AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkot: ಚುನಾವಣಾ ಕರ್ತವ್ಯ ನಿರ್ವಹಿಸಿ ರೈಫಲ್ ಹಿಂದಿರುಗಿಸುವಾಗ ಹಾರಿದ ಗುಂಡು; ಇಬ್ಬರು ಯೋಧರಿಗೆ ಗಾಯ

ಚುನಾವಣಾ ಕರ್ತವ್ಯ ನಿರ್ವಹಿಸಿ ರೈಫಲ್ ಹಿಂದಿರುಗಿಸುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಇಬ್ಬರು ಯೋಧರು ಗಾಯಗೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

Bagalkot: ಚುನಾವಣಾ ಕರ್ತವ್ಯ ನಿರ್ವಹಿಸಿ ರೈಫಲ್ ಹಿಂದಿರುಗಿಸುವಾಗ ಹಾರಿದ ಗುಂಡು; ಇಬ್ಬರು ಯೋಧರಿಗೆ ಗಾಯ
ಆಕಸ್ಮಿಕವಾಗಿ ಗುಂಡು ಹಾರಿ ಗಾಯಗೊಂಡ ಯೋಧರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು
Rakesh Nayak Manchi
|

Updated on: May 01, 2023 | 3:05 PM

Share

ಬಾಗಲಕೋಟೆ: ಚುನಾವಣಾ (Karnataka Assembly Elections 2023) ಕರ್ತವ್ಯ ನಿರ್ವಹಿಸಿ ರೈಫಲ್ ಹಿಂದಿರುಗಿಸುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ (Misfiring) ಇಬ್ಬರು ಯೋಧರು ಗಾಯಗೊಂಡ ಘಟನೆ ಇಂದು (ಮೇ 1) ಬೆಳಗ್ಗೆ ಬಾಗಲಕೋಟೆಯಲ್ಲಿ ನಡೆದಿದೆ. ದಿನೇಶಕುಮಾರ್ ಝಾ (38) ಮತ್ತು ಲಕ್ಷ್ಮಣ ನಿತ್ಯಂಗ್ (44) ಗಾಯಗೊಂಡ ಯೋಧರು. ದಿನೇಶಕುಮಾರ್ ಕುಮಾರ್ ಅವರ ಎಡ ಮೊಳಗಾಲಿಗೆ ಗುಂಡೇಟು ಬಿದ್ದಿದ್ದ, ಲಕ್ಷ್ಮಣ ನಿತ್ಯಂಗ್ ಅವರ ಬಲಗಾಲಿನ ಪಾದಕ್ಕೆ ಗುಂಡು ತುಗುಲಿದೆ.

ಅರುಣಾಚಲ ಪ್ರದೇಶದ ಲಕ್ಷ್ಮಣ ನಿತ್ಯಂಗ್ ಮತ್ತು ಬಿಹಾರ ಮೂಲದ ದಿನೇಶಕುಮಾರ್ ಅವರು ಮುಧೋಳದ ರನ್ನ ವಸತಿ ಶಾಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಚುನಾವಣಾ ಕರ್ತವ್ಯ ಮುಗಿಸಿ ಇಂದು ಬೆಳಗ್ಗೆ ರೈಪಲ್​ಗಳನ್ನು ಮರಳಿಸಬೇಕಿತ್ತು. ಅದರಂತೆ ರೈಫಲ್ ಹಿಂದಿರುಗಿಸುವ ಸಮಯದಲ್ಲಿ ಆಕಸ್ಮಿಕವಾಗಿ ಗುಂಡು ಹಾರಿದೆ. ಕೂಡಲೇ ಇಬ್ಬರು ಯೋಧರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಗುಂಡುಗಳನ್ನು ಹೊರತೆಗೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Bullet Proof Helmet: ಯೋಧರಿಗಾಗಿ ವಿಶೇಷ ಹೆಲ್ಮೆಟ್, ಸಿಖ್ ಸೈನಿಕರಿಗೂ ಇದು ಆರಾಮದಾಯಕ

ಕರ್ನಾಟಕ ವಿಧಾನಸಭೆ ಚುನಾವಣೆ ರಣಕಣ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಎಲ್ಲೆಂದರಲ್ಲಿ ರಾಜಕೀಯ ನಾಯಕರು ಸುತ್ತಾಡುತ್ತಿದ್ದಾರೆ. ಮಾತ್ರವಲ್ಲದೆ, ಚುನಾವಣಾ ಅಕ್ರಮಗಳನ್ನು ತಡೆಯಲು ಅಲ್ಲಲ್ಲಿ ಚೆಕ್ ಪೋಸ್ಟ್​ಗಳನ್ನು ಹಾಕಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಸಾರ್ವತ್ರಿಕ ಚುನಾವಣೆ ಯಾವುದೇ ಅಹಿತಕರ ಘಟನೆ ನಡೆಯದೆ ಸುಸೂತ್ರವಾಗಿ ನಡೆಯುವಂತೆ ಮಾಡಲು ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು, ಹೆಚ್ಚಿನ ಭದ್ರತೆಗಾಗಿ ಯೋಧರನ್ನು ನಿಯೋಜಿಸಲಾಗಿದೆ. ಯೋಧರ ಪಥಸಂಚಲನದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ