ಬಾಗಲಕೋಟೆ: ಗುಳೇದಗುಡ್ಡ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಸರ್ ನೀವು ಬಂದಿದ್ದೀರಿ ಅಂತ ನಮ್ಮ ಅಭ್ಯರ್ಥಿಗಳಾದ ಸುಮಿತ್ರಾ ಕೋಡಬಳೆ ಹಾಗೂ ಜ್ಯೋತಿ ಗೋವನಕೊಪ್ಪ ನಾಮಪತ್ರ ವಾಪಸ್ ಪಡೆದಿದ್ದೇವೆ. ಅಭಿವೃದ್ಧಿ ಮಾಡುತ್ತೀರಿ ಅಂತ ವಾಪಸ್ ಪಡೆದಿದ್ದೇವೆ ಅಂತ ಪುರಸಭೆ ಸದಸ್ಯರು ಹೇಳಿದರು.

ಬಾಗಲಕೋಟೆ: ಗುಳೇದಗುಡ್ಡ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆ
ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳು
Follow us
| Updated By: preethi shettigar

Updated on:Jan 24, 2022 | 7:25 PM

ಬಾಗಲಕೋಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಇಂದು (ಜ.24) ಬಾದಾಮಿ ಕ್ಷೇತ್ರಕ್ಕೆ ಆಗಮಿಸಿದ್ದರು. ಗುಳೇದಗುಡ್ಡ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಸಿದ್ದರಾಮಯ್ಯ ಬರುವುದಿರಂದ ಕುತೂಹಲ ಕೆರಳಿಸಿತ್ತು. ಇಲ್ಲಿ ಕಾಂಗ್ರೆಸ್ ಹೆಚ್ಚು ಸಂಖ್ಯೆಯಲ್ಲಿದ್ದರೂ ಜೆಡಿಎಸ್ (JDS) ಸದಸ್ಯರು ನಾಮಪತ್ರ ಸಲ್ಲಿಸಿದ್ದರಿಂದ ಕುತೂಹಲ ಹೆಚ್ಚಾಗಿತ್ತು. ಈ ಹಿನ್ನೆಲೆ ಗುಳೇದಗುಡ್ಡ ಪುರಸಭೆ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

ಗುಳೇದಗುಡ್ಡ ಪುರಸಭೆಯ ಒಟ್ಟು 23 ಸ್ಥಾನದಲ್ಲಿ 15 ಕಾಂಗ್ರೆಸ್, ಬಿಜೆಪಿ 2, ಜೆಡಿಎಸ್ 5 ಪಕ್ಷೇತರ 1 ಸ್ಥಾನದಲ್ಲಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಬಹುಮತವಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ಕಾಂಗ್ರೆಸ್​ನ ಶಿಲ್ಪಾ ಹಳ್ಳಿ, ಉಪಾಧ್ಯಕ್ಷೆಯಾಗಿದ್ದ ಶರೀಫಾ ಮಂಗಳೂರ ಅವರ ಅವಧಿ ಒಡಂಬಡಿಕೆ ಪ್ರಕಾರ ಹತ್ತು ತಿಂಗಳಿಗೆ ಅಂತ್ಯವಾಗಿತ್ತು. ಆದರೆ ಕಾರಣಾಂತರಗಳಿಂದ ಅವರು ಹದಿನೈದು ತಿಂಗಳವರೆಗೂ ಅಧಿಕಾರದಲ್ಲಿದ್ದರು. ಈಗ ಅಧ್ಯಕ್ಷರಾಗಿ ಯಲ್ಲವ್ವ ಗೌಡರ, ಉಪಾಧಕ್ಷೆಯಾಗಿ ನಾಗರತ್ನಾ ಲಕ್ಕುಂಡಿ ಆಯ್ಕೆಯಾಗಿದ್ದಾರೆ.

ಗಮನ ಸೆಳೆದ ಪುರಸಭೆ ಸದಸ್ಯರ ಮಾತು ಸರ್ ನೀವು ಬಂದಿದ್ದೀರಿ ಅಂತ ನಮ್ಮ ಅಭ್ಯರ್ಥಿಗಳಾದ ಸುಮಿತ್ರಾ ಕೋಡಬಳೆ ಹಾಗೂ ಜ್ಯೋತಿ ಗೋವನಕೊಪ್ಪ ನಾಮಪತ್ರ ವಾಪಸ್ ಪಡೆದಿದ್ದೇವೆ. ಅಭಿವೃದ್ಧಿ ಮಾಡುತ್ತೀರಿ ಅಂತ ವಾಪಸ್ ಪಡೆದಿದ್ದೇವೆ ಅಂತ ಪುರಸಭೆ ಸದಸ್ಯರು ಹೇಳಿದರು. ಇದಕ್ಕೆ ಸಿದ್ದರಾಮಯ್ಯ ಆಯ್ತು ಅಭಿವೃದ್ಧಿ ಮಾಡೋಣ ಅಂದರು.

ಪತಿ ನೆನೆದು ಕಣ್ಣೀರು ಹಾಕಿದ ಅಧ್ಯಕ್ಷೆ ಯಲ್ಲವ್ವ ಗೌಡರ ಅಧಕ್ಷೆಯಾಗಿ ಆಯ್ಕೆ ಆಗುತ್ತಿದ್ದಂತೆ ಯಲ್ಲವ್ವ ಗೌಡರ ಕಣ್ಣೀರು ಹಾಕಿದರು. ಈ ಹಿಂದೆ ಪುರಸಭೆ ಸದಸ್ಯರಾಗಿದ್ದ ಯಲ್ಲವ್ವ ಪತಿ ಕಳೆದ ಸೆಪ್ಟೆಂಬರ್ನಲ್ಲಿ ಸಾವನ್ನಪ್ಪಿದ್ದರು. ಈಗ ಸಿದ್ದರಾಮಯ್ಯ ಸಮ್ಮುಖದಲ್ಲಿ ತಾನು ಆಯ್ಕೆಯಾಗಿದ್ದಕ್ಕೆ ಕಣ್ಣೀರು ಹಾಕಿದ ಯಲ್ಲವ್ವ ಅವರನ್ನು ಸಿದ್ದರಾಮಯ್ಯ ಸಮಾಧಾನ ಮಾಡಿದರು.

ವರದಿ: ರವಿ ಮೂಕಿ

ಇದನ್ನೂ ಓದಿ

ನಕಲಿ ದಾಖಲೆ ಸೃಷ್ಟಿಸಿ ವಂಚನೆ; ಮೂರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು

UP Diwas 2022: ಉತ್ತರ ಪ್ರದೇಶ ಜನರಿಗೆ ರಾಷ್ಟ್ರಪತಿ, ಗೃಹ ಸಚಿವರಿಂದ ಶುಭಾಶಯ; ಸಿಎಂ ಯೋಗಿ ವಿಡಿಯೋ ಶೇರ್​ ಮಾಡಿದ ಪ್ರಧಾನಿ ಮೋದಿ

Published On - 2:56 pm, Mon, 24 January 22

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ