AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನ ಮೇಲಿನ ಸೇಡಿಗೆ ಮಗನನ್ನೇ ಬಲಿ ಪಡೆದ: 3 ವರ್ಷದ ಬಾಲಕನ ಕತ್ತು ಕೊಯ್ದ ಚಿಕ್ಕಪ್ಪ

ನಿಷ್ಕಲ್ಮಶ ಮನಸ್ಸು, ಪುಟ್ಟ ಪುಟ್ಟ ಹೆಜ್ಜೆ ಹಾಕುತ್ತಾ ಮೂರು ವರ್ಷ ಮಗು ಪ್ರತಿ ದಿನ ಅಂಗನವಾಡಿಗೆ ಹೋಗುತ್ತಿತ್ತು.ಅದರಂತೆ ಇಂದೂ ಸಹ ಅಂಗನವಾಡಿಗೆ ಹೋಗಿದ್ದ ಪುಟ್ಟ ಕಂದನನ್ನು ಚಿಕ್ಕಪ್ಪನೇ ಕತ್ತು ಕೊಯ್ದು ಘೋರಾತಿಘೋರವಾಗಿ, ಬರ್ಬರವಾಗಿ ಹತ್ಯೆಗೈದಿದ್ದಾನೆ. ಈ ಘೋರ ಕೃತ್ಯಕ್ಕೆ ಬಾಗಲಕೋಟೆಯ ಬೆನಕನವಾರಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಅಣ್ಣ ಮೇಲಿನ ಸಿಟ್ಟಿಗೆ ಏನು ಅರೆಯದ ಪುಟ್ಟ ಮಗವಿನ ಬಲಿ ಪಡೆದುಕೊಂಡಿದ್ದಾನೆ.

ಅಣ್ಣನ ಮೇಲಿನ ಸೇಡಿಗೆ ಮಗನನ್ನೇ ಬಲಿ ಪಡೆದ: 3 ವರ್ಷದ ಬಾಲಕನ ಕತ್ತು ಕೊಯ್ದ ಚಿಕ್ಕಪ್ಪ
Madankumar. Bheemappa
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jul 22, 2025 | 6:30 PM

Share

ಬಾಗಲಕೋಟೆ, (ಜುಲೈ 22): ಅಂಗನವಾಡಿಗೆ ಹೋಗಿದ್ದ 3 ವರ್ಷದ ಮಗುವಿಗೆ ಜಾಕು ಇರಿದು ಸ್ವಂತ ಚಿಕ್ಕಪ್ಪನೇ ಜೀವ ತೆಗೆದಿರುವ ಘಟನೆ ಬಾಗಲಕೋಟೆ (bagalkot) ಜಿಲ್ಲೆಯ ಇಳಕಲ್ ತಾಲೂಕಿನ ಬೆನಕನವಾಡಿ ಗ್ರಾಮದಲ್ಲಿ ನಡೆದಿದೆ. ಅಣ್ಣ ಬೈದು ಬುದ್ಧಿವಾದ ಹೇಳಿದ್ದಕ್ಕೆ ತಮ್ಮ ಈ ಕೃತ್ಯ ಎಸಗಿದ್ದಾನೆ. ಬೆನಕನವಾಡಿ ಗ್ರಾಮದ ಮಾರುತಿ ವಾಲಿಕಾರ ಎಂಬುವರ 3 ವರ್ಷದ ಮಧುಕುಮಾರನ ಜೀವವನ್ನ ಚಿಕ್ಕಪ್ಪ ಭೀಮಪ್ಪ ತೆಗೆದಿದ್ದಾನೆ. ಬಾಲಕ ಮುಂಜಾನೆ ಎಂದಿನಂತೆ ಗ್ರಾಮದ ಅಂಗನವಾಡಿಗೆ ಹೋಗಿದ್ದ. ಎಲ್ಲರೊಂದಿಗೆ ಅಂಗನವಾಡಿಯಲ್ಲಿ ಕುಳಿತ್ತಿದ್ದ ಬಾಲಕನನ್ನ ಚಿಕ್ಕಪ್ಪ ಭೀಮಪ್ಪ ನೇರವಾಗಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ನೆಲದ ಮೇಲೆ ಮಗುವನ್ನ ಹಾಕಿ ಹರಿತವಾದ ಆಯುಧದಿಂದ ಕುತ್ತಿಗೆ ಕೊಯ್ದಿದ್ದಾನೆ. ನೋವಿನಿಂದ ಮಗು ಚೀರಾಟದಿಂದ ಕ್ಷಣಾರ್ಧದಲ್ಲಿ ಜೀವ ಬಿಟ್ಟಿದೆ.

ಇಂದು (ಜುಲೈ 22) ಬೆಳಿಗ್ಗೆ 9 ಗಂಟೆಗೆ ಮಗು ಮದುಕುಮಾರ ತಂದೆ ತಾಯಿ ಹತ್ತಿ ಹೊಲಕ್ಕೆ ಕೆಲಸಕ್ಕೆ ಹೋಗಿದ್ದರು. ಮದುಕುಮಾರ ಅಜ್ಜನ ಜೊತೆ ಅಂಗನವಾಡಿಗೆ ಹೋಗಿದ್ದ. ಖುಷಿ ಖುಷಿಯಿಂದ ಅಂಗಡಿಗೆ ಹೋಗಿ ಚಾಕಲೇಟ್ ತಿನ್ನುತ್ತಾ ಮಗು ಅಜ್ಜನ ಜೊತೆ ಅಂಗನವಾಡಿಗೆ ಹೋಗಿತ್ತು. ಆದರೆ ಅಂಗನವಾಡಿ ‌ಇನ್ನು ತೆರೆದಿರಲಿಲ್ಲ.ನಂತರ ಅಜ್ಜನ ಬಿಟ್ಟು ಸ್ನೇಹಿತರೊಂದಿಗೆ ಮದುಕುಮಾರ ಆಟವಾಡುತ್ತಿದ್ದ. ಆ ವೇಳೆ ಮದುಕುಮಾರನನ್ನು ಮನೆಗೆ ಕರೆದೊಯ್ದ ಪಾಪಿ ಭೀಮಪ್ಪ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ . ‌ಮುದ್ದಾದ ಮಗು‌ ಕಳೆದುಕೊಂಡ‌ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ.

ಇದನ್ನೂ ಓದಿ: ಚಿತ್ರದುರ್ಗ: ಯುವಕನ ಜೊತೆ ಓಡಿ ಹೋದ ಮಗಳು, ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ತು ಠಾಣೆ ಎದುರೇ ತಂದೆ ಆತ್ಮಹತ್ಯೆ

ಮದುಕುಮಾರ ತಂದೆ ಮಾರುತಿ , ಮಾರುತಿ ವಾಲಿಕಾರನ ಡೊಡ್ಡಪ್ಪನ ಮಗ ಭೀಮಪ್ಪ. ಭೀಮಪ್ಪನ ತಮ್ಮನ ಪತ್ನಿ ಹಾಗೂ ಮಾರುತಿ ಪತ್ನಿ ಸಹೋದರಿಯರು.ಇಷ್ಟೊಂದು ಹತ್ತಿರದ ಸಂಬಂಧವಿದೆ. ಆದರೆ ಚಿಕ್ಕಪ್ಪನೇ ಇಂತಹ ದುಷ್ಕೃತ್ಯವೆಸಗಿ ಪೈಶಾಚಿಕತೆ ಮೆರೆದಿದ್ದಾನೆ. ಘಟನೆ ಇಂದಿಗೂ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಅಮೀನಗಢ ಪೊಲೀಸರು ಪಾಪಿ ಭೀಮಪ್ಪನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಈ ವೇಳೆ ಸಿಟ್ಟು ಬಂತು ಕೊಲೆ ಮಾಡಿದೆ ಅಂತ ಮಾತ್ರ ಹೇಳಿದ್ದಾನೆ . ಆದರೆ ಕಳೆದ ವರ್ಷ ಭೀಮಪ್ಪ ತನ್ನ ಪತ್ನಿ ಜೊತೆ ಜಗಳವಾಡಿ ಗುಂಡುಕಲ್ಲಿನಿಂದ ಹಲ್ಲೆ ಮಾಡಿದ್ದನಂತೆ.ಆಗ ಮಗು ಮದುಕುಮಾರ ತಂದೆ ಮಾರುತಿ ಭೀಮಪ್ಪನಿಗೆ ಬೈದು ಬುದ್ದಿ ಹೇಳಿದ್ದನಂತೆ.ಅದೇ ಸೇಡಿಟ್ಟುಕೊಂಡು ಹೀಗೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

ಮಕ್ಕಳ‌ ಮಾರಣಹೋಮ‌ ನಡೆಯುತ್ತಿತ್ತಾ?

ಈ ಪಾಪಿಯಿಂದ ಇನ್ನು ಮೂರು ಮಕ್ಕಳ ಕೊಲೆ ನಡೆಯುತ್ತಿತ್ತಾ ಎಂಬ ಸಂಶಯವಿದೆ. ಹೌದು.. ಆಡವಾಡುತ್ತಿದ್ದ ಒಟ್ಟು ನಾಲ್ಕು ಮಕ್ಕಳನ್ನು ಭೀಮಪ್ಪ ತನ್ನ ಮನೆಗೆ ಕರೆದೊಯ್ದಿದ್ದ.ಮಕ್ಕಳನ್ನು‌ ಮನೆಯಲ್ಲಿ ಹಾಸಿಗೆ ಮೇಲೆ‌ ಮಲಗಿಸಿ ಸಾಮೂಹಿಕ ಕೊಲೆಗೆ ಮುಂದಾಗಿದ್ದ ಎಂಬ ಸಂಶಯವಿದೆ.ಮಗು ಮದುಕುಮಾರ ಕತ್ತಿಗೆ ಚಾಕು ಇರಿಯುತ್ತಲೇ ಚೀರಾಟ ಕೇಳಿ ಉಳಿದ ಮಕ್ಕಳು ಎದ್ದು ಹೊರಗೆ ಓಡಿ ಬಂದಿದ್ದಾರಂತೆ‌.ಇದನ್ನು ನೆರೆಹೊರೆಯವರು ನೋಡಿದ್ದು,ಮಗು ಮದುಕುಮಾರ ತಾಯಿ ಕೂಡ ಈ ಬಗ್ಗೆ ಹೇಳಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಎಸ್ ಪಿ ಭೇಟಿ ನೀಡಿ ತನಿಖೆ ಚುರುಕುಗೊಳಿಸಿದ್ದಾರೆ.

ಏನೂ ಅರಿಯದ ಪುಟ್ಟ ಬಾಲಕನ ಹತ್ಯೆಗೈದಿರೋ ಪಾಪಿ ಚಿಕ್ಕಪ್ಪನಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಸಂಬಂಧಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ