Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷೆಗೆ ಕ್ಷಣಗಣನೆ: ಇನ್ನೂ ಹಾಲ್​ ಟಿಕೆಟ್​ ಸಿಗದೇ ವಿದ್ಯಾರ್ಥಿಗಳು ಕಂಗಾಲು, ಪೋಷಕರು ಆತಂಕ

ಬಾಗಲಕೋಟೆಯ ಸರ್ಕಾರಿ ಶಾಲೆಯಲ್ಲಿ ಎಂಟು ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಿಂದಾಗಿ ಎಸ್ಎಸ್ಎಲ್ಸಿ ಹಾಲ್ ಟಿಕೆಟ್ ನಿರಾಕರಿಸಲಾಗಿದೆ. ಈ ವಿಚಾರವಾಗಿ ಪೋಷಕರು ಮತ್ತು ಮುಖ್ಯ ಶಿಕ್ಷಕಿರ ಮಧ್ಯ ಮಾತಿನಿ ಚಕಮಕಿ ನಡೆದಿದೆ. ಉದ್ದೇಶಪೂರ್ವಕ ಹಾಜರಾತಿ ಕಡಿಮೆ ಕೊಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಬಿಇಒ ಪರಿಸ್ಥಿತಿಯನ್ನು ಪರಿಶೀಲಿಸಿ ಎರಡನೇ ಪರೀಕ್ಷೆಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ.

SSLC ಪರೀಕ್ಷೆಗೆ ಕ್ಷಣಗಣನೆ: ಇನ್ನೂ ಹಾಲ್​ ಟಿಕೆಟ್​ ಸಿಗದೇ ವಿದ್ಯಾರ್ಥಿಗಳು ಕಂಗಾಲು, ಪೋಷಕರು ಆತಂಕ
SSLC ಪರೀಕ್ಷೆಗೆ ಕ್ಷಣಗಣನೆ: ಇನ್ನೂ ಹಾಲ್​ ಟಿಕೆಟ್​ ಸಿಗದೇ ವಿದ್ಯಾರ್ಥಿಗಳು ಕಂಗಾಲು, ಪೋಷಕರು ಆತಂಕ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 20, 2025 | 9:49 PM

ಬಾಗಲಕೋಟೆ, ಮಾರ್ಚ್​ 20: ಅವರು ಎಲ್ಲ ವಿದ್ಯಾರ್ಥಿಗಳಂತೆ ಶಾಲೆಗೆ ಎಸ್​ಎಸ್​​ಎಲ್​​ಸಿ (SSLC) ಹಾಲ್‌ ಟಿಕೆಟ್ ಪಡೆಯುವುದಕ್ಕೆ ಹೋಗಿದ್ದರು. ಆದರೆ ‌ಹಾಜರಾತಿ ಕೊರತೆ ಅಂತ ಅವರಿಗೆ ಹಾಲ್ ಟಿಕೆಟ್ ಬಂದಿಲ್ಲ. ಇದರಿಂದ ಪೋಷಕರನ್ನು‌ (parents) ಕರೆದುಕೊಂಡು ಬಂದ ವಿದ್ಯಾರ್ಥಿಗಳು ಮುಖ್ಯಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡರು. ಹಾಲ್ ಟಿಕೆಟ್ ವಿಚಾರವಾಗಿ ಸ್ಥಳದಲ್ಲಿ ಹೈಡ್ರಾಮಾವೇ ನಡೆದು ಹೋಗಿದೆ. ನಗರದ ಬಿಟಿಡಿಎ ಪ್ರೌಢ ಶಾಲೆಯಲ್ಲಿ ನಡೆದಿದೆ. ಫೇಲ್ ಆದರೆ ಶಾಲೆಗೆ ಕಳಂಕ‌ ಬರುತ್ತದೆ ಅಂತ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿರುವ ಪೋಷಕರು ಕಣ್ಣೀರು ಹಾಕಿದ್ದಾರೆ.

ಎಂಟು ವಿದ್ಯಾರ್ಥಿಗಳಿಗೆ ಸಿಗದ ಹಾಲ್ ಟಿಕೆಟ್

ಬಾಗಲಕೋಟೆಯ ಬಿಟಿಡಿಎ ಪ್ರೌಢಶಾಲೆಯಲ್ಲಿ ಎಸ್​ಎಸ್​ಎಲ್​​ಸಿಯ ಒಟ್ಟು ಎಂಟು ಜನ ವಿದ್ಯಾರ್ಥಿಗಳಿ ಹಾಲ್‌ ಟಿಕೆಟ್ ಬಂದಿಲ್ಲ. ಇದೇ ಕಾರಣಕ್ಕೆ‌ ಇಲ್ಲಿ ಹೈಡ್ರಾಮಾವೇ ಕ್ರಿಯೇಟ್ ಆಗಿದೆ. ವಿದ್ಯಾರ್ಥಿನಿಯರ ಹಾಜರಾತಿ ಕಡಿಮೆ ಹಿನ್ನೆಲೆ‌ ಹಾಲ್ ಟಿಕೆಟ್ ಬಂದಿಲ್ಲ. ಇದರಿಂದ ವಿದ್ಯಾರ್ಥಿಗಳು ಪೋಷಕರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ‌ ಬಂದ ಪೋಷಕರು, ಹಾಜರಾತಿ ತೋರಿಸಿ. ಅಭ್ಯಾಸದಲ್ಲಿ ವಿದ್ಯಾರ್ಥಿಗಳು ವೀಕ್‌ ಆಗಿದ್ದು, ಫೇಲ್ ಆದರೆ ಶಾಲೆಗೆ ಕೆಟ್ಟ ಹೆಸರು ಬರುತ್ತೆ ಅಂತ ಉದ್ದೇಶಪೂರ್ವಕವಾಗಿ ಹಾಜರಾತಿ ಕಡಿಮೆ ತೋರಿಸಿದ್ದೀರಿ. ಎಂಟು ಜನ ವಿದ್ಯಾರ್ಥಿಗಳ ‌ಭವಿಷ್ಯ ಹಾಳು ಮಾಡಿದ್ದೀರಿ ಎಂದು ತರಾಟೆ ತೆಗೆದುಕೊಂಡರು. ವಿದ್ಯಾರ್ಥಿಗಳು ನಾವು ಹಾಜರಾಗಿದ್ದೇವೆ, ಸಿಸಿ ಕ್ಯಾಮೆರಾ ಚೆಕ್ ‌ಮಾಡಿಸಿ, ಬಿಸಿಯೂಟ ಹಾಜರಾತಿ ಬೇಕಾದರೆ ಚೆಕ್‌ ಮಾಡಿ ಎಂದಿದ್ದಾರೆ.

ಇದನ್ನೂ ಓದಿ: SSLC Exams Preparation Tips: ನಾಳೆಯಿಂದ ಎಸ್​​ಎಸ್​​ಎಲ್​​ಸಿ ಪರೀಕ್ಷೆ ಆರಂಭ, ಒಂದು ದಿನದ ಸಿದ್ಧತೆ ಹೀಗಿರಲಿ

ಇದನ್ನೂ ಓದಿ
Image
ನಾಳೆ ಎಸ್​​ಎಸ್​​ಎಲ್​​ಸಿ ಪರೀಕ್ಷೆ ಆರಂಭ, ಭಯಪಡದೇ ಈ ರೀತಿ ಸಿದ್ಧತೆ ಮಾಡಿ
Image
ನಾಳೆ ಬೆಳಿಗ್ಗೆ ಕಡ್ಡಾಯವಾಗಿ SSLC ಮಕ್ಕಳು ಈ ಆಹಾರಗಳನ್ನು ತಿನ್ನಬೇಕು
Image
SSLC ಬಳಿಕ ಯಾವ ಕೋರ್ಸ್ ಆಯ್ಕೆ ಮಾಡಿದರೆ ಜಾಬ್ ಸಿಗೋದು ಗ್ಯಾರಂಟಿ
Image
9 ವಿವಿ ಮುಚ್ಚಲ್ಲ: ಬಿಎಸ್​​ವೈ ಮೊಮ್ಮಗನ ಉದಾಹರಣೆಯೊಂದಿಗೆ ಡಿಕೆಶಿ ಸ್ಪಷ್ಟನೆ

ಇದೆ ವೇಳೆ‌ ಮಾತಿಗೆ ಮಾತು ಬೆಳೆದು ಸ್ಥಳದಲ್ಲಿ ಹೈಡ್ರಾಮಾ ಕ್ರಿಯೇಟ್ ಆಯ್ತು. ಪೋಷಕರು ಮುಖ್ಯಶಿಕ್ಷಕಿ ಜಿಎಸ್ ಖೋತ್ ಅವರ ಜೊತೆಗೆ ವಾಗ್ವಾದಕ್ಕೆ ಇಳಿದರು. ಹಾಜರಾತಿ ಪುಸ್ತಕ ತೋರಿಸಿ ಎಂದು ಪಟ್ಟು ಹಿಡಿದರು. ಆಗ ಹಾಜರಾತಿ‌ ಪುಸ್ತಕ ತೋರಿಸಬೇಕಾಯಿತು. ಬಿಸಿಯೂಟದ ಹಾಜರಿ ಪುಸ್ತಕ ತೋರಿಸಿ ಎಂದರೆ ಅಡುಗೆ ಸಿಬ್ಬಂದಿಯೊಬ್ಬಳು ಕೀಲಿ ಒಯ್ದಿದ್ದಾಳೆ ಎಂದು ಬಿಸಿಯೂಟ ಹಾಜರಾತಿ ಪುಸ್ತಕವನ್ನು ಶಾಲಾ‌ ಸಿಬ್ಬಂದಿ ತೋರಿಸಲು ವಿಫಲರಾದರು.

ಉದ್ದೇಶಪೂರ್ವಕವಾಗಿ ಹಾಜರಾತಿ ಕಡಿಮೆ ತೋರಿಸಿಲ್ಲ ಎಂದ ಮುಖ್ಯಶಿಕ್ಷಕಿ‌ ಜಿಎಸ್ ಖೋತ್

ಇಷ್ಟರಲ್ಲಿ ಬಾಗಲಕೋಟೆ ಬಿಇಒ ಎಮ್‌ಎಸ್ ಬಡದಾನಿ ಶಾಲೆಗೆ ಆಗಮಿಸಿದರು. ಮುಖ್ಯಶಿಕ್ಷಕಿ ಜೊತೆ ಚರ್ಚಿಸಿದರು. ಪೋಷಕರು, ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡರು. ಈ ವೇಳೆ‌ ಮಾತಾಡಿದ ಮುಖ್ಯಶಿಕ್ಷಕಿ‌ ಜಿಎಸ್ ಖೋತ್, ಎಂಟು ವಿದ್ಯಾರ್ಥಿಗಳ ಹಾಜರಾತಿ ಕೊರತೆಯಿದೆ. ಹಾಜರಾತಿ ಕಡಿಮೆ ಇದ್ದ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದೇವೆ. ಆ ಪ್ರಕಾರ ಆನ್ ಲೈನ್ ಪ್ರಕ್ರಿಯೆಯಲ್ಲಿ ಹಾಲ್ ಟಿಕೆಟ್​ಗೆ ಅವರು ಅರ್ಹರಾಗಿಲ್ಲ. ಎರಡನೇ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುವುದು. ಉದ್ದೇಶಪೂರ್ವಕವಾಗಿ ಹಾಜರಾತಿ ಕಡಿಮೆ ತೋರಿಸಿಲ್ಲ ಎಂದು ಹೇಳಿದ್ದಾರೆ.

ಹಾಜರಾತಿ 75% ರಷ್ಟು ಇರಬೇಕು ಎಂಬ ನಿಯಮವಿದೆ. ಆದರೆ ಹಾಜರಾತಿ ಕಡಿಮೆಯಿದೆ. ಈ ಹಿನ್ನೆಲೆ ಹಾಲ್ ಟಿಕೆಟ್ ಸಿಕ್ಕಿಲ್ಲ. ಹಾಜರಾತಿ ಬಗ್ಗೆ ಪೋಷಕರಿಗೆ ನೀಡಿದ‌ ಮಾಹಿತಿ ಬಗ್ಗೆ ಮಾಹಿತಿ ಕಲೆ ಹಾಕಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುತ್ತೇವೆ. ಸದ್ಯಕ್ಕೆ ನಾಳಿನ‌ ಪರೀಕ್ಷೆಗೆ ಹಾಲ್ ಟಿಕೆಟ್ ಕೊಡುವುದು ಸಾಧ್ಯವಿಲ್ಲ. ಎರಡನೇ ಪರೀಕ್ಷೆಗೆ ಅವಕಾಶವಿದೆ ಎಂದಿದ್ದಾರೆ.

ಇದನ್ನೂ ಓದಿ: 9 ವಿಶ್ವವಿದ್ಯಾಲಯ ಮುಚ್ಚಲ್ಲ: ಬಿಎಸ್​​ವೈ ಮೊಮ್ಮಗನ ಉದಾಹರಣೆಯೊಂದಿಗೆ ಡಿಕೆಶಿ ಸ್ಪಷ್ಟನೆ

ಒಟ್ಟಿನಲ್ಲಿ ಹಾಜರಾತಿ ಕೊರತೆ ಅಂತ ಎಂಟು ವಿದ್ಯಾರ್ಥಿಗಳ ಪರೀಕ್ಷೆಗೆ ಅವಕಾಶ ಕೈ ತಪ್ಪಿದೆ. ಅಧಿಕಾರಿಗಳು ಎರಡನೇ ಪರೀಕ್ಷೆಗೆ ಅವಕಾಶ ಕಲ್ಪಿಸುವ ಭರವಸೆ ನೀಡಿದ್ದು, ಸದ್ಯ ವಿದ್ಯಾರ್ಥಿಗಳು, ಪೋಷಕರು ಶಾಂತವಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ