AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಭೀಕರ ಬರಕ್ಕೆ ತತ್ತರಿಸಿದ್ದ ರೈತನ ಕೈ ಹಿಡಿದ ದಾಳಿಂಬೆ ಬೆಳೆ

ಈ ವರ್ಷ ಎಲ್ಲ ಕಡೆ ಮಳೆಯಿಲ್ಲ, ಬೆಳೆಯಿಲ್ಲ. ಬಿತ್ತಿದ ಬೆಳೆಯೆಲ್ಲ ಹಾಳಾಗಿ ಭೀಕರ ಬರ ಆವರಿಸಿದೆ. ಇಂತಹ ವೇಳೆಯಲ್ಲಿ ಅದೊಂದು ಬೆಳೆ ಕೆಲ ರೈತರಿಗೆ ಆಸರೆಯಾಗಿದೆ. ಹೌದು, ಕಡಿಮೆ ಮಳೆಯಲ್ಲಿ ಬೆಳೆಯುವ ದಾಳಿಂಬೆ, ರೈತರ ಬದುಕಿಗೆ ಭರವಸೆ ನೀಡಿದ್ದು, ಕೈ ಸುಟ್ಟುಕೊಂಡ ರೈತರಿಗೆ ಸ್ವಲ್ಪ ಮುಲಾಮು ಹಚ್ಚಿದಂತಾಗಿದೆ. ಅಷ್ಟಕ್ಕೂ ದಾಳಿಂಬೆ ಬೆಳೆ ಹೇಗಿದೆ? ಈ ಸ್ಟೋರಿ ಓದಿ. 

ಬಾಗಲಕೋಟೆ: ಭೀಕರ ಬರಕ್ಕೆ ತತ್ತರಿಸಿದ್ದ ರೈತನ ಕೈ ಹಿಡಿದ ದಾಳಿಂಬೆ ಬೆಳೆ
ದಾಳಿಂಬೆ ಬೆಳೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Apr 26, 2024 | 8:01 PM

Share

ಬಾಗಲಕೋಟೆ, ಏ.26: ಬಾಗಲಕೋಟೆ ತಾಲ್ಲೂಕಿನ ಯಡಳ್ಳಿ ಗ್ರಾಮದ ರೈತ(Farmer) ಪಂಚಾಕ್ಷರಯ್ಯ ಎಂಬುವವರು ಒಟ್ಟು ನಾಲ್ಕು ಎಕರೆಯಲ್ಲಿ ದಾಳಿಂಬೆ(Pomegranate) ಬೆಳೆದಿದ್ದು, ಬರಗಾಲದಲ್ಲಿ ಈ ಬೆಳೆಯೇ ಇವರಿಗೆ ಆಸರೆಯಾಗಿದೆ. ಬಿತ್ತಿದ ಇತರ ಎಲ್ಲ ಬೆಳೆಗಳು ಮಳೆ ಇಲ್ಲದೆ, ಅಂತರ್ಜಲ ಕಡಿಮೆಯಾಗಿ ಬೋರ್ವೆಲ್ ನೀರು ಕೂಡ ಹರಿಸಲಾಗದೆ ಹಾಳಾಗಿವೆ. ಇಂತಹ ಹೊತ್ತಿನಲ್ಲಿ ಅಲ್ಪ ಬೋರ್ವೆಲ್ ನೀರಲ್ಲಿಯೇ ಡ್ರಿಪ್ ಇರಿಗೇಷನ್ ಮೂಲಕ ದಾಳಿಂಬೆ ಬೆಳೆಸಿದ್ದರು. ಈಗ ಬರಗಾಲದಲ್ಲಿ ಈ ಬೆಳೆಯೇ ಭರವಸೆ ಮೂಡಿಸಿದೆ. ಎಕರೆಗೆ 80 ಸಾವಿರದಿಂದ ಒಂದು ಲಕ್ಷ ಖರ್ಚು ಮಾಡಿದ್ದು, ಎರಡು ಲಕ್ಷ ಲಾಭ ಸಿಗುತ್ತಿದೆ.

ಬರಗಾಲದಲ್ಲಿ ಆಸರೆಯಾದ ದಾಳಿಂಬೆ

ಹೊಲದಲ್ಲಿ ದಾಳಿಂಬೆ ಸಮೃದ್ದವಾಗಿ ಬೆಳೆದಿದೆ. ಆದರೆ, ವಾತಾವರಣ ವೈಪರೀತ್ಯದಿಂದ ಸ್ವಲ್ಪಮಟ್ಟಿಗೆ ಗಿಡಗಳು ಹಾಳಾಗಿವೆ. ಇನ್ನು ಇದಕ್ಕೆ ರೋಗ ಬಾದೆ ಕೂಡ ಹೆಚ್ಚು, ಇವರೆಗೆ ದಾಳಿಂಬೆ ಬೆಳೆಯನ್ನ ಇತರೆ ಬೆಳೆಗೆ ಹೋಲಿಸಿದರೆ ಸ್ವಲ್ಪಮಟ್ಟಿಗೆ ಲಾಭ ತಂದಿದೆ. ಆದರೆ, ಪ್ರತಿ ಬಾರಿಯಂತೆ ದಾಳಿಂಬೆಗೆ ಸಿಗುವಷ್ಟು ನಿರೀಕ್ಷಿತ ಲಾಭ ಸಿಕ್ಕಿಲ್ಲ. ದಾಳಿಂಬೆ ಲಾಭದ ಲೆಕ್ಕದಲ್ಲಿ ನಿರಾಸೆ ಆದರೂ ಮುಳುಗುತ್ತಿರುವವನಿಗೆ ಹುಲ್ಲುಕಡ್ಡಿ ಆಸರೆಯೆಂಬಂತೆ ರೈತರಿಗೆ ಬರಗಾಲದಲ್ಲಿ ಇತರೆ ಬೆಳೆಗಳ ಪೈಕಿ ಇದು ಆಸರೆಯಾಗಿದೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ಬಿಸಿಲಿನ ಹೊಡೆತಕ್ಕೆ ಅರಳದ ಹೂ: ಬಾಡಿತು ಹೂ ಬೆಳೆಗಾರರ ಬದುಕು

ಕಳೆದ ವರ್ಷಕ್ಕಿಂತ ಈ ವರ್ಷ ದಾಳಿಂಬೆ ಬೆಲೆ ಕಡಿಮೆಯಾಗಿ ಹೆಚ್ಚು ಲಾಭ ಕೈ ಸೇರಿಲ್ಲ. ಕಳೆದ ವರ್ಷ ಹತ್ತು ಕೆಜಿಯ ಒಂದು ಬಾಕ್ಸ್​ಗೆ 2500 ರಿಂದ 2600 ರೂ ಇತ್ತು. ಆದರೆ, ಈ ವರ್ಷ ಅದು 1200 ರೂ.ಗೆ ಇಳಿದಿದೆ. ಈ ಲೆಕ್ಕದಲ್ಲಿ ದಾಳಿಂಬೆ ಆದಾಯ ಕಡಿಮೆಯಾಗಿದೆ. ಸೂಕ್ತ ಬೆಲೆ ಸಿಕ್ಕರೆ ಎಕರೆಗೆ 7 ರಿಂದ 8 ಲಕ್ಷ ಲಾಭ ಆಗುತ್ತಿತ್ತು.ಇದನ್ನು ಹೈದರಾಬಾದ್ ಹಾಗೂ ಮೈಸೂರಿಗೆ ಈ ರೈತರು ಮಾರಾಟ ಮಾಡುತ್ತಾರೆ. ಖರೀಧಿದಾರರು ಇಲ್ಲಿಗೆ ಬಂದು ಖರೀದಿ ಮಾಡುತ್ತಾರೆ. ನಿರೀಕ್ಷಿತ ಲಾಭ ಬರದಿದ್ದರೂ ಬರಗಾಲದಲ್ಲಿ ದಾಳಿಂಬೆ ಅಲ್ಪಮಟ್ಟಿಗೆ ಆಸರೆಯಾಗಿದೆ ಎಂದು ರೈತ ಗೂಳಪ್ಪ ಅವರು ಹೇಳುತ್ತಾರೆ.

ಎಲ್ಲ ಕಡೆ ಬರಗಾಲದಿಂದ ಬೆಳೆ ಹಾಳಾಗಿ ಕಂಗೆಟ್ಟ ರೈತರಿಗೆ ದಾಳಿಂಬೆ ಬೆಳೆ ಬೂಸ್ಟ್ ನೀಡಿದಂತಾಗಿದೆ. ಅಲ್ಪ ನೀರಲ್ಲಿ ಬೆಳೆಯುವ ದಾಳಿಂಬೆ, ಈ ರೈತರ ಬದುಕಿಗೆ ಆಸರೆಯಾಗಿದ್ದು, ಅನ್ನದಾತನಿಗೆ ಕಷ್ಟ ಕಾಲದಲ್ಲಿ ಕೈ ಹಿಡಿದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ