AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಗುಳೇದಗುಡ್ಡ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಸರ್ ನೀವು ಬಂದಿದ್ದೀರಿ ಅಂತ ನಮ್ಮ ಅಭ್ಯರ್ಥಿಗಳಾದ ಸುಮಿತ್ರಾ ಕೋಡಬಳೆ ಹಾಗೂ ಜ್ಯೋತಿ ಗೋವನಕೊಪ್ಪ ನಾಮಪತ್ರ ವಾಪಸ್ ಪಡೆದಿದ್ದೇವೆ. ಅಭಿವೃದ್ಧಿ ಮಾಡುತ್ತೀರಿ ಅಂತ ವಾಪಸ್ ಪಡೆದಿದ್ದೇವೆ ಅಂತ ಪುರಸಭೆ ಸದಸ್ಯರು ಹೇಳಿದರು.

ಬಾಗಲಕೋಟೆ: ಗುಳೇದಗುಡ್ಡ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆ
ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳು
Follow us
TV9 Web
| Updated By: preethi shettigar

Updated on:Jan 24, 2022 | 7:25 PM

ಬಾಗಲಕೋಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಇಂದು (ಜ.24) ಬಾದಾಮಿ ಕ್ಷೇತ್ರಕ್ಕೆ ಆಗಮಿಸಿದ್ದರು. ಗುಳೇದಗುಡ್ಡ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಸಿದ್ದರಾಮಯ್ಯ ಬರುವುದಿರಂದ ಕುತೂಹಲ ಕೆರಳಿಸಿತ್ತು. ಇಲ್ಲಿ ಕಾಂಗ್ರೆಸ್ ಹೆಚ್ಚು ಸಂಖ್ಯೆಯಲ್ಲಿದ್ದರೂ ಜೆಡಿಎಸ್ (JDS) ಸದಸ್ಯರು ನಾಮಪತ್ರ ಸಲ್ಲಿಸಿದ್ದರಿಂದ ಕುತೂಹಲ ಹೆಚ್ಚಾಗಿತ್ತು. ಈ ಹಿನ್ನೆಲೆ ಗುಳೇದಗುಡ್ಡ ಪುರಸಭೆ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

ಗುಳೇದಗುಡ್ಡ ಪುರಸಭೆಯ ಒಟ್ಟು 23 ಸ್ಥಾನದಲ್ಲಿ 15 ಕಾಂಗ್ರೆಸ್, ಬಿಜೆಪಿ 2, ಜೆಡಿಎಸ್ 5 ಪಕ್ಷೇತರ 1 ಸ್ಥಾನದಲ್ಲಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಬಹುಮತವಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ಕಾಂಗ್ರೆಸ್​ನ ಶಿಲ್ಪಾ ಹಳ್ಳಿ, ಉಪಾಧ್ಯಕ್ಷೆಯಾಗಿದ್ದ ಶರೀಫಾ ಮಂಗಳೂರ ಅವರ ಅವಧಿ ಒಡಂಬಡಿಕೆ ಪ್ರಕಾರ ಹತ್ತು ತಿಂಗಳಿಗೆ ಅಂತ್ಯವಾಗಿತ್ತು. ಆದರೆ ಕಾರಣಾಂತರಗಳಿಂದ ಅವರು ಹದಿನೈದು ತಿಂಗಳವರೆಗೂ ಅಧಿಕಾರದಲ್ಲಿದ್ದರು. ಈಗ ಅಧ್ಯಕ್ಷರಾಗಿ ಯಲ್ಲವ್ವ ಗೌಡರ, ಉಪಾಧಕ್ಷೆಯಾಗಿ ನಾಗರತ್ನಾ ಲಕ್ಕುಂಡಿ ಆಯ್ಕೆಯಾಗಿದ್ದಾರೆ.

ಗಮನ ಸೆಳೆದ ಪುರಸಭೆ ಸದಸ್ಯರ ಮಾತು ಸರ್ ನೀವು ಬಂದಿದ್ದೀರಿ ಅಂತ ನಮ್ಮ ಅಭ್ಯರ್ಥಿಗಳಾದ ಸುಮಿತ್ರಾ ಕೋಡಬಳೆ ಹಾಗೂ ಜ್ಯೋತಿ ಗೋವನಕೊಪ್ಪ ನಾಮಪತ್ರ ವಾಪಸ್ ಪಡೆದಿದ್ದೇವೆ. ಅಭಿವೃದ್ಧಿ ಮಾಡುತ್ತೀರಿ ಅಂತ ವಾಪಸ್ ಪಡೆದಿದ್ದೇವೆ ಅಂತ ಪುರಸಭೆ ಸದಸ್ಯರು ಹೇಳಿದರು. ಇದಕ್ಕೆ ಸಿದ್ದರಾಮಯ್ಯ ಆಯ್ತು ಅಭಿವೃದ್ಧಿ ಮಾಡೋಣ ಅಂದರು.

ಪತಿ ನೆನೆದು ಕಣ್ಣೀರು ಹಾಕಿದ ಅಧ್ಯಕ್ಷೆ ಯಲ್ಲವ್ವ ಗೌಡರ ಅಧಕ್ಷೆಯಾಗಿ ಆಯ್ಕೆ ಆಗುತ್ತಿದ್ದಂತೆ ಯಲ್ಲವ್ವ ಗೌಡರ ಕಣ್ಣೀರು ಹಾಕಿದರು. ಈ ಹಿಂದೆ ಪುರಸಭೆ ಸದಸ್ಯರಾಗಿದ್ದ ಯಲ್ಲವ್ವ ಪತಿ ಕಳೆದ ಸೆಪ್ಟೆಂಬರ್ನಲ್ಲಿ ಸಾವನ್ನಪ್ಪಿದ್ದರು. ಈಗ ಸಿದ್ದರಾಮಯ್ಯ ಸಮ್ಮುಖದಲ್ಲಿ ತಾನು ಆಯ್ಕೆಯಾಗಿದ್ದಕ್ಕೆ ಕಣ್ಣೀರು ಹಾಕಿದ ಯಲ್ಲವ್ವ ಅವರನ್ನು ಸಿದ್ದರಾಮಯ್ಯ ಸಮಾಧಾನ ಮಾಡಿದರು.

ವರದಿ: ರವಿ ಮೂಕಿ

ಇದನ್ನೂ ಓದಿ

ನಕಲಿ ದಾಖಲೆ ಸೃಷ್ಟಿಸಿ ವಂಚನೆ; ಮೂರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು

UP Diwas 2022: ಉತ್ತರ ಪ್ರದೇಶ ಜನರಿಗೆ ರಾಷ್ಟ್ರಪತಿ, ಗೃಹ ಸಚಿವರಿಂದ ಶುಭಾಶಯ; ಸಿಎಂ ಯೋಗಿ ವಿಡಿಯೋ ಶೇರ್​ ಮಾಡಿದ ಪ್ರಧಾನಿ ಮೋದಿ

Published On - 2:56 pm, Mon, 24 January 22

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್