AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಣಾ ಕಾಶಪ್ಪನವರ್‌ಗೆ ಬಾಗಲಕೋಟೆ ಟಿಕೆಟ್‌ ಮಿಸ್? ಕಾಂಗ್ರೆಸ್‌ ವಿರುದ್ಧ ಬೆಂಬಲಿಗರ ಧರಣಿ!

ಲೋಕಸಭಾ ಟಿಕೆಟ್​ ಘೋಷಣೆಗೂ ಮುನ್ನವೇ ಕಾಂಗ್ರೆಸ್​ನಲ್ಲಿ ಅಸಮಾಧಾನದ ಜ್ವಾಲೆ ಹೊತ್ತಿ ಉರಿಯುತ್ತಿದೆ. ಬಾಗಲಕೋಟೆಯಿಂದ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್​ಗೆ ಕಾಂಗ್ರೆಸ್ ಟಿಕೆಟ್​ ಪಕ್ಕಾ ಎನ್ನುವ ವದಂತಿ ಬಯಲಾಗಿದ್ದೇ ತಡ, ವೀಣಾ ಕಾಶಪ್ಪನವರ್(Veena Kashappanavar)​ ಬೆಂಬಲಿಗರಂತೂ ಬೆಂಕಿಯಂತಾಗಿದ್ದಾರೆ.

ವೀಣಾ ಕಾಶಪ್ಪನವರ್‌ಗೆ ಬಾಗಲಕೋಟೆ ಟಿಕೆಟ್‌ ಮಿಸ್? ಕಾಂಗ್ರೆಸ್‌ ವಿರುದ್ಧ ಬೆಂಬಲಿಗರ ಧರಣಿ!
ವೀಣಾ ಕಾಶಪ್ಪನವರ್​​
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 20, 2024 | 4:05 PM

Share

ಬಾಗಲಕೋಟೆ, ಮಾ.20: ಕಾಂಗ್ರೆಸ್​ನಲ್ಲಿ ಲೋಕಸಭಾ ಟಿಕೆಟ್​ ಘೋಷಣೆಗೂ ಮುನ್ನವೇ ಅಸಮಾಧಾನದ ಜ್ವಾಲೆ ಹೊತ್ತಿ ಉರಿಯುತ್ತಿದೆ. ಬಾಗಲಕೋಟೆಯಿಂದ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್​ಗೆ ಕಾಂಗ್ರೆಸ್ ಟಿಕೆಟ್​ ಪಕ್ಕಾ ಎನ್ನುವ ವದಂತಿ ಬಯಲಾಗಿದ್ದೇ ತಡ, ವೀಣಾ ಕಾಶಪ್ಪನವರ್(Veena Kashappanavar)​ ಬೆಂಬಲಿಗರಂತೂ ಬೆಂಕಿಯಂತಾಗಿದ್ದಾರೆ. ಇಂದು(ಮಾ.20) ಬಾಗಲಕೋಟೆಯ ಕಾಂಗ್ರೆಸ್​ ಕಚೇರಿಗೆ ಮುತ್ತಿಗೆ ಹಾಕಿದ ವೀಣಾ ಕಾಶಪ್ಪನವರ್ ಬೆಂಬಲಿಗರು, ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗೆ ಮುಂದಾಗಿದ್ದರು. ಗೋ ಬ್ಯಾಕ್ ಸಂಯುಕ್ತಾ ಪಾಟೀಲ್​ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಬ್ಯಾರಿಕೇಡ್ ತಳ್ಳಿದ ಬೆಂಬಲಿಗರು, ಕಚೇರಿ ಒಳಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪ್ರತಿಭಟನಕಾರರನ್ನ ತಡೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಈ ಸಂದರ್ಭದಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದ್ದು, ಪೊಲೀಸರು ಒಳಗೆ ಬಿಡಿದಿದ್ದಕ್ಕೆ ಸಂಯುಕ್ತಾ ಪಾಟೀಲ್​ ವಿರುದ್ಧದ ಘೋಷಣೆಗಳನ್ನ ಸುಟ್ಟು ಹಾಕಿದರು.

ಇದನ್ನೂ ಓದಿ:ಲೋಕಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ನಳಿನ್ ಕುಮಾರ್ ಕಟೀಲ್, ಪ್ರತಾಪ್​ ಸಿಂಹ ಹೇಳಿದ್ದೇನು?

ಇತ್ತ ಬಾಗಲಕೋಟೆಯಲ್ಲಿ ಇಷ್ಟೆಲ್ಲ ಬೆಳವಣಿಗೆ ನಡೆಯುತ್ತಿದ್ರೆ, ಅತ್ತ ದೆಹಲಿಯಲ್ಲಿ ವೀಣಾ ಕಾಶಪ್ಪನವರ್ ಟಿಕೆಟ್​ಗಾಗಿ ಕಸರತ್ತು ಮಾಡುತ್ತಿದ್ದಾರೆ. ಇದೇ ವೇಳೆ ಟಿಕೆಟ್ ಮಿಸ್​ ಆಗಿದೆ ಎನ್ನುವ ವಿಚಾರಕ್ಕೆ ಮಾತನಾಡುವ ವೇಳೆ ವೀಣಾ ಅವರು ಕಣ್ಣೀರು ಹಾಕಿದರು. ನನ್ನ ತುಳಿಯುವ ಹುನ್ನಾರ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದೇ ವೇಳೆ ಪತ್ನಿ ಪರ ಮಾತಾಡುತ್ತಾ ತಮ್ಮದೇ ನಾಯಕರ ವಿರುದ್ಧ ಕಿಡಿಕಾರಿದ ವಿಜಯಾನಂದ ಕಾಶಪ್ಪನವರ್, ‘ಏನೇನು ಅನಾಹುತ ಆಗುತ್ತೋ ಆಗುತ್ತದೆ ಎಂದು ಗರಂ ಆದರು.

‘ನಮ್ಮ ನಾಯಕರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. ಚುನಾವಣಾ ಸಮಿತಿ ಸಭೆಯಲ್ಲಿ ವೀಣಾ ಹೆಸರು ಪ್ರಸ್ತಾಪವಾಗಿಲ್ಲ. ನಿಮ್ಮ ಸ್ಥಳೀಯ ನಾಯಕರ ಜೊತೆ ಚರ್ಚಿಸಲು ವರಿಷ್ಠರು ಹೇಳಿದ್ದಾರೆ. ನಮ್ಮ ಜಿಲ್ಲಾ ನಾಯಕರ ಜೊತೆ ಚರ್ಚಿಸಿ ತೀರ್ಮಾನಿಸುತ್ತೇನೆ. ರಾಜ್ಯ ನಾಯಕರು ಹೊಸ ಅಭ್ಯರ್ಥಿ ಬಗ್ಗೆ ಚರ್ಚಿಸಬೇಕಿತ್ತು. ಆದರೆ, ಸ್ಥಳೀಯ ನಾಯಕರು, ನನ್ನ ಜೊತೆ ಯಾರೂ ಚರ್ಚಿಸಿಲ್ಲ. ಈ ಮೂಲಕ ನಮ್ಮ ಕುಟುಂಬಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ದೆಹಲಿಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್​ ಸ್ವ ಪಕ್ಷದ ವಿರುದ್ದವೇ ಕಿಡಿಕಾರಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್