AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ಕಲ್ಲು ತೂರಾಟದಲ್ಲಿ ಭಾಗಿಯಾಗಿದ್ದ ಇಬ್ಬರು ಹಿಂದೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ
ಕಲ್ಲು ತೂರಾಟ ಕೇಸ್Image Credit source: google
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Feb 21, 2026 | 10:01 PM

Share

ಬಾಗಲಕೋಟೆ, ಫೆಬ್ರವರಿ 21: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಸಂಘರ್ಷಕ್ಕೆ ಬಾಗಲಕೋಟೆ (Bagalkote) ನಗರ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಮೊನ್ನೆ ರಾತ್ರಿಯಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ಮಟನ್ ಮಾರುಕಟ್ಟೆಯ ವ್ಯಾಪ್ತಿ ಕಲ್ಲು ಎಸೆದ ಹಿನ್ನೆಲೆ ಇಬ್ಬರು ಹಿಂದೂ ಕಾರ್ಯಕರ್ತರ ಮೇಲೆ ಎಫ್​ಐಆರ್​​ ದಾಖಲಾಗಿದ್ದು, ಬಾಗಲಕೋಟೆ ನಗರ ಠಾಣೆ ಪೊಲೀಸರಿಂದ ಬಂಧಿಸಲಾಗಿದೆ. ಅಶೋಕ್ ಬಾರಕೇರ (22) ಮತ್ತು ಸಂದೀಪ ಘೆರಡೆ (38) ಬಂಧಿತರು.

ಇಬ್ಬರು ಹಿಂದೂ ಕಾರ್ಯಕರ್ತ ಬಂಧನ

ಗಲಭೆ ಎಬ್ಬಿಸುವ ಉದ್ದೇಶ, ಪೊಲೀಸರ‌ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಖಾಸಗಿ ಆಸ್ತಿಗಳ ಮೇಲೆ ಕಲ್ಲು ತೂರಾಟ ಹಿನ್ನೆಲೆ ಇಬ್ಬರು ಹಿಂದು ಕಾರ್ಯಕರ್ತರನ್ನ ಬಂಧಿಸಲಾಗಿದೆ. ಅಶೋಕ್​ ವಶಕ್ಕೆ ಪಡೆಯಲು ಬೈಕ್​ ಹಿಂಬಾಲಿಸಿದಾಗ ಬಿದ್ದು ಗಾಯ ಮಾಡಿಕೊಂಡಿದ್ದ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಾರೆ. ಕಲ್ಲು ಎಸೆಯುವ ವಿಡಿಯೋ, ಫೋಟೋ ಸಾಕ್ಷಿ ಆಧರಿಸಿ ಬಂಧಿಸಿರುವ ಪೊಲೀಸರು ಸದ್ಯಕ್ಕೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮುತಾಲಿಕ್, ಪುನೀತ್ ಕೆರೆಹಳ್ಳಿಗೆ ನಿರ್ಬಂಧ

ಕಲ್ಲೆಸೆತ ಕೇಸ್​​ ವಿಚಾರವಾಗಿ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​​  ಮುತಾಲಿಕ್ ಮತ್ತು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ನಿರ್ಬಂಧ ಹೇರಲಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ ಸಮಾಜದಲ್ಲಿ ಅಶಾಂತಿ ಹರಡಬಾರದೆಂಬ ಮುನ್ನೆಚ್ಚೆರಿಕೆಯಿಂದ ಕ್ರಮ ಎಂದು ಸಬೂಬು ನೀಡಿ ಡಿಸಿ ಸಂಗಪ್ಪ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಇಂದಿನಿಂದ ಮಾ.21ರವರೆಗೆ ಇಬ್ಬರಿಗೂ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಮುಸ್ಲಿಮರ ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಪ್ರಲ್ಹಾದ್ ಜೋಶಿ ವಾಗ್ದಾಳಿ

ಇನ್ನು ನಿಷೇಧಾಜ್ಞೆ ನಡುವೆ ನವನಗರದಲ್ಲಿ ವಿರಾಟ ಹಿಂದೂ ಸಮಾವೇಶ ಅದ್ಧೂರಿಯಾಗಿ ನಡೆಯಿತು. ಶೋಭಾಯಾತ್ರೆಯಲ್ಲಿ ಪುಟಾಣಿ ಮಕ್ಕಳ ಭಜನೆ ಗಮನ ಸೆಳೆಯಿತು. ಸಂಸದರು, ಮಾಜಿ ಶಾಸಕರು ಯಾತ್ರೆಯಲ್ಲಿ ಭಾಗಿಯಾಗಿದ್ದರು. ಇನ್ನು ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಪರೇಡ್ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:56 pm, Sat, 21 February 26

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ