AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಕಟಾವು ಕಾರ್ಮಿಕರು ತೆರಳ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ತಾಯಿ, ಇಬ್ಬರು ಮಕ್ಕಳು ಸಾವು

ಬಾಗಲಕೋಟೆ ಜಿಲ್ಲೆಯ ಕಮತಗಿ ಬಳಿ ಕಬ್ಬು ಕಾರ್ಮಿಕರನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಒಂದು ಪಲ್ಟಿಯಾಗಿ ಭೀಕರ ದುರಂತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ತಾಯಿ ಕೂಡ ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಅಮೀನ್​ಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕಬ್ಬು ಕಟಾವು ಕಾರ್ಮಿಕರು ತೆರಳ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ತಾಯಿ, ಇಬ್ಬರು ಮಕ್ಕಳು ಸಾವು
Tractor Accident
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jan 10, 2026 | 6:13 PM

Share

ಬಾಗಲಕೋಟೆ, ಜನವರಿ 10: ಟ್ರ್ಯಾಕ್ಟರ್ ಪಲ್ಟಿ (Tractor Accident) ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ತಾಯಿ ಕೂಡ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿ ನಡೆದಿದೆ. ತಾಯಿ ರುಕ್ಮಿಣಿ ಬಾಯಿ ನಾಯಕ್(36), ಶಿವಾನಿ ನಾಯಕ್(6) ಮತ್ತು 4 ವರ್ಷದ ರೋಷನ್ ನಾಯಕ್ ಮೃತ ದುರ್ದೈವಿಗಳು. ಸದ್ಯ ಸ್ಥಳಕ್ಕೆ ಅಮೀನ್​ಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದದ್ದೇನು?

ಕಬ್ಬು ಕಟಾವು ಮಾಡುವ ಐವರು ಕಾರ್ಮಿಕರು ಟ್ರ್ಯಾಕ್ಟರ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಮತಗಿ ಬಳಿ ಹುಕ್ ಕಟ್ ಆಗಿ ಟ್ರ್ಯಾಕ್ಟರ್ ಪಲ್ಟಿ ಹೊಡೆದು ದುರಂತ ಸಂಭವಿಸಿದೆ. ಮೃತಪಟ್ಟ ದುರ್ದೈವಿಗಳು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಂಡಾ ನಿವಾಸಿಗಳು.

ಲಾರಿ ಡಿಕ್ಕಿ: ಕಾರು ಚಾಲಕ ಸ್ಥಳದಲ್ಲೇ ದುರ್ಮರಣ; ನಾಲ್ವರಿಗೆ ಗಂಭೀರ ಗಾಯ

ಲಾರಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ನಡೆದಿದೆ. ಕಾರು ಚಾಲಕ ಸೈಮನ್ ಸಾವನ್ನಪ್ಪಿದ್ದು, ಶಕೀಲಾ, ಹ್ಯಾಲಿಸನ್, ಲಿಯೋ, ಇಲಿಯಾಸ್ ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: ಸಾವಿನ ದವಡೆಯಿಂದ 8 ಜನ ಜಸ್ಟ್​ ಮಿಸ್!​​

ಬೆಂಗಳೂರಿನಿಂದ ದಾಬಸ್​​ಪೇಟೆಗೆ ಕಾರಿನಲ್ಲಿ ತೆರಳುತ್ತಿದ್ದರು. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೈಕ್​ ಅಪಘಾತ: ಸವಾರ ಸಾವು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕಟ್ಟೆಯಲ್ಲಿ ಬೈಕ್​ ಅಪಘಾತದಲ್ಲಿ ಸವಾರ ಚೇತನ್​ ಮೊಗವೀರ(24) ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ತಮ್ಮ ನಿವಾಸಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ

ರಸ್ತೆ ಕಾಮಗಾರಿ ವೇಳೆ ಸೂಚನಾಫಲಕ ಅಳವಡಿಕೆ ಮಾಡದಿದ್ದಕ್ಕೆ ಅಪಘಾತ ಸಂಭವಿಸಿರುವ ಆರೋಪ ಕೇಳಿಬಂದಿದೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ