AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಗುಳೇದಗುಡ್ಡ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಸರ್ ನೀವು ಬಂದಿದ್ದೀರಿ ಅಂತ ನಮ್ಮ ಅಭ್ಯರ್ಥಿಗಳಾದ ಸುಮಿತ್ರಾ ಕೋಡಬಳೆ ಹಾಗೂ ಜ್ಯೋತಿ ಗೋವನಕೊಪ್ಪ ನಾಮಪತ್ರ ವಾಪಸ್ ಪಡೆದಿದ್ದೇವೆ. ಅಭಿವೃದ್ಧಿ ಮಾಡುತ್ತೀರಿ ಅಂತ ವಾಪಸ್ ಪಡೆದಿದ್ದೇವೆ ಅಂತ ಪುರಸಭೆ ಸದಸ್ಯರು ಹೇಳಿದರು.

ಬಾಗಲಕೋಟೆ: ಗುಳೇದಗುಡ್ಡ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆ
ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳು
TV9 Web
| Edited By: |

Updated on:Jan 24, 2022 | 7:25 PM

Share

ಬಾಗಲಕೋಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಇಂದು (ಜ.24) ಬಾದಾಮಿ ಕ್ಷೇತ್ರಕ್ಕೆ ಆಗಮಿಸಿದ್ದರು. ಗುಳೇದಗುಡ್ಡ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಸಿದ್ದರಾಮಯ್ಯ ಬರುವುದಿರಂದ ಕುತೂಹಲ ಕೆರಳಿಸಿತ್ತು. ಇಲ್ಲಿ ಕಾಂಗ್ರೆಸ್ ಹೆಚ್ಚು ಸಂಖ್ಯೆಯಲ್ಲಿದ್ದರೂ ಜೆಡಿಎಸ್ (JDS) ಸದಸ್ಯರು ನಾಮಪತ್ರ ಸಲ್ಲಿಸಿದ್ದರಿಂದ ಕುತೂಹಲ ಹೆಚ್ಚಾಗಿತ್ತು. ಈ ಹಿನ್ನೆಲೆ ಗುಳೇದಗುಡ್ಡ ಪುರಸಭೆ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

ಗುಳೇದಗುಡ್ಡ ಪುರಸಭೆಯ ಒಟ್ಟು 23 ಸ್ಥಾನದಲ್ಲಿ 15 ಕಾಂಗ್ರೆಸ್, ಬಿಜೆಪಿ 2, ಜೆಡಿಎಸ್ 5 ಪಕ್ಷೇತರ 1 ಸ್ಥಾನದಲ್ಲಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಬಹುಮತವಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ಕಾಂಗ್ರೆಸ್​ನ ಶಿಲ್ಪಾ ಹಳ್ಳಿ, ಉಪಾಧ್ಯಕ್ಷೆಯಾಗಿದ್ದ ಶರೀಫಾ ಮಂಗಳೂರ ಅವರ ಅವಧಿ ಒಡಂಬಡಿಕೆ ಪ್ರಕಾರ ಹತ್ತು ತಿಂಗಳಿಗೆ ಅಂತ್ಯವಾಗಿತ್ತು. ಆದರೆ ಕಾರಣಾಂತರಗಳಿಂದ ಅವರು ಹದಿನೈದು ತಿಂಗಳವರೆಗೂ ಅಧಿಕಾರದಲ್ಲಿದ್ದರು. ಈಗ ಅಧ್ಯಕ್ಷರಾಗಿ ಯಲ್ಲವ್ವ ಗೌಡರ, ಉಪಾಧಕ್ಷೆಯಾಗಿ ನಾಗರತ್ನಾ ಲಕ್ಕುಂಡಿ ಆಯ್ಕೆಯಾಗಿದ್ದಾರೆ.

ಗಮನ ಸೆಳೆದ ಪುರಸಭೆ ಸದಸ್ಯರ ಮಾತು ಸರ್ ನೀವು ಬಂದಿದ್ದೀರಿ ಅಂತ ನಮ್ಮ ಅಭ್ಯರ್ಥಿಗಳಾದ ಸುಮಿತ್ರಾ ಕೋಡಬಳೆ ಹಾಗೂ ಜ್ಯೋತಿ ಗೋವನಕೊಪ್ಪ ನಾಮಪತ್ರ ವಾಪಸ್ ಪಡೆದಿದ್ದೇವೆ. ಅಭಿವೃದ್ಧಿ ಮಾಡುತ್ತೀರಿ ಅಂತ ವಾಪಸ್ ಪಡೆದಿದ್ದೇವೆ ಅಂತ ಪುರಸಭೆ ಸದಸ್ಯರು ಹೇಳಿದರು. ಇದಕ್ಕೆ ಸಿದ್ದರಾಮಯ್ಯ ಆಯ್ತು ಅಭಿವೃದ್ಧಿ ಮಾಡೋಣ ಅಂದರು.

ಪತಿ ನೆನೆದು ಕಣ್ಣೀರು ಹಾಕಿದ ಅಧ್ಯಕ್ಷೆ ಯಲ್ಲವ್ವ ಗೌಡರ ಅಧಕ್ಷೆಯಾಗಿ ಆಯ್ಕೆ ಆಗುತ್ತಿದ್ದಂತೆ ಯಲ್ಲವ್ವ ಗೌಡರ ಕಣ್ಣೀರು ಹಾಕಿದರು. ಈ ಹಿಂದೆ ಪುರಸಭೆ ಸದಸ್ಯರಾಗಿದ್ದ ಯಲ್ಲವ್ವ ಪತಿ ಕಳೆದ ಸೆಪ್ಟೆಂಬರ್ನಲ್ಲಿ ಸಾವನ್ನಪ್ಪಿದ್ದರು. ಈಗ ಸಿದ್ದರಾಮಯ್ಯ ಸಮ್ಮುಖದಲ್ಲಿ ತಾನು ಆಯ್ಕೆಯಾಗಿದ್ದಕ್ಕೆ ಕಣ್ಣೀರು ಹಾಕಿದ ಯಲ್ಲವ್ವ ಅವರನ್ನು ಸಿದ್ದರಾಮಯ್ಯ ಸಮಾಧಾನ ಮಾಡಿದರು.

ವರದಿ: ರವಿ ಮೂಕಿ

ಇದನ್ನೂ ಓದಿ

ನಕಲಿ ದಾಖಲೆ ಸೃಷ್ಟಿಸಿ ವಂಚನೆ; ಮೂರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು

UP Diwas 2022: ಉತ್ತರ ಪ್ರದೇಶ ಜನರಿಗೆ ರಾಷ್ಟ್ರಪತಿ, ಗೃಹ ಸಚಿವರಿಂದ ಶುಭಾಶಯ; ಸಿಎಂ ಯೋಗಿ ವಿಡಿಯೋ ಶೇರ್​ ಮಾಡಿದ ಪ್ರಧಾನಿ ಮೋದಿ

Published On - 2:56 pm, Mon, 24 January 22

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ