ಮಗಳ ಮದುವೆಗೆ ಖರೀದಿಸಿದ್ದ ಚಿನ್ನವನ್ನು ಹೋಟೆಲ್​​ನಲ್ಲಿ ಮರೆತುಹೋದ ತಾಯಿ: ಮುಂದಾಗಿದ್ದು ಭಾವುಕ ಕ್ಷಣ

ಬಾಗಲಕೋಟೆಯ ಕೆರೂರಿನಲ್ಲಿ ಹೃದಯಸ್ಪರ್ಶಿ ಘಟನೆ ನಡೆದಿದೆ. ಮಗಳ ಮದುವೆಗೆಂದು 1.5 ಲಕ್ಷ ಮೌಲ್ಯದ ಚಿನ್ನ ಖರೀದಿಸಿದ್ದ ಮಹಿಳೆ ಹೋಟೆಲ್‌ನಲ್ಲಿ ಅದನ್ನು ಮರೆತಿದ್ದರು. ಮೂರು ದಿನಗಳ ನಂತರ ಹೋಟೆಲ್ ಮಾಲೀಕ ಪ್ರಾಮಾಣಿಕವಾಗಿ ಚಿನ್ನವನ್ನು ಮಹಿಳೆಗೆ ಹಿಂದಿರುಗಿಸಿದ್ದಾರೆ. ಅವರ ಮಾನವೀಯತೆ ಮತ್ತು ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಈ ವೇಳೆ ಮಹಿಳೆ ಕೆಲ ಕಾಲ ಭಾವುಕರಾದ ಪ್ರಸಂಗವೂ ನಡೆದಿದೆ.

ಮಗಳ ಮದುವೆಗೆ ಖರೀದಿಸಿದ್ದ ಚಿನ್ನವನ್ನು ಹೋಟೆಲ್​​ನಲ್ಲಿ ಮರೆತುಹೋದ ತಾಯಿ: ಮುಂದಾಗಿದ್ದು ಭಾವುಕ ಕ್ಷಣ
ಮಹಿಳೆಗೆ ಬಂಗಾರ ಹಸ್ತಾಂತರ
Image Credit source: Tv9 Kannada
Edited By:

Updated on: May 06, 2026 | 4:31 PM

ಬಾಗಲಕೋಟೆ, ಮೇ 06:  ಮಗಳ ಮದುವೆಗೆಂದು ಖರೀದಿಸಿದ್ದ ಸುಮಾರು ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಅಭರಣವನ್ನು ಮಹಿಳೆಯೋರ್ವರು ಹೋಟೆಲ್​​ನಲ್ಲಿಯೇ ಮರೆತು ಬಿಟ್ಟು ಹೋಗಿದ್ದು, ಇದನ್ನು ಹೋಟೆಲ್​​ ಮಾಲೀಕರು ಮರಳಿ ಆಕೆಗೆ ಹಸ್ತಾಂತರಿಸಿರುವ ಘಟನೆಗೆ ಬಾಗಲಕೋಟೆ ಸಾಕ್ಷಿಯಾಗಿದೆ. ಸಿಕ್ಕ ಬಂಗಾರವನ್ನು ಇಟ್ಟುಕೊಳ್ಳದೆ ಅದರ ನಿಜ ವಾರಸುದಾರರಿಗೆ ಹಸ್ತಾಂತರಿಸಿದ ಹೋಟೆಲ್​​ ಮಾಲೀಕನ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಮರಳಿ ಬಂಗಾರ ಸಿಕ್ಕ ಹಿನ್ನೆಲೆ ಮಹಿಳೆ ಕೆಲ ಕಾಲ ಭಾವುಕರಾದ ಪ್ರಸಂಗವೂ ನಡೆದಿದೆ.

  • ಮಗಳ ಮದುವೆಗೆ ಖರೀದಿಸಿದ್ದ ಚಿನ್ನವನ್ನು ಹೋಟೆಲ್​​ನಲ್ಲಿ ಮರೆತ ತಾಯಿ
  • ಆಭರಣವನ್ನು ಮರಳಿ ಹಿಂದಿರುಗಿಸಿ ಹೋಟೆಲ್​​ ಮಾಲೀಕರ ಮಾನವೀಯತೆ
  • ಬಾದಾಮಿ ತಾಲೂಕಿನ ಕೆರೂರ ಪಟ್ಟಣದ ಹೋಟೆಲ್​​ ಒಂದರಲ್ಲಿ ಘಟನೆ

ಇದನ್ನೂ ಓದಿ: ಬಾಗಲಕೋಟೆ ಕಾರ್ಮಿಕರ ಖಾತೆಗೆ ಕೋಟಿ ಕೋಟಿ ಹಣ; ಮುಂದಾಗಿದ್ದೇನು ಗೊತ್ತಾ?

ಬಾಗಲಕೋಟೆ ಜಿಲ್ಲೆಯ ಬೆಳ್ಳಿಖಿಂಡಿ ಗ್ರಾಮದ ಲಕ್ಷ್ಮವ್ವ ಮುದನೂರು ಎಂಬ ಮಹಿಳೆ ಮಗಳ ಮದುವೆಗೆಂದು ಖರೀದಿಸಿದ್ದ ಚಿನ್ನದ ಜೊತೆ ಬಾದಾಮಿ ತಾಲೂಕಿನ ಕೆರೂರ ಪಟ್ಟಣದ ಹೋಟೆಲ್​​ ಒಂದಕ್ಕೆ ಟಿಫಿನ್​​ ತಿನ್ನಲೆಂದು ತೆರಳಿದ್ದರು. ತಿಂಡಿ ತಿಂದ ಬಳಿಕ ತಾವು ಖರೀದಿಸಿ ತಂದಿದ್ದ ಚಿನ್ನದ ಗೋರಮಾಳ ಸರವನ್ನ ಮರೆತು ಹೋಟೆಲ್​​ನಲ್ಲಿಯೇ ಬಿಟ್ಟು ತೆರಳಿದ್ದರು. ಯಾರೋ ಚಿನ್ನವನ್ನು ಬಿಟ್ಟು ಹೋಗಿರುವ ವಿಷಯ ತಿಳಿಯುತ್ತಿದ್ದಂತೆ ಹೊಟೇಲ್ ಮಾಲೀಕ ಹುಸೇನಸಾಬ್ ಹಾಗೂ ಆತನ ತಾಯಿ ಮಾಸಾಬಿ ಅದನ್ನು ಭದ್ರವಾಗಿ ಎತ್ತಿಟ್ಟಿದ್ದರು. ಇದಾದ ಮೂರು ದಿನಗಳ ಬಳಿಕ ಲಕ್ಷ್ಮವ್ವ ತಾನು ಮರೆತು ಬಿಟ್ಟು ಹೋಗಿದ್ದ ಆಭರಣದ ಬಗ್ಗೆ ವಿಚಾರಿಸಿಕೊಂಡು ಬಂದಿದ್ದಾರೆ. ಈ ವೇಳೆ ಆಕೆಯ ಬಳಿ ಆಭರಣದ ಕುರುಹು ಕೇಳಿರುವ ಹೋಟೆಲ್​​ ಮಾಲೀಕರು ಚಿನ್ನ ಲಕ್ಷ್ಮವ್ವಗ್ಗೇ ಸೇರಿದ್ದೆಂದು ಖಚಿತಪಡಿಸಿಕೊಂಡು ಅದನ್ನು ಅವರಿಗೆ ಹಿಂದಿರುಗಿಸಿದ್ದಾರೆ.

ಹೋಟೆಲ್​​ ಮಾಲೀಕರ ಮಾನವೀಯತೆಗೆ ಬಹುಪರಾಕ್​​

ಮಾನವೀಯತೆಯ ದೃಷ್ಟಿಯಿಂದ ತಮಗೆ ಸಿಕ್ಕಿದ್ದ ಚಿನ್ನಾಭರಣವನ್ನು ವಾರಸುದಾರರಿಗೆ ಮರಳಿ ಹಸ್ತಾಂತರಿಸಿರುವ ಹೊಟೇಲ್ ಮಾಲೀಕ ಹುಸೇನ್ ಸಾಬ್ ಮತ್ತು ಅವರ ತಾಯಿ ಮಾಸಾಬಿ ಅವರ ಕಾರ್ಯಕ್ಕೆ ಲಕ್ಷ್ಮವ್ವ ಮೆಚ್ಚುಗೆ ವ್ಯಕ್ತಪಡಿಸಿದ್ದು, ನೀನು ಸಹ ಒಬ್ಬ ನನ್ನ ಮನೆಯ ಮಗಳು ಎಂದು ಮಾಸಾಬಿ ಅವರಿಗೆ ಸೀರೆ ನೀಡಿ ಧನ್ಯವಾದ ಅರ್ಪಿಸಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us