AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳಿಗೆ ಸುಳ್ಳು ಹೇಳಿಕಳಿಸಿ ಅಪ್ರಾಪ್ತ ಮಗಳಿಗೆ ಮದುವೆ ಮಾಡಿದ ಪೋಷಕರು.. ರಕ್ಷಣೆ ಬಳಿಕ ಬಾಲಕಿಗೆ ಕೊರೊನಾ ಪಾಸಿಟಿವ್

Child Marriage ರಾತ್ರೋರಾತ್ರಿ ಅಪ್ರಾಪ್ತೆಗೆ ಮದುವೆ ಮಾಡಿಸಿ ಅಧಿಕಾರಿಗಳ ಮುಂದೆ ಪೋಷಕರು ಹೈ ಡ್ರಾಮ ಮಾಡಿದ್ದಾರೆ. ವಿವಾಹ ತಡೆಯಲು ಹೋಗಿದ್ದ ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸಿ ಯಾಮಾರಿಸಿದ್ದಾರೆ..

ಅಧಿಕಾರಿಗಳಿಗೆ ಸುಳ್ಳು ಹೇಳಿಕಳಿಸಿ ಅಪ್ರಾಪ್ತ ಮಗಳಿಗೆ ಮದುವೆ ಮಾಡಿದ ಪೋಷಕರು.. ರಕ್ಷಣೆ ಬಳಿಕ ಬಾಲಕಿಗೆ ಕೊರೊನಾ ಪಾಸಿಟಿವ್
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:May 27, 2021 | 11:39 AM

Share

ಬಾಗಲಕೋಟೆ: ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಅಧಿಕಾರಿಗಳನ್ನು ಯಾಮಾರಿಸಿ ರಾತ್ರೋರಾತ್ರಿ ಪೋಷಕರು ಅಪ್ರಾಪ್ತೆಗೆ ಮದುವೆ ಮಾಡಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಬಾಲ್ಯ ವಿವಾಹದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಸಿಕ್ಕ ಬಳಿಕ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆದರೆ ಪೋಷಕರು ಈ ವೇಳೆ ಅಧಿಕಾರಿಗಳನ್ನು ಯಾಮಾರಿಸಿದ್ದಾರೆ.

ರಾತ್ರೋರಾತ್ರಿ ಅಪ್ರಾಪ್ತೆಗೆ ಮದುವೆ ಮಾಡಿಸಿ ಅಧಿಕಾರಿಗಳ ಮುಂದೆ ಪೋಷಕರು ಹೈ ಡ್ರಾಮ ಮಾಡಿದ್ದಾರೆ. ವಿವಾಹ ತಡೆಯಲು ಹೋಗಿದ್ದ ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸಿ ಯಾಮಾರಿಸಿದ್ದಾರೆ . ಬಾಲ್ಯ ವಿವಾಹ ಮಾಡ್ತಿದ್ದಾರೆ ಎನ್ನುವ ಮಾಹಿತಿ ಆಧರಿಸಿ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿತ್ತು. ಈ ವೇಳೆ ಬಾಲಕಿಯ ಪೋಷಕರು ತಮ್ಮ ಮನೆಯಲ್ಲಿ ಮದುವೆಯಾಗಿಲ್ಲ. ನಮ್ಮ ಮನೆಯಲ್ಲಿ ಸಾವಾಗಿದೆ ನಾವು ದುಃಖದಲ್ಲಿದ್ದೇವೆ. ನಾವೇಕೆ ಮದುವೆ ಮಾಡುತ್ತೇವೆ ಎಂದು ಅಧಿಕಾರಿಗಳಿಗೆ ಸುಳ್ಳು ಹೇಳಿ ಯಾಮಾರಿಸಿದ್ದಾರೆ.

ಪೋಷಕರ ಮಾತು ನಂಬಿ ಅಧಿಕಾರಿಗಳು ವಾಪಸಾಗಿದ್ದು ಅಧಿಕಾರಿಗಳು ಹೋದ ಬಳಿಕ ರಾತ್ರೋರಾತ್ರಿ ಅಪ್ರಾಪ್ತೆಗೆ ಮದುವೆ ಮಾಡಿಸಿದ್ದಾರೆ. ಬಳಿಕ ಬೇರೆ ಮನೆಯಲ್ಲಿ ಬಾಲಕಿಯನ್ನು ಬಚ್ಚಿಟ್ಟಿದ್ದಾರೆ. ವಿಷಯ ತಿಳಿದು ಅಧಿಕಾರಿಗಳು, ಪೊಲೀಸರು ಮತ್ತೆ ತಡ ರಾತ್ರಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಆದರೆ ಆಗಲೂ ಮದುವೆ ಮಾಡಿಲ್ಲವೆಂದು ಪೋಷಕರು ಅಧಿಕಾರಿಗಳ ಜೊತೆ ವಾದ ಮಾಡಿದ್ದಾರೆ. ಕೊನೆಗೆ ಅಂತಿಮ ನಿರ್ಧಾರಕ್ಕೆ ಬಂದ ಅಧಿಕಾರಿಗಳು ವಾಗ್ವಾದದಿಂದ ಏನೂ ಪ್ರಯೋಜನವಿಲ್ಲವೆಂದು ಮೊಬೈಲ್ ಲೊಕೇಷನ್ ಆಧರಿಸಿ ಅಪ್ರಾಪ್ತೆ ಪತ್ತೆ ಹಚ್ಚಿದ್ದಾರೆ.

ತಡರಾತ್ರಿ ಬಾಲಕಿ ಸಂರಕ್ಷಣೆ ಮಾಡಿ, ಇಳಕಲ್ ತಂಗುದಾಣದ ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು ಸಾಂತ್ವನ ಕೇಂದ್ರದಲ್ಲಿ ಟೆಸ್ಟ್ ಮಾಡಿದಾಗ ಬಾಲಕಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಕೊರೊನಾ ಸಮಯದಲ್ಲಿ ಬಾಗಲಕೋಟೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಅಧಿಕಾರಿಗಳು ಮತ್ತಷ್ಟು ಶಿಸ್ತು ಕ್ರಮ ಕೈಗೊಳ್ಳುವ ಅಗತ್ಯತೆ ಇದೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಲಾಕ್​ಡೌನ್​ ನಡುವೆ ಬಾಲ್ಯ ವಿವಾಹ; 28 ಬಾಲ್ಯ ವಿವಾಹಗಳನ್ನು ತಡೆದ ಅಧಿಕಾರಿಗಳು

Published On - 11:29 am, Thu, 27 May 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ