್ಕಾರಿ ಪದವಿ ಕಾಲೇಜು: ಕ್ಯಾಂಪಸ್ ಸಂದರ್ಶನದಲ್ಲಿ 2000ಕ್ಕೂ ಅಧಿಕ‌ ವಿದ್ಯಾರ್ಥಿಗಳಿಗೆ ಜಾಬ್
ಬಾಗಲಕೋಟೆ ಸರ್ಕಾರಿ ಪದವಿ ಕಾಲೇಜು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 05, 2025 | 12:05 PM

Share

ಬಾಗಲಕೋಟೆ, ಜುಲೈ 5: ಒಂದು ಕಡೆ ಕಾಲೇಜಿನಲ್ಲಿ ಕಂಪ್ಯೂಟರ್ ಶಿಕ್ಷಣ. ಇನ್ನೊಂದೆಡೆ ಮನದಲ್ಲಿ ಹತ್ತಾರು ಕನಸು, ಕೈಯಲ್ಲಿ ಬ್ಯಾಗ್ ಹಿಡಿದುಕೊಂಡು ಬಸ್ ಏರುತ್ತಿರುವ ವಿದ್ಯಾರ್ಥಿಗಳು. ಕಾಲೇಜು ಸಿಬ್ಬಂದಿಯಿಂದ ಸಂಭ್ರಮದ ಬೀಳ್ಕೊಡುಗೆ. ಇದೆಲ್ಲ ಕಂಡುಬಂದಿದ್ದು ಬಾಗಲಕೋಟೆ ಸರ್ಕಾರಿ ಪದವಿ (Bagalkote Government Degree College) ಕಾಲೇಜಿನಲ್ಲಿ. ಬಾಗಲಕೋಟೆ ಸರ್ಕಾರಿ ಪದವಿ ಕಾಲೇಜು ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗುತ್ತಿದೆ. ಯಾವುದೇ ಖಾಸಗಿ ಕಾಲೇಜಿಗೂ ಕಡಿಮೆಯಿಲ್ಲದಂತೆ ಸಾಧನೆ ಮಾಡುತ್ತಿದೆ. ಕಳೆದ ಐದಾರು ವರ್ಷದಿಂದ ಕಾಲೇಜಿನಿಂದ ಎರಡು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದ (Campus Iterview) ಮೂಲಕ ಕೆಲಸ ಪಡೆದುಕೊಂಡಿದ್ದಾರೆ. ಇಲ್ಲಿ ಬರಿ ಬೋಧನೆ ಮಾತ್ರವಲ್ಲ ಬದುಕಿಗೆ ದಾರಿ ತೋರಲಾಗುತ್ತಿದೆ. ಯಾವುದೇ ಖಾಸಗಿ ಕಾಲೇಜಿಗೆ ಕಡಿಮೆಯಿಲ್ಲದಂತೆ ಕ್ಯಾಂಪಸ್ ಸಂದರ್ಶನ ನಡೆಸಲಾಗಿದೆ. ಆ ಮೂಲಕ ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಕಲ್ಪಿಸಲಾಗುತ್ತಿದೆ.

ಈ ವರ್ಷ ಬರೊಬ್ಬರಿ 200 ವಿದ್ಯಾರ್ಥಿಗಳು‌ ಕ್ಯಾಂಪಸ್ ಸಂದರ್ಶನದ ಮೂಲಕ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಪಡೆದಿದ್ದಾರೆ. ‘ಎಜಾಕಿ’ ಎಂಬ ಎರೊಸ್ಪೇಸ್ ಉತ್ಪನ್ನಗಳ ತಯಾರಿಕೆ ಕಂಪನಿಯಲ್ಲಿ 200 ಜನ ಉದ್ಯೋಗ ಪಡೆದಿದ್ದಾರೆ. ಅದರಲ್ಲಿ ಕಲಾ ವಿಭಾಗದ 80 ಜನ, ವಾಣಿಜ್ಯ ವಿಭಾಗದ 40, ವಿಜ್ಞಾನ ವಿಭಾಗದ 60, ಬಿಸಿಎ ಕಲಿತ 20 ಮಂದಿ ವಿದ್ಯಾರ್ಥಿಗಳಿದ್ದಾರೆ.

Bagalkote Govt College Campus

ಇದನ್ನೂ ಓದಿ
Image
ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ!
Image
ಕ್ಷುಲ್ಲಕ ಕಾರಣಕ್ಕೆ ಕಿರಿಕ್: ಮಾಡೆಲ್ ಮೇಲೆ ಬಸ್ ಸಿಬ್ಬಂದಿ ಹಲ್ಲೆ
Image
Karnataka Rains: ಮಳೆ ಆರ್ಭಟ, ಇಂದು ಕೂಡ ಶಾಲೆಗಳಿಗೆ ರಜೆ
Image
ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್!

ಬೆಂಗಳೂರಿನ‌ ‘ಎಜಾಕಿ’ ಕಂಪನಿ ಎರೊಸ್ಪೇಸ್ ಉತ್ಪನ್ನಗಳ ತಯಾರಿಕಾ ಘಟಕವಾಗಿದ್ದು, ಊಟ ವಸತಿ ನೀಡಿ ಪ್ರಾರಂಭಿಕ ಹಂತದಲ್ಲೇ 21 ಸಾವಿರ ವೇತನ ನೀಡಲಾಗುತ್ತಿದೆ. ಉದ್ಯೋಗಕ್ಕೆ ಹೊರಟ ವಿಧ್ಯಾರ್ಥಿಗಳನ್ನು ಕಾಲೇಜು ಸಿಬ್ಬಂದಿ ಸಂಭ್ರಮದಿಂದ ಬೀಳ್ಕೊಟ್ಟಿದ್ದಾರೆ.

ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎ, ಬಿಕಾಮ್, ಬಿಎಸ್​​ಸಿ, ಬಿಸಿಎ, ಬಿಬಿಎ ಇದ್ದು ಒಟ್ಟು 3 ಸಾವಿರ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಇಷ್ಟೊಂದು ಮಂದಿ ವಿದ್ಯಾರ್ಥಿಗಳು ಕಾಲೇಜಿನ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಶಿಕ್ಷಣದ ಜೊತೆಗೆ ಉದ್ಯೋಗ ಕಲ್ಪಿಸುತ್ತಿರುವುದು ಈ ಕಾಲೇಜಿನ ಮತ್ತೊಂದು ಗರಿಮೆಯಾಗಿದೆ.

ಐದಾರು ಕಂಪನಿಗಳ ಜತೆ ಕ್ಯಾಂಪಸ್​ ಸಂದರ್ಶನಕ್ಕೆ ಒಪ್ಪಂದ

ಕಾಲೇಜು ಕ್ವೆಸ್, ಟಾಟಾ, ಮಹಿಂದ್ರಾ, ಎಜಾಕಿ ಸೇರಿದಂತೆ ಐದಾರು ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿದೆ. ಪ್ರತಿ ವರ್ಷ ಕ್ಯಾಂಪಸ್ ಸಂದರ್ಶನ ನಡೆಸಿ ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ಕಳುಹಿಸಿಕೊಡಲಾಗುತ್ತಿದೆ.

ಪದವಿ ಪ್ರಥಮ ವರ್ಷದಿಂದಲೇ ಕೌಶಲ ತರಬೇತಿ

Bagalkote Govt College Students

ಪದವಿ ಪ್ರಥಮ ವರ್ಷದಿಂದಲೇ ಉದ್ಯೋಗ ಕೌಶಲ್ಯ ತರಭೇತಿ ನೀಡಿ ಮಾನಸಿಕವಾಗಿ ದೈಹಿಕವಾಗಿ, ಶೈಕ್ಷಣಿಕವಾಗಿ ವಿದ್ಯಾರ್ಥಿಗಳನ್ನು ಸಿದ್ದಪಡಿಸಲಾಗುತ್ತಿದೆ. ಇದರಿಂದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಯಾವುದೇ ಖಾಸಗಿ ಕಾಲೇಜಿಗೆ ಕಡಿಮೆಯಿಲ್ಲದಂತೆ ಉದ್ಯೋಗ ಅರ್ಹತೆ ಪಡೆದು ತಯಾರಾಗುತ್ತಿದ್ದಾರೆ‌.

ಇದನ್ನೂ ಓದಿ: ದೇಶದ ಮೊದಲ ಎಂಜಿನಿಯರಿಂಗ್ ಕಾಲೇಜು ಯಾವುದು ಗೊತ್ತಾ?

ಒಟ್ಟಿನಲ್ಲಿ ಉತ್ತಮ ಆಡಳಿತ‌ ಮಂಡಳಿ ಇದ್ದು, ಯೋಗ್ಯ ಶಿಕ್ಷಣ ನೀಡಿದರೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳು ಕೂಡ ಭವಿಷ್ಯವನ್ನು ಚೆನ್ನಾಗಿ ರೂಪಿಸಿಕೊಳ್ಳಬಹುದು ಎಂಬುದಕ್ಕೆ ಈ ಕಾಲೇಜು ಸಾಕ್ಷಿಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 am, Sat, 5 July 25

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ