ಬಾಗಲಕೋಟೆ: ಗುಳೇದಗುಡ್ಡದ ಇಲಾಳ ಮೇಳದಿಂದ ಹೊರಬಿದ್ದ ವರ್ಷದ ಮಳೆ, ಬೆಳೆ ಫಲ ಭವಿಷ್ಯ

ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ಪ್ರತಿ ವರ್ಷ ಯುಗಾದಿ ಪಾಂಡ್ಯ ದಿನದಂದು ಮಳೆ ಬೆಳೆ ಸೇರಿದಂತೆ ರಾಜಕೀಯ ಹಾಗೂ ವ್ಯಾಪಾರ ವಹಿವಾಟು ಬಗ್ಗೆ ಭವಿಷ್ಯ ಹೇಳುವ ವಿಶೇಷ ಪದ್ದತಿಯನ್ನು ಆಚರಿಸಿಕೊಂಡು‌ ಬಂದಿದ್ದು, ಈ ಬಾರಿಯ ಭವಿಷ್ಯ ಹೀಗಿದೆ.

ಬಾಗಲಕೋಟೆ: ಗುಳೇದಗುಡ್ಡದ ಇಲಾಳ ಮೇಳದಿಂದ ಹೊರಬಿದ್ದ ವರ್ಷದ ಮಳೆ, ಬೆಳೆ ಫಲ ಭವಿಷ್ಯ
ಬಾಗಲಕೋಟೆಯ ಇಲಾಳ ಮೇಳದಿಂದ ಹೊರಬಿದ್ದ ಫಲ ಭವಿಷ್ಯ
Follow us
|

Updated on:Mar 22, 2023 | 1:38 PM

ಬಾಗಲಕೋಟೆ: ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ಪ್ರತಿ ವರ್ಷ ಯುಗಾದಿ ಪಾಂಡ್ಯ ದಿನದಂದು ಮಳೆ ಬೆಳೆ ಸೇರಿದಂತೆ ರಾಜಕೀಯ ಹಾಗೂ ವ್ಯಾಪಾರ ವಹಿವಾಟು ಬಗ್ಗೆ ಭವಿಷ್ಯ ಹೇಳುವ ವಿಶೇಷ ಪದ್ದತಿಯನ್ನು ಆಚರಿಸಿಕೊಂಡು‌ ಬರಲಾಗುತ್ತಿದೆ. ಹಲವು ವರ್ಷಗಳಿಂದ ಇಂತಹ ಪದ್ದತಿಯನ್ನು ಮಾಡಿಕೊಂಡು ಬಂದಿದ್ದು, ಯುಗಾದಿ ದಿನದ ಭವಿಷ್ಯ ಕೇಳಲು ಬೆಳಿಗ್ಗೆ ಸಾವಿರಾರು ಜನರು ಒಂದೆಡೆ ಸೇರಿರುತ್ತಾರೆ. ಈ ಗುಳೇದಗುಡ್ಡದ ಇಲಾಳ ಮೇಳದಿಂದ ಮಳೆ, ಬೆಳೆ ಭವಿಷ್ಯ ನುಡಿಯುವ ವಾಡಿಕೆ ಹಿಂದಿನ ಕಾಲದಿಂದಲೂ ಬಂದಿದೆ. ತಲತಲಾಂತರದಿಂದ ಗುಳೇದಗುಡ್ಡದಲ್ಲಿ ನಡೆಯವ ಫಲ ಭವಿಷ್ಯವನ್ನ ಈಗ ಮಲ್ಲೇಶ್ ಗುಬ್ಬಿ ಎನ್ನುವರು ನುಡಿಯುತ್ತಿದ್ದಾರೆ.

ಪ್ರಸಕ್ತ ವರ್ಷದ ಭವಿಷ್ಯ ಹೀಗಿದೆ

ಮಾರವಾಡಿ ಬಗಿಚ್​ದಲ್ಲಿ ಯುಗಾದಿ ಪಾಡ್ಯದಂದು ನಡೆಯುವ ಈ ಫಲ ಭವಿಷ್ಯ. ಪ್ರಸಕ್ತ ವರ್ಷ 16 ಮಳೆಗಳಲ್ಲಿ 11 ಮಳೆಗಳು ಪೂರ್ಣ ಪ್ರಮಾಣದಲ್ಲಿ ಸುರಿಯಲಿವೆ ಎಂದು ಭವಿಷ್ಯ ನುಡಿಯಲಾಗಿದೆ. ಪಂಚಭೂತಗಳು ವಿಕೋಪಕ್ಕೆ ಹೋಗಲಿವೆಯಂತೆ. ಅಲ್ಲಲ್ಲಿ ಭೂಮಿ ಕುಸಿಯಲಿದ್ದು, ವಾಹನಗಳಿಗೆ ಬಹಳ ದಕ್ಕೆ ಆಗಲಿದೆಯಂತೆ. ಜೊತೆಗೆ ವಿಮಾನ ಅಪಘಾತ ಸಂಭವಿಸಲಿದೆ ಎಂದು ಎಚ್ಚರಿಸಿದ್ದಾರೆ. ಮೂರ್ನಾಲ್ಕು ರಾಜ್ಯಗಳಲ್ಲಿ ಚಂಡಮಾರುತ ಗಾಳಿ ಬೀಸಿ ತೊಂದರೆಯಾಗಲಿದ್ದು, ಗುಡುಗು, ಮಿಂಚು, ಸಿಡಿಲಿನ ಆರ್ಭಟದಿಂದ ಎರಡ್ಮೂರು ರಾಜ್ಯಗಳಲ್ಲಿ ಸಾವು ನೋವು ಉಂಟಾಗಲಿದೆ ಎನ್ನಲಾಗಿದೆ.

ಅರಣ್ಯ, ಗುಡ್ಡ, ವಿವಿಧ ಕಟ್ಟಡಗಳಲ್ಲಿ ಅಗ್ನಿ ಅವಘಡ ಸಂಭವಿಸಲಿದ್ದು, ಅಗ್ನಿಯಲ್ಲಿ ಕೆಲಸ ಮಾಡುವವರು ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ. ಇನ್ನು ಹಸಿರು ಬಣ್ಣದ ವಸ್ತುಗಳು ರಾರಾಜಿಸುತ್ತವೆ. ವ್ಯಾಪಾರ ವಹಿವಾಟು ಆನಂದಭರಿತವಾಗಲಿದೆ. ಕಾಯಿಲೆಗಳು ಹೆಚ್ಚಾಗಲಿದ್ದು, ಕಾಯಿಲೆ ಬಂದವರನ್ನು ಮುಟ್ಟಿದರೆ ಸಾಕು ಮನೆ ಮಂದಿಗೆಲ್ಲ ಹರಡಲಿದೆಯಂತೆ. ನೆಗಡಿ, ಕೆಮ್ಮು, ಜ್ವರದಿಂದ ಜನರು ಬಳಲಿದ್ದಾರೆ. ಈ ವರ್ಷ ಅಕ್ಟೋಬರ್, ನವಂಬರ್, ಡಿಸೆಂಬರ್​ನಲ್ಲಿ ಇದು ಉಲ್ಬಣಗೊಳ್ಳಲಿದೆ ಎಂದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:35 pm, Wed, 22 March 23

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?