AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಹೊಲಗಳು ಹಾಳಾಗುವುದಕ್ಕೆ ನೀವೇ ಕಾರಣ: ಸಚಿವ ಮರುಗೇಶ್ ನಿರಾಣಿ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ

ರಾತ್ರಿ ವೇಳೆ ವಿದ್ಯುತ್ ಪೂರೈಕೆ ಮಾಡುವುದರಿಂದ ಸಮಸ್ಯೆ ಆಗುತ್ತಿದೆ. ರಾತ್ರಿ ವೇಳೆ ಬೆಳೆಗೆ ನೀರು ಬಿಟ್ಟು ಮನೆಗೆ ವಾಪಸ್ ಬರುತ್ತೇವೆ. ನೀರು ಹೆಚ್ಚಾಗಿ ಹರಿದು ಭೂಮಿ ಹಾಳಾಗುತ್ತಿದೆ ಎಂದು ತಿಳಿಸಿದ ನಾಡಗೌಡ, ರಾತ್ರಿ ವೇಳೆ ಕೆಲಸ ಮಾಡುವುದು ಅಷ್ಟೊಂದು ಸುಲಭವಲ್ಲ ಎಂದರು.

ರೈತರ ಹೊಲಗಳು ಹಾಳಾಗುವುದಕ್ಕೆ ನೀವೇ ಕಾರಣ: ಸಚಿವ ಮರುಗೇಶ್ ನಿರಾಣಿ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ
ಮುರುಗೇಶ್ ನಿರಾಣಿ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ
TV9 Web
| Edited By: |

Updated on:Jan 30, 2022 | 4:55 PM

Share

ಬಾಗಲಕೋಟೆ: ಬಿಜೆಪಿ ಮುಖಂಡರೊಬ್ಬರು (BJP Leader) ಸಚಿವ ಮರುಗೇಶ್ ನಿರಾಣಿ (Murugesh Nirani) ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ಬಾಗಲಕೋಟೆ (Bagalkot) ಜಿಲ್ಲೆಯ ಬಾದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಲ್ಲಿ ನಡೆದಿದೆ. ಕಾರ್ಯಕ್ರಮದಲ್ಲಿ ರೈತರ ಪಂಪ್ ಸೆಟ್ಗೆ ವಿದ್ಯುತ್ ಸೌಲಭ್ಯದ ಬಗ್ಗೆ ಮರುಗೇಶ್ ನಿರಾಣಿ ಭಾಷಣ ಮಾಡುತ್ತಿದ್ದರು. ಈ ವೇಳೆ ಬಿಜೆಪಿಯ ನಾಡಗೌಡ ಎಂಬುವವರು ನಿರಾಣಿ ಭಾಷಣಕ್ಕೆ ಅಡ್ಡಿಪಡಿಸಿದ್ದಾರೆ. ರೈತರ ಹೊಲಗಳು ಹಾಳಾಗುವುದಕ್ಕೆ ನೀವೇ ಕಾರಣರಾಗಿದ್ದೀರಿ. ನಮಗೆ ಹಗಲಿನ ವೇಳೆ 12 ಗಂಟೆ ವಿದ್ಯುತ್ ಪೂರೈಕೆ ಮಾಡಿ ಅಂತ ಆಗ್ರಹಿಸಿದ್ದಾರೆ.

ರಾತ್ರಿ ವೇಳೆ ವಿದ್ಯುತ್ ಪೂರೈಕೆ ಮಾಡುವುದರಿಂದ ಸಮಸ್ಯೆ ಆಗುತ್ತಿದೆ. ರಾತ್ರಿ ವೇಳೆ ಬೆಳೆಗೆ ನೀರು ಬಿಟ್ಟು ಮನೆಗೆ ವಾಪಸ್ ಬರುತ್ತೇವೆ. ನೀರು ಹೆಚ್ಚಾಗಿ ಹರಿದು ಭೂಮಿ ಹಾಳಾಗುತ್ತಿದೆ ಎಂದು ತಿಳಿಸಿದ ನಾಡಗೌಡ, ರಾತ್ರಿ ವೇಳೆ ಕೆಲಸ ಮಾಡುವುದು ಅಷ್ಟೊಂದು ಸುಲಭವಲ್ಲ ಎಂದರು. ಅದಕ್ಕೆ ನಿರಾಣಿ ಎಲ್ಲರೂ ಸಮಯಕ್ಕೆ ಸರಿಯಾಗಿ ವಿದ್ಯುತ್ ಬಿಲ್ ಪಾವತಿಸಿ. 24 ಗಂಟೆಯೂ ವಿದ್ಯುತ್ ಪೂರೈಕೆ ಮಾಡುತ್ತೇವೆ ಅಂತ ನಿರಾಣಿ ಭರವಸೆ ನೀಡಿದರು.

ನಿಮಗೆ ಏನು ಕೆಲಸ ಬೇಕಾಗಿದೆ ಎಂದು ಫೋನ್ ಮುಖಾಂತರ ಅಥವಾ ಪತ್ರ ಮೂಲಕ ಹೇಳಿ. ನಿಶ್ಚಿತವಾಗಿಯೂ ಮಾಡುತ್ತೇವೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ನಾವು ಒಂದೇ ಕಾಲೇಜ್. ಇಬ್ಬರು ಮೂವತ್ತು ವರ್ಷದ ಸ್ನೇಹಿತರು. ಯಾವುದೇ ಪತ್ರಕೊಟ್ಟರೂ ಅವರು ನಮ್ಮ ಕೆಲಸ ಮಾಡಿ ಕೊಡುತ್ತಾರೆ. ಅದೇ ರೀತಿ ಯಡಿಯೂರಪ್ಪನವರು ಕೂಡಾ. ಅವರು ಮುಖ್ಯಮಂತ್ರಿ ಇರುವರೆಗೂ ವಿಜಯೇಂದ್ರ ರೀತಿ ಮುರಗೇಶ್ ನಿರಾಣಿಯನ್ನೂ ಕಂಡಿದ್ದಾರೆ ಅಂತ ನಿರಾಣಿ ಭಾಷಣದಲ್ಲಿ ಹೇಳಿದರು.

ಅವರಿಬ್ಬರಲ್ಲೂ ನಾನೂ ಒಬ್ಬವ ಎಂದು ಬಿಎಸ್​ವೈ ನೋಡಿಕೊಂಡು ಬಂದಿದ್ದಾರೆ. ಹೀಗೆಲ್ಲ ಇರುವಾಗ, ಬೀಳಗಿ ವಿಧಾನಸಭಾ ಕ್ಷೇತ್ರದ ಕನಸು ನನಸಾಗಲು ನಿಮ್ಮೆಲ್ಲರ ಆಶೀರ್ವಾದದಿಂದ ಕೆಲಸ ಮಾಡುತ್ತೀನಿ ಎಂದು ಮಾತನಾಡಿದ ನಿರಾಣಿ, ಪರೋಕ್ಷವಾಗಿ ಶಾಸಕ ಯತ್ನಾಳ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ

ಕನ್ನಡಿಗನ ಕಥೆಯಲ್ಲಿ ಬಾಲಿವುಡ್​ ನಟ ಅಕ್ಷಯ್​ ಕುಮಾರ್​? ಅಕ್ಕಿ ಪಾಲಿಗೆ ಮತ್ತೊಂದು ಬಯೋಪಿಕ್

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೋಲ್​ಮಾಲ್: ಕರ್ನಾಟಕ ಯೂತ್ ಕಾಂಗ್ರೆಸ್ ನಾಯಕರಿಂದಲೇ ಹೈಕಮಾಂಡ್​ಗೆ ದೂರು

Published On - 4:53 pm, Sun, 30 January 22

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ