AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ದಿಢೀರ್​ ಕುಸಿತ: ಕಾರಣವಾಯ್ತಾ ಶಾಲೆಗಳ ಅವ್ಯವಸ್ಥೆ?

Bagalkote News: ಬಾಗಲಕೋಟೆ ಜಿಲ್ಲೆಯಲ್ಲಿ ಈ ವರ್ಷ ಸರಕಾರಿ ಶಾಲಾ ಮಕ್ಕಳ ಸಂಖ್ಯೆ ಬಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜಿಲ್ಲೆಯಲ್ಲಿ 1 ರಿಂದ 10ನೇ ತರಗತಿ ವರೆಗೂ ಒಟ್ಟು 1,437 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಇದ್ದು, ಬಹುತೇಕ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆ ಆಗಿರುವುದು ಕಂಡು ಬರುತ್ತಿದೆ.

ಬಾಗಲಕೋಟೆಯ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ದಿಢೀರ್​ ಕುಸಿತ: ಕಾರಣವಾಯ್ತಾ ಶಾಲೆಗಳ ಅವ್ಯವಸ್ಥೆ?
ಪ್ರಾತಿನಿಧಿಕ ಚಿತ್ರ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Aug 12, 2023 | 9:53 PM

Share

ಬಾಗಲಕೋಟೆ, ಆಗಸ್ಟ್​ 12: ಕೊರೊನಾ ಬಳಿಕ ಅನೇಕ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗಳಲ್ಲಿ (government school) ಪ್ರವೇಶ ಮಾಡಿಸಿದ್ದರು. ಕಾರಣ ಸ್ಕೂಲ್ ಸರಿಯಾಗಿ ನಡೆಯದಿದ್ದರೂ ಹೆಚ್ಚಿನ ಶುಲ್ಕ ಕಟ್ಟಬೇಕು ಎನ್ನುವ ಕಾರಣ ಅಡಗಿತ್ತು. ಇದೀಗ ಕೊರೊನಾ ಕಾಟ ಇಲ್ಲದೇ ಶಾಲೆ, ಕಾಲೇಜ್​ಗಳು ಯಥಾಸ್ಥಿತಿಯಲ್ಲಿ ನಡೆಯುತ್ತಿವೆ. ಆದರೆ ಪಾಲಕರು ಮತ್ತೆ ಖಾಸಗಿ ಶಾಲೆಗಳ ಕಡೆಗೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಪುನಃ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ದಿಢೀರ್ ಇಳಿಕೆ ಕಂಡಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಈ ವರ್ಷ ಸರಕಾರಿ ಶಾಲಾ ಮಕ್ಕಳ ಸಂಖ್ಯೆ ಬಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜಿಲ್ಲೆಯಲ್ಲಿ 1 ರಿಂದ 10ನೇ ತರಗತಿ ವರೆಗೂ ಒಟ್ಟು 1,437 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಇದ್ದು, ಬಹುತೇಕ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆ ಆಗಿರುವುದು ಕಂಡು ಬರುತ್ತಿದೆ.

ಸಂಖ್ಯೆ ಕುಸಿತಕ್ಕೆ ಶಾಲೆಗಳ ಅವ್ಯವಸ್ಥೆ ಕಾರಣವೇ?

ಸರ್ಕಾರಿ ಶಾಲೆಗಳಲ್ಲಿ ಸಾಕಷ್ಟು ಸಮಸ್ಯೆಗಳು ತಾಂಡವಾಡುತ್ತಿರುವುದು ಸಹ ಮಕ್ಕಳ ಸಂಖ್ಯೆ ಕಡಿಮೆ ಆಗಲು ಕಾರಣ ಎಂದು ಕೆಲ ಶಿಕ್ಷಕರು ಹೇಳುತ್ತಾರೆ. ಶಿಕ್ಷಕರ ಸಮಸ್ಯೆ ಒಂದು ಕಡೆಯಾದರೆ, ಕೊಠಡಿಗಳ ಸಮಸ್ಯೆಯೂ ಇದೆ. ಅನೇಕ ಸರ್ಕಾರಿ ಶಾಲೆಗಳಲ್ಲಿ ಕೊಠಡಿಗಳು ಮಳೆಗಾಲದಲ್ಲಿ ಸೋರುತ್ತಿರುವುದು, ಕಾಲಕಾಲಕ್ಕೆ ಅವುಗಳ ದುರಸ್ತಿಗೆ ಅನುದಾನ ಲಭ್ಯ ಇಲ್ಲದೇ ಇರುವುದು, ಜೊತೆಗೆ ಶಿಕ್ಷಕರನ್ನು ಶೈಕ್ಷಣಿಕ ಚಟುವಟಿಕೆ ಆಚೆ ಸರ್ಕಾರಿ ವಿವಿಧ ಕೆಲಸ ಕಾರ್ಯಗಳಿಗೆ ಬಳಕೆ ಮಾಡುತ್ತಿರುವುದು ಸಹ ಅನೇಕ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಹಚ್ಚುತ್ತಿರುವುದಕ್ಕೂ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಬೇವಿನ ಮರದಿಂದ ಜಿನುಗುತ್ತಿದೆ ಹಾಲಿನ ರೂಪದ ದ್ರವ

ಬಾಗಲಕೋಟೆ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂಬರ್ 4 ಹಾಗೂ ಇಳಕಲ್ ತಾಲೂಕಿನ ಗುಡೂರ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉದಾಹರಿಸಬಹುದು. ಬಾಗಲಕೋಟೆ ನಗರದ ಹೃದಯ ಭಾಗದಲ್ಲಿ ಇರುವ ನಂಬರ್ 4 ಶಾಲೆಯಲ್ಲಿ 1 ರಿಂದ 8ನೇ ತರಗತಿ ಇದ್ದು, ಎರಡು ವರ್ಷಗಳ ಹಿಂದೆ 1ನೇ ತರಗತಿಗೆ 60 ಮಕ್ಕಳು ದಾಖಲಾಗಿದ್ದರು. ಆದರೆ, ಕಳೆದ ವರ್ಷ ಅದು 20ಕ್ಕೆ ಇಳಿಕೆ ಆಗಿದ್ದು, ಶೈಕ್ಷಣಿಕ ವರ್ಷ 14ಕ್ಕೆ ಕುಸಿತ ಕಂಡಿದೆ.

ನಲಿ-ಕಲಿಗೆ 120 ರಿಂದ 80ಕ್ಕೆ ಬಂದಿದೆ. ಇನ್ನು ಒಟ್ಟಾರೆ, ಶಾಲೆಯಲ್ಲಿ ಕಳೆದ ವರ್ಷಕ್ಕಿಂತ ಈ ಸಲ ಒಂದು ನೂರು ಮಕ್ಕಳ ಸಂಖ್ಯೆ ಕಡಿಮೆ ಆಗಿರುವುದು ಕಂಡು ಬರುತ್ತಿದೆ. ಇಳಕಲ್ಲ ತಾಲೂಕಿನ ಗುಡೂರ ಗ್ರಾಮದ ಮಾದರಿ ಶಾಲೆಯಲ್ಲಿ ಸಹ ಒಂದು ನೂರು ಮಕ್ಕಳ ಸಂಖ್ಯೆ ಕಡಿಮೆ ಆಗಿದೆ. ಅಲ್ಲಿ ಮಕ್ಕಳಿಗೆ ಕೂಡಲು ಕೊಠಡಿಗಳ ಸಮಸ್ಯೆ, ಪೂರ್ಣಾವಧಿ ಶಿಕ್ಷಕರ ಕೊರತೆ, ಶೌಚಾಲಯ ಸಹ ಇಲ್ಲದ್ದು, ಹೀಗೆ ನಾನಾ ಕಾರಣಗಳಿಂದ ಮಕ್ಕಳ ದಾಖಲಾತಿ ಕುಸಿತವಾಗಿದೆ. ಇದು ಬರೀ ಒಂದು, ಎರಡು ಶಾಲೆಗಳ ಪರಿಸ್ಥಿತಿ ಅಲ್ಲ. ಅನೇಕ ಶಾಲೆಗಳಲ್ಲಿ ಇಂತದ್ದೆ ಸಮಸ್ಯೆ ತಾಂಡವವಾಡುತ್ತಿದೆ.

ಇದನ್ನೂ ಓದಿ: ಬಾಗಲಕೋಟೆ ಜಿಲ್ಲೆ ಜನರಲ್ಲಿ ಹೆಚ್ಚಾಯಿತು ಮದ್ರಾಸ್ ಐ ಭೀತಿ: ಪ್ರತಿದಿನ 40ಕ್ಕೂ ಹೆಚ್ಚು ರೋಗಿಗಳು ಜಿಲ್ಲಾಸ್ಪತ್ರೆಗೆ ಭೇಟಿ

ಸರ್ಕಾರ, ಹಾಗೂ ಶಿಕ್ಷಣ ಇಲಾಖೆ ಈ ಬಗ್ಗೆ ಗಮನ ಹರಿಸಿ, ಗುಣಮಟ್ಟದ ಶಿಕ್ಷಣ ಹಾಗೂ ಶಿಕ್ಷಕರು, ಕೊಠಡಿ ಸಮಸ್ಯೆ ಬಗೆಹರಿಸಬೇಕು. ಶಾಲೆಗಳನ್ನು ಸದೃಢಗೊಳಿಸಲು ಮುಂದಾಗಬೇಕು ಎಂದು ಅನೇಕ ಶಿಕ್ಷಕರು ಹೇಳುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಬಗ್ಗೆ ನೋಡೋದಾದರೆ 1 ರಿಂದ 10ನೇ ತರಗತಿ ವರೆಗೂ ಶೈಕ್ಷಣಿಕ ವರ್ಷ-ವಿದ್ಯಾರ್ಥಿಗಳ ಸಂಖ್ಯೆ ಈ ಕೆಳಗಿನಂತಿದೆ.

  • 2019-20 ರಲ್ಲಿ 2,08,416
  • 2020-21 ರಲ್ಲಿ 2,09,959
  • 2021-22 ರಲ್ಲಿ 2,24,265
  • 2022-23 ರಲ್ಲಿ 2,12,192
  • 2023-24 ರಲ್ಲಿ 1,98,312

ಸರ್ಕಾರಿ ಶಾಲೆಗಳಲ್ಲಿ ಇನ್ನೂ ಸಹ ಮಕ್ಕಳ ಪ್ರವೇಶಾತಿ ನಡೆಯುತ್ತಿದೆ. ಸದ್ಯ ಕಳೆದ ಸಲಕ್ಕಿಂತ 14 ರಿಂದ 15 ಸಾವಿರ ಮಕ್ಕಳ ದಾಖಲಾತಿ ಕಡಿಮೆ ಆಗಿದೆ. ಇನ್ನು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಅನೇಕ ಸೌಲಭ್ಯಗಳು ಇವೆ. ಸಮವಸ್ತ್ರ, ಪಠ್ಯಪುಸ್ತಕ ವಿತರಣೆ ಆಗಿದೆ. ಶಿಕ್ಷಕರ ಕೊರತೆ ಇರುವ ಕಡೆಗೆ ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದೆ. ಕೊಠಡಿ ಸಮಸ್ಯೆ ಎಲ್ಲ ಕಾರಣದಿಂದ ಮಕ್ಕಳ ಸಂಖ್ಯ ಕಡಿಮೆಯಾಗಿದೆ.

ಸರಕಾರಿ ಶಾಲೆಗೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗಿರುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಕೇಳಿದರೆ.ಹದಿನೈದು ಸಾವಿರ ಮಕ್ಕಳ ಸಂಖ್ಯೆ ಕಡಿಮೆ ಆಗಿದೆ.ಅಗಷ್ಟ್ ತಿಂಗಳವರೆಗೂ ದಾಖಲಾತಿ‌ ಮಾಡುವ ಅವಕಾಶವಿದೆ.ಆ ವೇಳೆಯಷ್ಟರಲ್ಲಿ ಮಕ್ಕಳ ಸಂಖ್ಯೆ ಏರಿಕೆಯಾಗಬಹುದು ಅಂತ ಸಮರ್ಥನೆ ಮಾಡಿಕೊಳ್ತಾರೆ. ವಿವಿಧ ಕಾರಣದಿಂದ‌ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಸರಕಾರ ಮಕ್ಕಳ ಸೆಳೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:51 pm, Sat, 12 August 23

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು