AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಹೊಲಗಳು ಹಾಳಾಗುವುದಕ್ಕೆ ನೀವೇ ಕಾರಣ: ಸಚಿವ ಮರುಗೇಶ್ ನಿರಾಣಿ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ

ರಾತ್ರಿ ವೇಳೆ ವಿದ್ಯುತ್ ಪೂರೈಕೆ ಮಾಡುವುದರಿಂದ ಸಮಸ್ಯೆ ಆಗುತ್ತಿದೆ. ರಾತ್ರಿ ವೇಳೆ ಬೆಳೆಗೆ ನೀರು ಬಿಟ್ಟು ಮನೆಗೆ ವಾಪಸ್ ಬರುತ್ತೇವೆ. ನೀರು ಹೆಚ್ಚಾಗಿ ಹರಿದು ಭೂಮಿ ಹಾಳಾಗುತ್ತಿದೆ ಎಂದು ತಿಳಿಸಿದ ನಾಡಗೌಡ, ರಾತ್ರಿ ವೇಳೆ ಕೆಲಸ ಮಾಡುವುದು ಅಷ್ಟೊಂದು ಸುಲಭವಲ್ಲ ಎಂದರು.

ರೈತರ ಹೊಲಗಳು ಹಾಳಾಗುವುದಕ್ಕೆ ನೀವೇ ಕಾರಣ: ಸಚಿವ ಮರುಗೇಶ್ ನಿರಾಣಿ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ
ಮುರುಗೇಶ್ ನಿರಾಣಿ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ
TV9 Web
| Edited By: |

Updated on:Jan 30, 2022 | 4:55 PM

Share

ಬಾಗಲಕೋಟೆ: ಬಿಜೆಪಿ ಮುಖಂಡರೊಬ್ಬರು (BJP Leader) ಸಚಿವ ಮರುಗೇಶ್ ನಿರಾಣಿ (Murugesh Nirani) ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ಬಾಗಲಕೋಟೆ (Bagalkot) ಜಿಲ್ಲೆಯ ಬಾದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಲ್ಲಿ ನಡೆದಿದೆ. ಕಾರ್ಯಕ್ರಮದಲ್ಲಿ ರೈತರ ಪಂಪ್ ಸೆಟ್ಗೆ ವಿದ್ಯುತ್ ಸೌಲಭ್ಯದ ಬಗ್ಗೆ ಮರುಗೇಶ್ ನಿರಾಣಿ ಭಾಷಣ ಮಾಡುತ್ತಿದ್ದರು. ಈ ವೇಳೆ ಬಿಜೆಪಿಯ ನಾಡಗೌಡ ಎಂಬುವವರು ನಿರಾಣಿ ಭಾಷಣಕ್ಕೆ ಅಡ್ಡಿಪಡಿಸಿದ್ದಾರೆ. ರೈತರ ಹೊಲಗಳು ಹಾಳಾಗುವುದಕ್ಕೆ ನೀವೇ ಕಾರಣರಾಗಿದ್ದೀರಿ. ನಮಗೆ ಹಗಲಿನ ವೇಳೆ 12 ಗಂಟೆ ವಿದ್ಯುತ್ ಪೂರೈಕೆ ಮಾಡಿ ಅಂತ ಆಗ್ರಹಿಸಿದ್ದಾರೆ.

ರಾತ್ರಿ ವೇಳೆ ವಿದ್ಯುತ್ ಪೂರೈಕೆ ಮಾಡುವುದರಿಂದ ಸಮಸ್ಯೆ ಆಗುತ್ತಿದೆ. ರಾತ್ರಿ ವೇಳೆ ಬೆಳೆಗೆ ನೀರು ಬಿಟ್ಟು ಮನೆಗೆ ವಾಪಸ್ ಬರುತ್ತೇವೆ. ನೀರು ಹೆಚ್ಚಾಗಿ ಹರಿದು ಭೂಮಿ ಹಾಳಾಗುತ್ತಿದೆ ಎಂದು ತಿಳಿಸಿದ ನಾಡಗೌಡ, ರಾತ್ರಿ ವೇಳೆ ಕೆಲಸ ಮಾಡುವುದು ಅಷ್ಟೊಂದು ಸುಲಭವಲ್ಲ ಎಂದರು. ಅದಕ್ಕೆ ನಿರಾಣಿ ಎಲ್ಲರೂ ಸಮಯಕ್ಕೆ ಸರಿಯಾಗಿ ವಿದ್ಯುತ್ ಬಿಲ್ ಪಾವತಿಸಿ. 24 ಗಂಟೆಯೂ ವಿದ್ಯುತ್ ಪೂರೈಕೆ ಮಾಡುತ್ತೇವೆ ಅಂತ ನಿರಾಣಿ ಭರವಸೆ ನೀಡಿದರು.

ನಿಮಗೆ ಏನು ಕೆಲಸ ಬೇಕಾಗಿದೆ ಎಂದು ಫೋನ್ ಮುಖಾಂತರ ಅಥವಾ ಪತ್ರ ಮೂಲಕ ಹೇಳಿ. ನಿಶ್ಚಿತವಾಗಿಯೂ ಮಾಡುತ್ತೇವೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ನಾವು ಒಂದೇ ಕಾಲೇಜ್. ಇಬ್ಬರು ಮೂವತ್ತು ವರ್ಷದ ಸ್ನೇಹಿತರು. ಯಾವುದೇ ಪತ್ರಕೊಟ್ಟರೂ ಅವರು ನಮ್ಮ ಕೆಲಸ ಮಾಡಿ ಕೊಡುತ್ತಾರೆ. ಅದೇ ರೀತಿ ಯಡಿಯೂರಪ್ಪನವರು ಕೂಡಾ. ಅವರು ಮುಖ್ಯಮಂತ್ರಿ ಇರುವರೆಗೂ ವಿಜಯೇಂದ್ರ ರೀತಿ ಮುರಗೇಶ್ ನಿರಾಣಿಯನ್ನೂ ಕಂಡಿದ್ದಾರೆ ಅಂತ ನಿರಾಣಿ ಭಾಷಣದಲ್ಲಿ ಹೇಳಿದರು.

ಅವರಿಬ್ಬರಲ್ಲೂ ನಾನೂ ಒಬ್ಬವ ಎಂದು ಬಿಎಸ್​ವೈ ನೋಡಿಕೊಂಡು ಬಂದಿದ್ದಾರೆ. ಹೀಗೆಲ್ಲ ಇರುವಾಗ, ಬೀಳಗಿ ವಿಧಾನಸಭಾ ಕ್ಷೇತ್ರದ ಕನಸು ನನಸಾಗಲು ನಿಮ್ಮೆಲ್ಲರ ಆಶೀರ್ವಾದದಿಂದ ಕೆಲಸ ಮಾಡುತ್ತೀನಿ ಎಂದು ಮಾತನಾಡಿದ ನಿರಾಣಿ, ಪರೋಕ್ಷವಾಗಿ ಶಾಸಕ ಯತ್ನಾಳ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ

ಕನ್ನಡಿಗನ ಕಥೆಯಲ್ಲಿ ಬಾಲಿವುಡ್​ ನಟ ಅಕ್ಷಯ್​ ಕುಮಾರ್​? ಅಕ್ಕಿ ಪಾಲಿಗೆ ಮತ್ತೊಂದು ಬಯೋಪಿಕ್

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೋಲ್​ಮಾಲ್: ಕರ್ನಾಟಕ ಯೂತ್ ಕಾಂಗ್ರೆಸ್ ನಾಯಕರಿಂದಲೇ ಹೈಕಮಾಂಡ್​ಗೆ ದೂರು

Published On - 4:53 pm, Sun, 30 January 22

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು