AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ಕಂಪನಿಗಳಲ್ಲಿ ಹಣ ಹಾಕಿ ಮೋಸ: ದಿಕ್ಕುತೋಚದೇ ಡಿಸಿ ಕಚೇರಿ ಮುಂದೆ ಬಂದು ನಿಂತ ಬಾಗಲಕೋಟೆ ಜನ

ಅವರಲ್ಲಿ ಕೆಲವರು ಕೂಲಿ ಮಾಡಿ ಹಣ ತೊಡಗಿಸಿದ್ದರೆ, ಹಲವರು ಒಡವೆ ಮಾರಿ ಹಣ ಕಟ್ಟಿದ್ದರು. ‌ಇನ್ನು ಹೊಲವನ್ನು ಬಡ್ಡಿ ಮೇಲೆ ಅಡವಿಟ್ಟು ಹಣ ತುಂಬಿದ್ದರು‌. ಆದರೆ, ಅವರಿಗೆಲ್ಲ ಮರಳಿ ನಯಾಪೈಸೆ ಬಂದಿಲ್ಲ. ಇದರಿಂದ ಅವರೆಲ್ಲ ಅನಿರ್ಧಿಷ್ಟ ಧರಣಿ ಕೈಗೊಂಡಿದ್ದಾರೆ. ಎಲ್ಲಿ ಅಂತೀರಾ? ಈ ಸ್ಟೋರಿ ಓದಿ.

ವಿವಿಧ ಕಂಪನಿಗಳಲ್ಲಿ ಹಣ ಹಾಕಿ ಮೋಸ: ದಿಕ್ಕುತೋಚದೇ ಡಿಸಿ ಕಚೇರಿ ಮುಂದೆ ಬಂದು ನಿಂತ ಬಾಗಲಕೋಟೆ ಜನ
ವಿವಿಧ ಕಂಪನಿಗಳಲ್ಲಿ ಹಣ ಹಾಕಿ ಮೋಸ ಹೋದ ಬಾಗಲಕೋಟೆ ಜನ
ರವಿ ಹೆಚ್ ಮೂಕಿ, ಕಲಘಟಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 04, 2024 | 7:40 PM

Share

ಬಾಗಲಕೋಟೆ, ಸೆ.04: ಸಮೃದ್ದಿ ಜೀವನ್, ಗರೀಮಾ, ಪಿಎಸಿಎಲ್, ಕಲ್ಪತರು ಅಗ್ರಿಗೋಲ್ಡ್ ಸೇರಿದಂತೆ ವಿವಿಧ 185 ಕಂಪನಿಗಳಲ್ಲಿ ಹಣ ಹಾಕಿ ಕೈ ಸುಟ್ಟುಕೊಂಡ ಬಾಗಲಕೋಟೆ(Bagalkote) ಜನರು, ಇಂದು(ಬುಧವಾರ) ಕೈಯಲ್ಲಿ ನಾಮಫಲಕ, ತಮಗೆ ಮೋಸ ಮಾಡಿದ ಕಂಪನಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಅಷ್ಟೇ ಅಲ್ಲ, ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ‘ನಮ್ಮ ಹಣ ನಮಗೆ ಕೊಡಿಸಿ ಎಂದು ಘೋಷಣೆ ಕೂಗಿದರು.

ಕೂಲಿ ನಾಲಿ ಮಾಡಿದ ಹಣ, ಒಡವೆ, ಆಸ್ತಿ ಒತ್ತೆಯಿಟ್ಟು ದುಡ್ಡು ತಂದು ಇವರೆಲ್ಲ ಮೇಲ್ಕಂಡ ಫೈನಾನ್ಸ್ ಇನ್ಸುರೆನ್ಸ್, ಚಿಟ್ ಫಂಡ್​ ಕಂಪನಿಗಳಲ್ಲಿ ಹಣ ಹಾಕಿ ಈಗ ಬೀದಿಗೆ ಬರುವಂತಾಗಿದೆ. 5 ಲಕ್ಷ, 10, 50, ಕೋಟಿಗಟ್ಟಲೇ ಒಬ್ಬೊಬ್ಬರು ಹಣ ಕಳೆದುಕೊಂಡಿದ್ದಾರೆ. ಕಂಪನಿ ಎಜೆಂಟ್ ಇದ್ದವರು ಗ್ರಾಹಕರ ಹಣ ತೊಡಗಿಸಿದ ಕಾರಣ ಗ್ರಾಹಕರು ಮನೆಗೆ ಬಂದು ಕೂರುತ್ತಿದ್ದಾರೆ. ಇದರಿಂದ ವಂಚನೆಗೊಳಗಾದ ಠೇವಣಿದಾರರು ಹಾಗೂ ಗ್ರಾಹಕರು, ನಮ್ಮ ಹಣ ನಮಗೆ ಕೊಡಿಸಿ ಎಂದು ಪ್ರತಿಭಟನೆ ಹಾದಿ ಹಿಡಿದಿದ್ದಾರೆ.

ಇದನ್ನೂ ಓದಿ:ಆನ್​ಲೈನ್​​​ ಟ್ರೇಡಿಂಗ್​ ನೆಪದಲ್ಲಿ ಜನರಿಗೆ ಕೋಟ್ಯಂತರ ರೂ. ವಂಚನೆ; ನಾಲ್ವರು ಅರೆಸ್ಟ್

ವಂಚನೆ ಸಂತ್ರಸ್ತ ಠೇವಣಿದಾರರ ಕುಟುಂಬ ಸದಸ್ಯರ ಬೃಹತ್ ಪ್ರತಿಭಟನೆ ನಿರಂತರವಾಗಿ ಮುಂದುವರೆದಿದೆ. ಬಾಗಲಕೋಟೆ ಜಿಲ್ಲೆಯೊಂದರಲ್ಲೇ ಅಂದಾಜು 200 ಕೋಟಿ ಹಣ ಠೇವಣಿದಾರರಿಗೆ ಬರಬೇಕಾಗಿದೆ‌‌‌. ಬಾಗಲಕೋಟೆ ಜಿಲ್ಲೆಯಲ್ಲಿ 1 ಲಕ್ಷ 20 ಸಾವಿರ ಜನರು ವಂಚನೆಗೆ ಒಳಗಾಗಿದ್ದಾರೆ. ಇಡೀ ರಾಜ್ಯಾದ್ಯಂತ 2 ವರೆ ಕೋಟಿ ಜನ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ‌. ಈ ಕಂಪನಿಗಳಿಂದ ವಂಚನೆ ಕಂಡುಬಂದ ಕಾರಣ ಕೇಂದ್ರ ಸರಕಾರ 1978 ಆ್ಯಕ್ಟ್ ಸೆಬಿ ಮೂಲಕ ಕಂಪನಿಗಳನ್ನು ಬಂದ್ ಮಾಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ‌. ಹಣ ಕೂಡ ಜಪ್ತಿ ಮಾಡಿದೆ. ಆದರೆ, 2019 ಬಡ್ಸ್(banning of unregulated deposits scheme)act ಪ್ರಕಾರ ವಂಚನೆ ಠೇವಣಿ ಸಂತ್ರಸ್ತರಿಗೆ ಹಣ ವಾಪಸ್ ಕೊಡಿಸುವ ಕಾರ್ಯವಾಗಿಲ್ಲ.

ನಮಗೆ 2019 ರ ಬಡ್ಸ್ ಆ್ಯಕ್ಟ್ ಪ್ರಕಾರ ಹಣ ಮರಳಿ ಕೊಡಿಸಬೇಕು‌. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಆಗ್ರಹ ಮಾಡುತ್ತಿದ್ದಾರೆ. ಕಷ್ಟಪಟ್ಟು ಕೂಡಿಟ್ಟ ಹಣ ಹಾಕಿ ಇವರೆಲ್ಲ ಪರದಾಡುವಂತಾಗಿದೆ. ಇವರ ಹೋರಾಟಕ್ಕೆ ಸರಕಾರ ಸ್ಪಂಧಿಸಿ ಹಣ ವಾಪಸ್ ಕೊಡಿಸುವ ಕಾರ್ಯ ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು