AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲಿ 20 ವರ್ಷದಿಂದ ಬಿಜೆಪಿಯ ಅದೇ ಅಭ್ಯರ್ಥಿ ವಿಜಯ ಸಾಧಿಸುತ್ತಿದ್ದಾರೆ, ಕಾಂಗ್ರೆಸ್​ ಮಾತ್ರ​ ಸೋಲುತ್ತಲೇ ಇದೆ!

ಬಾಗಲಕೋಟೆ ‌ಲೋಕಸಭೆ ಕ್ಷೇತ್ರ ಘಟಾನುಘಟಿಗಳ ಅಖಾಡಕ್ಕೆ ಸಾಕ್ಷಿಯಾಗಿದೆ. 1991 ರಲ್ಲಿ ಬಾಗಲಕೋಟೆ ಲೋಕಸಭೆ ಚುನಾವಣೆಯಲ್ಲಿ ರಾಮಕೃಷ್ಣ ಹೆಗಡೆ ಅವರು ಸಿದ್ದು ನ್ಯಾಮಗೌಡ ವಿರುದ್ಧ ಸ್ಪರ್ಧೆ ‌ಮಾಡಿ ಸೋತಿದ್ದು ಇತಿಹಾಸ. ವೀರೇಂದ್ರ ಪಾಟೀಲರು 1980 ರ ದಶಕದಲ್ಲಿ ಇಲ್ಲಿಂದ‌ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದಾರೆ. ಈ ಮಧ್ಯೆ, ಪಿಸಿ ಗದ್ದಿಗೌಡರ ಐದನೇ ಬಾರಿ ಇಲ್ಲಿ ಸತತ ಗೆಲುವು ಸಾಧಿಸಲು ಬಿಜೆಪಿ ಅವರಿಗೆ ಟಿಕೆಟ್ ನೀಡಿದೆ.

ಅಲ್ಲಿ 20 ವರ್ಷದಿಂದ ಬಿಜೆಪಿಯ ಅದೇ ಅಭ್ಯರ್ಥಿ ವಿಜಯ ಸಾಧಿಸುತ್ತಿದ್ದಾರೆ, ಕಾಂಗ್ರೆಸ್​ ಮಾತ್ರ​ ಸೋಲುತ್ತಲೇ ಇದೆ!
ಅಲ್ಲಿ 20 ವರ್ಷದಿಂದ ಬಿಜೆಪಿಯ ಈ ಅಭ್ಯರ್ಥಿಯೇ ವಿಜಯ ಸಾಧಿಸುತ್ತಿದ್ದಾರೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Mar 29, 2024 | 2:32 PM

Share

ಆ ಕ್ಷೇತ್ರದಲ್ಲಿ 20 ವರ್ಷಗಳ ಕಾಲ ಲೋಕಸಭೆ ಬಿಜೆಪಿ ಪಾಲಾಗಿದೆ. ಬಿಜೆಪಿಯ ಏಕಮೇವ ಅಭ್ಯರ್ಥಿ 20 ವರ್ಷ ಸಂಸದರಾಗಿದ್ದಾರೆ. ಆದರೆ ಕೈ ಪಾಳಯದಲ್ಲಿ ಮಾತ್ರ ಪ್ರತಿ ಚುನಾವಣೆಯಲ್ಲೂ ಹೊಸ ಮುಖಕ್ಕೆ ಮಣೆ ಹಾಕುತ್ತಲೇ ಬಂದಿದೆ. ಸತತ ಸೋಲುತ್ತಲೇ ಇದೆ. ಈಗ ಮತ್ತೆ ಕಾಂಗ್ರೆಸ್ ಹೊಸಮುಖಕ್ಕೆ ಟಿಕೆಟ್ ನೀಡಿದ್ದು ಅಸಮಾಧಾನ ಸ್ಪೋಟವಾಗಿದೆ.

ಬಾಗಲಕೋಟೆ ರಾಜಕೀಯ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದುಕೊಂಡ ಕ್ಷೇತ್ರವಾಗಿದೆ. ರಾಮಕೃಷ್ಣ ಹೆಗಡೆ, ವೀರೇಂದ್ರ ಪಾಟಿಲ್, ಎಸ್ ನಿಜಲಿಂಗಪ್ಪನಂತವರು ಸ್ಪರ್ಧೆ ಮಾಡಿದಂತಹ ಜಿಲ್ಲೆ‌ ಬಾಗಲಕೋಟೆ. ಇಂತಹ ಕ್ಷೇತ್ರದಲ್ಲಿ ಇದೀಗ ಲೋಕಸಭೆ ಕಾವು ಹೆಚ್ಚಾಗಿದೆ. ಬಿಜೆಪಿ ಪಕ್ಷದಿಂದ ಪಿಸಿ ಗದ್ದಿಗೌಡರ ಐದನೇ ಬಾರಿ ಟಿಕೆಟ್ ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷ ಸಚಿವ ಶಿವಾನಂದ ‌ಪಾಟೀಲ್ ಮಗಳು ಸಂಯುಕ್ತಾ ಗೆ ಟಿಕೆಟ್ ನೀಡಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಹೊಸಮುಖಕ್ಕೆ ಮಣೆ ಹಾಕಿದೆ.

2009 ರಿಂದ ಪ್ರತಿ ಚುನಾವಣೆಯಲ್ಲೂ ಕೈ ಪಕ್ಷ ಹೊಸ ಅಭ್ಯರ್ಥಿಗೆ ಟಿಕೆಟ್ ನೀಡುತ್ತಾ ಬಂದಿದೆ. 2009ರಲ್ಲಿ ಜೆಟಿ ಪಾಟೀಲ್, 2014 ರಲ್ಲಿ ಅಜಯಕುಮಾರ ಸರನಾಯಕ, 2019 ರಲ್ಲಿ ವೀಣಾ ಕಾಶಪ್ಪನವರ, ಇದೀಗ 2024 ರಲ್ಲಿ ಸಂಯುಕ್ತಾ ಪಾಟೀಲ್ ಹೀಗೆ ನಿರಂತರವಾಗಿ ಹೊಸ ಅಭ್ಯರ್ಥಿಗೇ ಟಿಕೆಟ್ ನೀಡಲಾಗಿದೆ. ಆದರೆ ಇದು ಕಾಂಗ್ರೆಸ್ ಹಿನ್ನಡೆಗೆ ಒಂದು ಕಾರಣವಾಗಿದೆ.

ಜೊತೆಗೆ ಒಂದು ಸಾರಿ ಸೋತವರು ಮತ್ತೆ ನಿಂತರೆ ಅನುಕಂಪ ಅಲೆ ಇರುತ್ತದೆ. ಆದರೆ ಇಲ್ಲಿ ಅನುಕಂಪಕ್ಕೂ ಅವಕಾಶ ಇಲ್ಲದಂತಾಗಿದೆ. ಪ್ರತಿ ಬಾರಿ ಹೊಸ ಮುಖಕ್ಕೆ ಟಿಕೆಟ್ ನೀಡೋದರಿಂದ ಕ್ಷೇತ್ರಕ್ಕೆ ಪರಿಚಯ ಕೊರತೆ ಕಾಡುತ್ತದೆ. ಇದೆಲ್ಲ ಕಾರಣಗಳೂ ಕೂಡ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ ಎಂದು ರಾಜಕೀಯ ವಿಶ್ಲೇಷಕ ಶ್ರೀಶೈಲ ಬಿರಾದಾರ ವ್ಯಾಖ್ಯಾನಿಸಿದ್ದಾರೆ.

ಬಾಗಲಕೋಟೆ ‌ಲೋಕಸಭೆ ಕ್ಷೇತ್ರ ಘಟಾನುಘಟಿಗಳ ಅಖಾಡಕ್ಕೆ ಸಾಕ್ಷಿಯಾಗಿದೆ. ೧೯೯೧ ರಲ್ಲಿ ಬಾಗಲಕೋಟೆ ಲೋಕಸಭೆ ಚುನಾವಣೆಯಲ್ಲಿ ರಾಮಕೃಷ್ಣ ಹೆಗಡೆ ಅವರು ಸಿದ್ದು ನ್ಯಾಮಗೌಡ ವಿರುದ್ಧ ಸ್ಪರ್ಧೆ ‌ಮಾಡಿ ಸೋತಿದ್ದು ಇತಿಹಾಸ. ವೀರೇಂದ್ರ ಪಾಟೀಲರು 1980 ರ ದಶಕದಲ್ಲಿ ಇಲ್ಲಿಂದ‌ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದಾರೆ.

ಇಂತಹ ಕ್ಷೇತ್ರದಲ್ಲಿ ‌2004 ರಿಂದ ಗದ್ದಿಗೌಡರ ನಿರಂತರ ಗದ್ದುಗೆ ಹಿಡಿದಿದ್ದಾರೆ. ಗದ್ದಿಗೌಡರಗೆ ಎದುರಾಗಿ ‌ಕಾಂಗ್ರಸ್ ನ ಐದು ಅಭ್ಯರ್ಥಿಗಳು ಸ್ಪರ್ಧಿಸಿ ಸೋತಿದ್ದಾರೆ. ೨೦೦೪ ಆರ್ ಎಸ್ ಪಾಟೀಲ್‌ ಒಬ್ಬರನ್ನು ಬಿಟ್ಟು ಎಲ್ಲರೂ ಹೊಸಮುಖಗಳೇ ಆಗಿವೆ. ಈಗ ಅವರ ಎದುರು ಸಂಯುಕ್ತಾ ಪಾಟೀಲ್ ಮತ್ತೆ ಹೊಸಮುಖವಿದೆ. ಸಂಯುಕ್ತಾ ಪಾಟೀಲ್‌ ಸಚಿವ ಶಿವಾನಂದ ಪಾಟೀಲ್‌ ಮಗಳು, ವಿಜಯಪುರ ಡಿಸಿಸಿ ಬ್ಯಾಂಕ್ ನಿರ್ದೇಶಕಿ. ಇದು ಬಿಟ್ಟರೆ ಬೇರೆ ಯಾವುದೇ ಸರ್ಟಿಫಿಕೇಟ್ ಇಲ್ಲ. ಮೇಲಾಗಿ ಈಗ ಪರ ಜಿಲ್ಲೆಯವರು ಎಂಬ ಹಣೆಪಟ್ಟಿಯಿದೆ.

ಇನ್ನೊಂದೆಡೆ ವೀಣಾ ಕಾಶಪ್ಪನವರ ಅಸಮಾಧಾನ ಭುಗಿಲೆದ್ದಿದೆ. ಈ ಮಧ್ಯೆ 30 ವರ್ಷದ ಸಂಯುಕ್ತಾ ಪಾಟೀಲ್ ಎದುರಿಗೆ 40 ವರ್ಷ ರಾಜಕೀಯ ಅನುಭವ ಹೊಂದಿರುವ ಗದ್ದಿಗೌಡರ ಇದಾರೆ. ಒಂದೊಂದು ಸಂದರ್ಭದಲ್ಲಿ ಒಂದೊಂದು ಅಲೆ ಮೂಲಕ ಗದ್ದಿಗೌಡರ ಗೆದ್ದಿದ್ದಾರೆ ಅಷ್ಟೇ. ಹಾಗಂತ ಇದಕ್ಕೆ ಹೊಸ‌ಮುಖಗಳಿಗೆ ಟಿಕೆಟ್ ಕೊಟ್ಟಿರೋದು ಕಾರಣವಲ್ಲ. ಈ ಬಾರಿ ನಮ್ಮ‌ ಗೆಲುವು ಖಚಿತ ಎಂದು ಕೈ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ.

ಒಟ್ಟಿನಲ್ಲಿ ನಾಲ್ಕು ಚುನಾವಣೆಯಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿರುವ ಕಾಂಗ್ರೆಸ್, ಈ ಬಾರಿ ಗೆಲುವಿನ ಭಾರಿ ನಿರೀಕ್ಷೆಯಲ್ಲಿದೆ. ಹೊಸಮುಖ ಜೊತೆಗೆ ಪರ‌ಜಿಲ್ಲೆಯ ಸಂಯುಕ್ತಾ ಪಾಟೀಲ್ ವೀಣಾ ಅಸಮಾಧಾನದ ಮಧ್ಯೆ ಗೆಲುವು ಕಾಣ್ತಾರಾ ಚುನಾವಣೆಯೇ ಉತ್ತರಿಸಲಿದೆ.

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ