AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಮುರುಗೇಶ್ ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಫೋಟ; ಕೆಲಸಕ್ಕೆ ಸೇರಿದ ಮೊದಲ ದಿನವೇ ಕಾರ್ಮಿಕನ ಸಾವು

Murugesh Nirani: ಸಚಿವ ಮುರುಗೇಶ್ ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಫೋಟ ಸಂಭವಿಸಿದೆ.

ಸಚಿವ ಮುರುಗೇಶ್ ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಫೋಟ; ಕೆಲಸಕ್ಕೆ ಸೇರಿದ ಮೊದಲ ದಿನವೇ ಕಾರ್ಮಿಕನ ಸಾವು
ಗುರುನಾಥ ಹುಚ್ಚಣ್ಣನವರ್
TV9 Web
| Updated By: ಆಯೇಷಾ ಬಾನು|

Updated on:Feb 10, 2023 | 10:53 AM

Share

ಬಾಗಲಕೋಟೆ: ಸಕ್ಕರೆ ಕಾರ್ಖಾನೆಯ ಬಾಯ್ಲರ್ ದಿಡೀರ್ ಓಪನ್ ಆಗಿ ಅದರಿಂದ ಬಂದಂತಹ ಬಿಸಿ ಹಬೆಗೆ ಓರ್ವ ಕಾರ್ಮಿಕ ಸ್ಥಳದಲ್ಲಿ ಮೃತಪಟ್ಟಿದ್ದು ನಾಲ್ಕೈದು ಜನರಿಗೆ ಗಾಯವಾದ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ಬಳಿ ನಿರಾಣಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ. ಅವಘಡದಲ್ಲಿ 27 ವರ್ಷದ ಗುರುನಾಥ್ ಹುಚ್ಚಣ್ಣವರ ಎಂಬ ಯುವಕ ಸಾವನ್ನಪ್ಪಿದ್ದಾನೆ.

ಈತ ಬಾಗಲಕೋಟೆ ಜಿಲ್ಲೆ ಮುಧೋಳ ನಗರದ ಜುಂಜರಕೊಪ್ಪದಲ್ಲಿ ನಿವಾಸಿಯಾಗಿದ್ದು, ದಿಡೀರ್ ಬಾಯ್ಲರ್ ಓಪನ್ ಆದ ಹಿನ್ನೆಲೆಯಲ್ಲಿ ಬಂದಂತಹ ಬಿಸಿ ಹಬೆಯಿಂದ ಇಡೀ ದೇಹವು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ನಿನ್ನೆ ಸಂಜೆ ಏಳು ಗಂಟೆ ಸಂದರ್ಭದಲ್ಲಿ ಗುರುನಾಥ ಹುಚ್ಚಣ್ಣವರ ಹಾಗೂ ಆರು ಜನ ಕಾರ್ಮಿಕರು ಸೇರಿಕೊಂಡು ಬಾಯ್ಲರ್ ಕ್ಲೀನ್ ಮಾಡುವ ಕೆಲಸವನ್ನು ಮಾಡುತ್ತಿದ್ದರು. ಇಂಥ ಸಂದರ್ಭದಲ್ಲಿ ದಿಢೀರ್ ಓಪನ್ ಆದ ಕಾರಣದಿಂದ ಸ್ಟೀಮ್ ಬಿಸಿಯಾದ ಹಬೆ ನೇರವಾಗಿ ಬಡಿದು ಓರ್ವನ ಬಲಿ ಪಡೆದಿದೆ. ಗಾಯಾಳುಗಳಿಗೆ ಮುಧೋಳ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಸದ್ಯದ ಮಟ್ಟಿಗೆ ತಿಳಿದುಬಂದಿರುವ ಮಾಹಿತಿ ಪ್ರಕಾರ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಘಟನೆ ಬಗ್ಗೆ ಸುದ್ದಿ ತಿಳಿದಂತಹ ಮುಧೋಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯದ ಮಟ್ಟಿಗೆ ಈ ಬಗ್ಗೆ ಯಾವುದೇ ರೀತಿ ಮುಧೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲೆ ದಾಖಲಾಗಿಲ್ಲವಾದರೂ, ಕುಟುಂಬಸ್ಥರು ನಂತರ ದೂರು ನೀಡಲು ನಿರ್ಧರಿಸಿದ್ದಾರೆ.

ಕೆಲಸಕ್ಕೆ ಸೇರಿದ ಮೊದಲ ದಿನವೇ ಪ್ರಾಣ ಕಳೆದುಕೊಂಡ ಕಾರ್ಮಿಕ, ಕುಟುಂಬಸ್ಥರ ಆಕ್ರಂದನ

ಹೌದು ಇಲ್ಲಿ ಗುರುನಾಥ ಹುಚ್ಚಣ್ಣವರ ಅವರ ದುರಾದೃಷ್ಟ ಹೇಗಿದೆಯಂದರೆ ಈ ಮೊದಲು ಬೇರೆ ಬೇರೆ ಕಡೆ ಸಣ್ಣ ಪುಟ್ಟ ಅಂಗಡಿಗಳಲ್ಲಿ ಕೆಲಸ ಮಾಡಿಕೊಂಡು ತನ್ನ ಕುಟುಂಬವನ್ನು ನಿಭಾಯಿಸುತ್ತಿದ್ದ ಗುರುನಾಥ, ಸಕ್ಕರೆ ಕಾರ್ಖಾನೆ ಕೆಲಸಕ್ಕೆ ನಿನ್ನೆ ತಾನೆ ಸೇರಿಕೊಂಡಿದ್ದ. ಸೇರಿಕೊಂಡ ಮೊದಲ ದಿನವೇ ತನ್ನ ಪ್ರಾಣವನ್ನು ಕಳೆದುಕೊಂಡಿರುವುದು ನಿಜವಾಗಲೂ ವಿಪರ್ಯಾಸ. ಗುರುನಾಥ ಪತ್ನಿ ಲಕ್ಷ್ಮಿ, ತಾಯಿ ಮಾದೇವಿ ಅವರ ಗೋಳಾದ ದೃಶ್ಯ ಎಲ್ಲರ ಮನಕಲುಕುತ್ತಿದೆ. ಒಂದು ವರ್ಷದ ಹಿಂದೆ ಲಕ್ಷ್ಮಿ ಎಂಬರನ್ನು ಮದುವೆಯಾಗಿದ್ದ ಆದರೆ ಮಕ್ಕಳ ಇರ್ಲಿಲ್ಲ ತಾಯಿ ಇದ್ದು ತಂದೆಯನ್ನು ಕಳೆದುಕೊಂಡಿದ್ದ. ಗುರುನಾತಯ ತಾಯಿ ಹಾಗೂ ಪತ್ನಿ ಜೊತೆಗೆ ವಾಸವಿದ್ದು,ಇಡೀ ಕುಟುಂಬಕ್ಕೆ ಆಸರೆಯಾಗಿದ್ದ.ಆದರೆ ಗುರುನಾಥ ಅವರನ್ನು ಕಳೆದುಕೊಂಡ ಪತ್ನಿ ಹಾಗು ತಾಯಿ ಎಲ್ಲರೂ ಕೂಡ ಈಗ ದಿಕ್ಕು ತೋಚದಂತಾಗಿದ್ದಾರೆ ಕುಟುಂಬಕ್ಕೆ ಆಸರೆಯಾಗಿದ್ದಂತವನನ್ನು ಕಳೆದುಕೊಂಡಿದ್ದರಿಂದ ಕುಟುಂಬಕ್ಕೆ ಆಸರೆ ಇಲ್ಲದಂತಾಗಿದೆ

ಸಹಜವಾಗಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಇರುವ ಸ್ಥಳ ಅಂದ್ರೆ ತುಂಬಾನೇ ಅಪಾಯಕಾರಿ ಸ್ಥಳ ಅಂತ ಹೇಳಬಹುದು. ಆದರೆ ಆ ಕೆಲಸಕ್ಕೆ ಸೇರಿದ ಮೊದಲ ದಿನವೇ ಅದನ್ನು ಸ್ವಚ್ಛ ಮಾಡುವ ಕೆಲಸಕ್ಕೆ ಕಳಿಸಿದ್ದು ಯಡವಟ್ಟು ಎಂದು ಕೆಲವರು ಆಕ್ರೋಶ ಹೊರ ಹಾಕಿದ್ದಾರೆ. ಯುವಕನ ಮೊದಲ ದಿನವೇ ಶುಚಿತ್ವ ಮಾಡುವ ಕೆಲಸಕ್ಕೆ ಕಳಿಸಿದ್ದು ಕಾರ್ಖಾನೆಯ ಆಡಳಿತ ಮಂಡಳಿ ನಿರ್ಲಕ್ಷ್ಯ ಎಂದು ಆರೋಪ ಕೇಳಿಬಂದಿದೆ.

“ಈ ಹಿಂದೆಯೂ ನಡೆದಿತ್ತು ಮಹಾ ದುರಂತ”

ಇದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರ ಒಡೆತನಕ್ಕೆ ಸೇರಿದ ಎಂ ಆರ್ ಎನ್ ನಿರಾಣಿ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಇಂತಹದೊಂದು ಘಟನೆ ನಡೆದಿರುವಂಥದ್ದು ಓರ್ವ ಕಾರ್ಮಿಕ ಈಗಾಗಲೇ ಬಲಿಯಾಗಿದ್ದಾನೆ. ಆದರೆ ಈ ಹಿಂದೆ 2017 ರ ಡಿಸೆಂಬರ್ ಸಂದರ್ಭದಲ್ಲಿ ಕೂಡ ನಿರಾಣಿ ಒಡೆತನದ ಡಿಸ್ಟಿಲರ್ ಘಟಕ ಸ್ಪೋಟವಾಗಿದ್ದರಿಂದ ಆಗ 4 ಜನ ಕಾರ್ಮಿಕರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದರು. ಸುಮಾರು ಏಳು ಜನರು ಕೂಡ ಆ ಸಂದರ್ಭದಲ್ಲಿ ಗಾಯಗೊಂಡಿದ್ದರು.

ಒಟ್ಟಿನಲ್ಲಿ ಹೊಸ ಉತ್ಸಾಹದೊಂದಿಗೆ ಉತ್ತಮ ವೇತನ ಸಿಗುತ್ತದೆ ಎಂಬ ಆಸೆಯಿಂದ ಕೆಲಸಕ್ಕೆ ಸೇರಿದ ಯುವಕ ಮೊದಲ ದಿನವೇ ಪ್ರಾಣ ಕಳೆದುಕೊಂಡಿದ್ದು ಕುಟುಂಬಕ್ಕೆ ಆಸರೆಯಾಗುವ ಕೆಲಸ ಆಗಬೇಕಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:34 am, Fri, 10 February 23

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ