AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದಚಾರಿಗಳ ಮೇಲೆ ಬಿದ್ದ ಟಿಪ್ಪರ್ ವಾಹನ; ಒಂದೇ ಕುಟುಂಬದ ಐವರು ಸಾವು

ಬಾಗಲಕೋಟೆ(Bagalkote) ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ : ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬೀಳಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಾದಚಾರಿಗಳ ಮೇಲೆ ಬಿದ್ದ ಟಿಪ್ಪರ್ ವಾಹನ; ಒಂದೇ ಕುಟುಂಬದ ಐವರು ಸಾವು
ಪಾದಚಾರಿಗಳ ಮೇಲೆ ಬಿದ್ದ ಟಿಪ್ಪರ್ ವಾಹನ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Apr 14, 2024 | 9:28 PM

Share

ಬಾಗಲಕೋಟೆ, ಏ.14: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಧಾರುಣ ಘಟನೆ ಬಾಗಲಕೋಟೆ(Bagalkote) ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ ನಡೆದಿದೆ. ಬಾದದಿನ್ನಿ ಗ್ರಾಮದ ಯಂಕಪ್ಪ ತೋಳಮಟ್ಟಿ,  ಆತನ ಪತ್ನಿ ಯಲ್ಲವ್ವ, ಮಗ ಪುಂಡಲೀಕ, ಮಗಳು ನಾಗವ್ವ ಹಾಗೂ ಗಂಡ ಅಶೋಕ ಬಮ್ಮಣ್ಣವರ ಮೃತರು. ಇವರು ಹೊಲದ‌ ಕೆಲಸ ಮುಗಿಸಿ ರಸ್ತೆಪಕ್ಕ ನಿಂತಿದ್ದರು. ಈ ವೇಳೆ ಟೈರ್ ಬ್ಲಾಸ್ಟ್ ಆಗಿ ಟಿಪ್ಪರ್ ವಾಹನ ಒಂದೇ ಕುಟುಂಬದ ಐವರ ಮೇಲೆ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಬೀಳಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಸುವಿನ ಮೇಲೆ ಚಿರತೆ ದಾಳಿ; ಹಸು ಸಾವು

ಯಾದಗಿರಿ: ತಾಲೂಕಿನ ರಾಮಸಮುದ್ರ ಗ್ರಾಮದ ಮಲ್ಲರೆಡ್ಡಿ ಪೂಜಾರಿ ಅವರ ಜಮೀನಿನಲ್ಲಿ ಹಸುವಿನ ಮೇಲೆ ಚಿರತೆ ದಾಳಿ ಮಾಡಿದ್ದು, ಹಸು ಸಾವನ್ನಪ್ಪಿದೆ. ಮಲ್ಲರೆಡ್ಡಿ ಅವರಿಗೆ ಸೇರಿದ್ದ ಹಸು ಇದಾಗಿದ್ದು, ಹಸುವಿನ ಜೊತೆಗೆ ಎರಡು ಎತ್ತುಗಳ ಮೇಲೂ ದಾಳಿ ನಡೆಸಿದೆ. ಚಿರತೆ ದಾಳಿ ಘಟನೆಯಿಂದ ರೈತರಲ್ಲಿ ಭಯದಲ್ಲಿ ಇದ್ದಾರೆ. ಇನ್ನು ಇಷ್ಟೇಲ್ಲಾ ಘಟನೆ ನಡೆದರೂ ಸ್ಥಳಕ್ಕೆ ಭೇಟಿ ನೀಡದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಶಿರಸಿಯಲ್ಲಿ ಭೀಕರ ಅಪಘಾತ; ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಹರಿದ ಕಾರು

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು‌

ಕಲಬುರಗಿ: ಕಮಲಾಪುರ ಬಳಿ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತದಿಂದ ವಿಜಯಕುಮಾರ್ ಶಿವಶರಣಪ್ಪ ನಾಗನಳ್ಳಿ(45) ಎಂಬುವವರು ಸಾವನ್ನಪ್ಪಿದ ಘಟನೆ ನಡೆದಿದೆ. ಕಲಬುರಗಿ ನಗರದ ಬಿದ್ದಾಪುರ ಕಾಲೋನಿಯ ನಿವಾಸಿ ವಿಜಯಕುಮಾರ್, ಕಲಬುರಗಿಯಿಂದ ಭಾಲ್ಕಿಯಲ್ಲಿನ ತಮ್ಮ ಸಹೋದರಿಯ ಬಳಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ಕೊಂಡ್ಯೊಯುವಾಗಲೇ ಮೃತರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 pm, Sun, 14 April 24

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ