AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkote Coconut Fair: ಸಾಂಕ್ರಾಮಿಕ ರೋಗ ತಡೆಯೋದಕ್ಕೆ ಅಂತ ಶುರುವಾದ ತೆಂಗಿನಕಾಯಿ ಪವಾಡ ಇಂದಿಗೂ ನಡೆಯುತ್ತಿದೆ! ನೀವೂ ನೋಡಿ

ಬಾಗಲಕೋಟೆ ನಗರದಲ್ಲಿ 40 ವರ್ಷಗಳಿಂದ ತೆಂಗಿನಕಾಯಿ ಪವಾಡ ನಡೆಯುತ್ತಿದೆ, ಅಂದು ಕಾಣಿಸಿಕೊಳ್ಳುತ್ತಿದ್ದ ಸಾಂಕ್ರಾಮಿಕ ರೋಗ ತಡೆಯೋದಕ್ಕೆ ಅಂತ ಶುರುವಾದ ತೆಂಗಿನಕಾಯಿ ಪವಾಡ ಇಂದಿಗೂ ನಡೆಯುತ್ತಿದೆ.

Bagalkote Coconut Fair: ಸಾಂಕ್ರಾಮಿಕ ರೋಗ ತಡೆಯೋದಕ್ಕೆ ಅಂತ ಶುರುವಾದ ತೆಂಗಿನಕಾಯಿ ಪವಾಡ ಇಂದಿಗೂ ನಡೆಯುತ್ತಿದೆ! ನೀವೂ ನೋಡಿ
Bagalkote Coconut Fair:  ತೆಂಗಿನಕಾಯಿ ಪವಾಡ ಇಂದಿಗೂ ನಡೆಯುತ್ತಿದೆ!
ರವಿ ಹೆಚ್ ಮೂಕಿ, ಕಲಘಟಗಿ
| Edited By: ಸಾಧು ಶ್ರೀನಾಥ್​|

Updated on: Jul 05, 2023 | 11:02 AM

Share

ದೇವರ ಮೇಲಿನ ನಮ್ಮ ಜನರ ಭಕ್ತಿಯ ರೀತಿ ನೀತಿಗಳು ವಿಭಿನ್ನತೆಯಿಂದ ಕೂಡಿರುತ್ತದೆ. ದೇವರಿಗಾಗಿ ಅನೇಕರು ಹತ್ತು ಹಲವು ಹರಕೆ ಹೊರುತ್ತಾರೆ, ವಿವಿಧ ಆಚರಣೆ ಮಾಡ್ತಾರೆ. ದೇವರ ಸನ್ನಿಧಾನದಲ್ಲಿ ಅನೇಕ ಪವಾಡಗಳು ನಡೆಯುತ್ತವೆ. ಅದೇ ರೀತಿ ಇಲ್ಲೊಂದು ಜಾತ್ರೆಯಲ್ಲಿ ನಡೆದ ತೆಂಗಿನಕಾಯಿ ಒಡೆಯುವ ಪವಾಡ (Coconut Fair or tenginkai jatre) ಎಲ್ಲರನ್ನು ಸೆಳೆಯಿತು. ಡೊಳ್ಳು ವಾದ್ಯಗಳ ಮೇಳದ ಸದ್ದು, ದೀಡ ನಮಸ್ಕಾರ, ದೇವಿಗೆ ಪೂಜೆ ಪುನಸ್ಕಾರ, ಇದಾದ ಮೇಲೆ ನಡೆಯೋದೆ ತೆಂಗಿನಕಾಯಿ ಪವಾಡ. ತಲೆಗೆ ಫಟ್ ಫಟ್ ಅಂತ ತೆಂಗಿನಕಾಯಿ ಒಡೆದುಕೊಳ್ಳುತ್ತಿರುವ ಪೂಜಾರಿ. ಅಂದ ಹಾಗೆ ಈ ದೃಶ್ಯ ಕಂಡುಬಂದಿದ್ದು ಬಾಗಲಕೋಟೆ ನಗರ (Bagalkot) ಹರಣಶಿಕಾರಿ ಕಾಲೋನಿಯ ದಂಡಿನ ದುರ್ಗಾದೇವಿ ಜಾತ್ರೆಯಲ್ಲಿ (Dandina Durga Devi Fair).

ಹೌದು ಬಾಗಲಕೋಟೆ ನಗರದ ಹರಣಸಿಕಾರಿ ಕಾಲೋನಿಯ ದಂಡಿನ ದುರ್ಗಾದೇವಿ ಜಾತ್ರೆ ಅಂದರೆ ತೆಂಗಿನಕಾಯಿ ಪವಾಡಕ್ಕೆ ಹೆಸರಾದ ಜಾತ್ರೆ. ಇಲ್ಲಿ ಸ್ವತಃ ದುರ್ಗಾದೇವಿ ಪೂಜಾರಿಗಳು ತಲೆಗೆ ತೆಂಗಿನಕಾಯಿ ಒಡೆದುಕೊಂಡು ತೆಂಗಿನಕಾಯಿ ಒಡೆಯುವ ಮೂಲಕ ಪವಾಡ ಮೆರೆಯುತ್ತಾರೆ. ತಲೆಯಿಂದ ತೆಂಗಿನಕಾಯಿ ಒಡೆದು ಬೀಸಾಕಿದ್ರೂ ಆ ಪೂಜಾರಿಗಳಿಗೆ ಮಾತ್ರ ಯಾವುದೇ ಗಾಯ ಆಗಲ್ಲ.

ಹರಶಿಕಾರಿ ಜನಾಂಗದಲ್ಲಿ ತಲೆತಲಾಂತರದಿಂದ ಈ ಪದ್ದತಿ ನಡೆದುಕೊಂಡು ಬಂದಿದ್ದು, ಬಾಗಲಕೋಟೆ ನಗರದಲ್ಲಿ ಕಳೆದ 40 ವರ್ಷಗಳಿಂದ ತೆಂಗಿನಕಾಯಿ ಪವಾಡ ನಡೆಯುತ್ತಿದೆ, ಇಂದಿಗೂ ಮುಂದುವರೆಯುತ್ತಿದೆ. ಅಂದು ಕಾಣಿಸಿಕೊಳ್ಳುತ್ತಿದ್ದ ಸಾಂಕ್ರಾಮಿಕ ರೋಗ ತಡೆಯೋದಕ್ಕೆ ಅಂತ ಶುರುವಾದ ತೆಂಗಿನಕಾಯಿ ಪವಾಡ ಇಂದಿಗೂ ನಡೆಯುತ್ತಿದೆ.

ಇದೆಲ್ಲ ದೈವಿಶಕ್ತಿ, ದೇವಿ ಪೂಜೆ ಮಾಡಿದ ಕೆಲ ಹೊತ್ತು ದೇವಿ ಮೈಮೇಲೆ ಆವಾಹನೆ ಮಾಡಿರುತ್ತಾಳೆ. ಇದೆಲ್ಲ ಅವಳ ಶಕ್ತಿ, ನಮಗೇನು ಗೊತ್ತಿರೋದಿಲ್ಲ. ಮೊದಲು ನಮ್ಮ ತಂದೆ ಅಜ್ಜಂದಿರು ಈ ಪವಾಡ ಮಾಡುತ್ತಿದ್ದರು. ಈಗ ನಾವು ಮುಂದುವರೆಸಿದ್ದೇವೆ. ಇದರಿಂದಾಗಿಯೇ ನಮಗೆ ಏನೂ ನೋವಾಗೋದಿಲ್ಲ. ಎಲ್ಲ ದೇವಿ ಶಕ್ತಿ, ತನ್ನ ಶಕ್ತಿ ತೋರಿಸೋದಕ್ಕೆ ದೇವಿ ಹೀಗೆ ಮಾಡಿಸುತ್ತಾಳೆ ಅಂತಾರೆ ತೆಂಗಿನಕಾಯಿ ಒಡೆದುಕೊಂಡ ಪೂಜಾರಿಗಳಾದ ಪರಶುರಾಮ ಪೂಜಾರಿ.

ಈ ಹಿಂದೆ ಮೂರು ವರ್ಷ ಕೋವಿಡ್ ನಿಂದ ಜಾತ್ರೆಗೆ ಕಂಟಕ ಎದುರಾಗಿತ್ತು. ಆದರೆ ಕಳೆದ ವರ್ಷ ಹಾಗೂ ಈ ವರ್ಷ ಪುನಃ ಅದ್ದೂರಿಯಾಗಿ ದಂಡಿನ ದುರ್ಗಾದೇವಿ ಜಾತ್ರೆ ನಡೆದಿದೆ. ಜಾತ್ರೆಯಲ್ಲಿ ತೆಂಗಿನಕಾಯಿ ತಲೆಗೆ ಒಡೆದುಕೊಳ್ಳೋದನ್ನು ನೋಡೋದೆ ಭಯಾನಕ. ತಲೆಗೆ ಫಟ್ ಫಟ್ ಅಂತ ಕಾಯಿ ಒಡೆದುಕೊಳ್ಳುತ್ತಿದ್ದು, ತೆಂಗಿನ ಕಾಯಿಯ ಹಾಲು ಸುತ್ತಲೂ ಚಿಮ್ಮುತ್ತಿತ್ತು. ಅದರೆ ನೋಡೋರು ಭಯದಿಂದ ಕಣ್ಮುಚ್ಚಿಕೊಳ್ಳುವಂತಾಗ್ತಿತ್ತು.

ದೇವಿಯ ಇಬ್ಬರು ಪೂಜಾರಿಗಳು ಎರಡು ಪ್ರತ್ಯೇಕ ಸ್ಥಳದಲ್ಲಿ ತೆಂಗಿನಕಾಯಿಗಳನ್ನು ತಲೆಗೆ ಒಡೆಯುವ ಪವಾಡ ಮಾಡುತ್ತಾರೆ. ಇನ್ನು ಇದರ ಜೊತೆಗೆ ಭಕ್ತರು ತಮ್ಮ ವಿವಿಧ ಹರಕೆ ತೀರಿಸೋದಕ್ಕೆ ದೀಡ ನಮಸ್ಕಾರ ವಿಶೇಷ ಪೂಜೆ ಪುನಸ್ಕಾರ ಮಾಡುತ್ತಾರೆ. ಇಲ್ಲಿ ದಂಡಿನ ದುರ್ಗಾದೇವಿ ಜಾತ್ರೆ ಹರಣಶಿಕಾರಿ ಜನರೆಲ್ಲರನ್ನು ಒಗ್ಗೂಡಿಸುವ ಜಾತ್ರೆ.

ಈ ಜಾತ್ರೆಗೆ ಅವರ ಮನೆ ಮಂದಿ ಎಲ್ಲೇ ಇದ್ದರೂ ಸ್ಥಳಕ್ಕೆ ಬಂದು ಜಾತ್ರೆಯಲ್ಲಿ ಭಾಗಿಯಾಗಿ ಸಂಭ್ರಮಿಸುತ್ತಾರೆ. ರಾಜ್ಯ ಪರರಾಜ್ಯದಿಂದಲೂ ತೆಂಗಿನಕಾಯಿ ಪವಾಡ ನೋಡೋದಕ್ಕೆ ಭಕ್ತರು ಆಗಮಿಸ್ತಾರೆ. ಇಲ್ಲಿ ದೇವಿಗೆ ವಿವಿಧ ಹರಕೆ ಹೊತ್ತವರು ತಮ್ಮ ತಮ್ಮ ಹರಕೆ ಪ್ರಕಾರ ಬೇಡಿಕೊಂಡು ದೇವರಿಗೆ ತೆಂಗಿನಕಾಯಿಯನ್ನು ನೀಡುತ್ತಾರೆ. ಅದೇ ತೆಂಗಿನಕಾಯಿಯನ್ನು ಪೂಜಾರಿಗಳು ತಲೆಗೆ ಒಡೆದುಕೊಂಡು ಪವಾಡ ಮಾಡುತ್ತಾರೆ. ದುರ್ಗಾದೇವಿ ಜಾತ್ರೆಯ ಪ್ರಮುಖ ಆಕರ್ಷಣೆಯಾದ ತೆಂಗಿನಕಾಯಿ ಪವಾಡ ನೋಡಿ ಮನೆ ಮಂದಿಯೆಲ್ಲ ಸಂಭ್ರಮಿಸುತ್ತಾರೆ.

ಒಟ್ಟಿನಲ್ಲಿ ಹಡಣಶಿಕಾರಿ ಕಾಲೋನಿಯಲ್ಲಿ ಜಾತ್ರೆ ಸಂಭ್ರಮ ಕಳೆಗಟ್ಟಿ ಎಲ್ಲ ಸಂಬಂಧಿಕರು, ಆಪ್ತರು ಒಂದಾಗಿದ್ದರು. ಇನ್ನು ತಲೆಗೆ ತೆಂಗಿನಕಾಯಿ ಒಡೆಯುವ ಪವಾಡದ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದರೆ ಭಕ್ತರು ಮಾತ್ರ ಎಲ್ಲ ದೇವಿಶಕ್ತಿ ಅಂತಿದ್ದಾರೆ.

ಬಾಗಲಕೋಟೆ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?