AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ; ವ್ಯಾಕ್ಸಿನ್ ಪಡೆದ ಮಕ್ಕಳಿಗೆ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನ

ಕೊವಿಡ್ ಲಸಿಕೆ ನೀಡುವ ವೇಳೆ ಶಾಲೆ ಬಳಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತದೆ. ಏನೇ ಆರೋಗ್ಯ ಸಮಸ್ಯೆ ಎದುರಾದರೂ ಆಸ್ಪತ್ರೆಗೆ ದಾಖಲಿಸಿ ಮಕ್ಕಳಿಗೆ ಚಿಕಿತ್ಸೆ ನೀಡಲು ಪೂರ್ಣ ತಯಾರಿ ಮಾಡಿಕೊಳ್ಳಲಾಗಿದೆ.

15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ; ವ್ಯಾಕ್ಸಿನ್ ಪಡೆದ ಮಕ್ಕಳಿಗೆ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನ
ಪ್ರಾತಿನಿಧಿಕ ಚಿತ್ರ
TV9 Web
| Updated By: preethi shettigar|

Updated on:Jan 02, 2022 | 10:13 AM

Share

ಬೆಂಗಳೂರು: 15 ರಿಂದ 18 ವರ್ಷದ ಮಕ್ಕಳಿಗೆ ನಾಳೆಯಿಂದ (ಜನವರಿ 03) ಕೊರೊನಾ ಲಸಿಕೆ (corona vaccine) ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ಪಡೆದ ಮಕ್ಕಳಿಗೆ (Children) ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ವಿದ್ಯಾರ್ಥಿಗಳು ಲಸಿಕೆ ಪಡೆದ ಮರು ದಿನ ರಜೆ (Leave) ನೀಡುವುದಕ್ಕೆ ತೀರ್ಮಾನ ಮಾಡಲಾಗಿದೆ. ಮೊದಲ ದಿನ 50 ವಿದ್ಯಾರ್ಥಿಗಳಿಗೆ ಮಾತ್ರ ಕೊವಿಡ್ ಲಸಿಕೆ ನೀಡಲಾಗುತ್ತಿದೆ. ಅಂದರೆ ಒಂದು ಶಾಲೆಯಲ್ಲಿ 50 ವಿದ್ಯಾರ್ಥಿಗಳಿಗೆ ಮಾತ್ರ ಕೊವಿಡ್ ಲಸಿಕೆ ನೀಡಲಾಗುತ್ತದೆ. ನಂತರದ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ನೀಡಲಾಗುತ್ತದೆ.

ಕೊವಿಡ್ ಲಸಿಕೆ ನೀಡುವ ವೇಳೆ ಶಾಲೆ ಬಳಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತದೆ. ಏನೇ ಆರೋಗ್ಯ ಸಮಸ್ಯೆ ಎದುರಾದರೂ ಆಸ್ಪತ್ರೆಗೆ ದಾಖಲಿಸಿ ಮಕ್ಕಳಿಗೆ ಚಿಕಿತ್ಸೆ ನೀಡಲು ಪೂರ್ಣ ತಯಾರಿ ಮಾಡಿಕೊಳ್ಳಲಾಗಿದೆ. ಮೊದಲ ಬಾರಿ ಮಕ್ಕಳಿಗೆ ವ್ಯಾಕ್ಸಿನ್ ಹಾಕುವ ಹಿನ್ನೆಲೆ, 30 ನಿಮಿಷ ಕಾಯುವ ಕೋಣೆಗೆ ಆದ್ಯತೆ ನೀಡಲಾಗಿದೆ. ವ್ಯಾಕ್ಸಿನ್ ಪಡೆದ ವಿದ್ಯಾರ್ಥಿಗೆ ಕೈನೋವು, ಸುಸ್ತು, ಜ್ವರ ಕಾಣಿಸಿಕೊಂಡರೆ ರಜೆ ಪಡೆಯಬಹುದು

ಕರ್ನಾಟಕದಲ್ಲಿ ಮಕ್ಕಳಿಗೆ ಕೊರೊನಾ ಲಸಿಕಾ ಅಭಿಯಾನಕ್ಕೆ ಸಿದ್ಧತೆ ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ ನಡೆಸಲಾಗುವುದು. ಕರ್ನಾಟಕ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಲಸಿಕಾ ಅಭಿಯಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಲಸಿಕಾ ಅಭಿಯಾನ ನಡೆಸಲಾಗುವುದು ಎಂದು ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಶನಿವಾರ ಹೇಳಿಕೆ ನೀಡಿದ್ದಾರೆ.

ಶಿಕ್ಷಕರು, ಪೋಷಕರ ಜತೆ ಸಭೆ ನಡೆಸಿ ಹಂತಹಂತವಾಗಿ ಲಸಿಕೆ ನೀಡಲಾಗುವುದು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ನೀಡುತ್ತೇವೆ. ಮಕ್ಕಳು ಲಸಿಕೆ ಹಾಕಿಸಿಕೊಳ್ಳುವುದರಿಂದ ಸಹಕಾರಿಯಾಗಲಿದೆ. ಲಸಿಕೆ ಪಡೆಯಲು ನೋಂದಣಿ ಮಾಡಿಸುವುದು ಕಡ್ಡಾಯವಲ್ಲ. ಐಡಿ ಕಾರ್ಡ್​ ತೋರಿಸಿ ಸ್ಥಳದಲ್ಲೇ ಲಸಿಕೆ ಹಾಕಿಸಿಕೊಳ್ಳಬಹುದು ಎಂದು ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ವಿವರಣೆ ನೀಡಿದ್ದಾರೆ.

ಪೋಷಕರಿಗೆ ಯಾವುದೇ ಆತಂಕ ಬೇಡ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಲಸಿಕಾ ಕಾರ್ಯಕ್ರಮ ಆಯೋಜನೆ ಆಗುತ್ತದೆ. ಲಸಿಕೆ ಪಡೆಯಲು ಯಾವುದೇ ಒತ್ತಾಯ ಇರೋದಿಲ್ಲ. ಆದರೆ ಪ್ರಸ್ತುತ ಮಕ್ಕಳಿಗೆ ಕೊವಿಡ್ ಬಾಧಿಸುತ್ತಿದೆ. ಲಸಿಕೆ ಪಡೆಯದವರಿಗೆ ಕೊರೊನಾ ಕಾಡುತ್ತಿದೆ. ಈ ಸಾಲಿನಲ್ಲಿ ಮಕ್ಕಳಿದ್ದು, ಅವರ ರಕ್ಷಣೆಗೆ ಲಸಿಕೆ ಸಹಾಯಕಾರಿ ಆಗಲಿದೆ. ಶಾಲೆ ಕಾಲೇಜಿಗೆ ಹೋಗುತ್ತಿರುವ ಮಕ್ಕಳಿಗೆ ಆದ್ಯತೆ ನೀಡಿ ಕೇಂದ್ರ ಸರ್ಕಾರ ಈ ಲಸಿಕಾ ಅಭಿಯಾನ ಆರಂಭಿಸಿದೆ ಎಂದು ಅವರು ತಿಳಿಸಿದ್ದಾರೆ.

ಜನವರಿ 3 ರಿಂದ 15 ವರ್ಷದಿಂದ 18 ವರ್ಷದ ಮಕ್ಕಳಿಗೆ ಕೊವಿಡ್ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಒಟ್ಟು 79 ಸಾವಿರ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡಲು ತಯಾರಿ ಮಾಡಲಾಗಿದೆ. ಲಸಿಕೆ ನೀಡಿಕೆ ಬಗ್ಗೆ ಈಗಾಗಲೆ ಪೋಷಕರ ಜೊತೆ ಸಬೆ ನಡೆಸಲಾಗಿದೆ. ಯಾವುದೇ ಪೋಷಕರು ಭಯ ಇಲ್ಲದೆ ಲಸಿಕೆ ಪಡೆಯಲು ಮುಂದಾಗಬೇಕು ಎಂದು ಹಾಸನದಲ್ಲಿ ಡಿಸಿ ಆರ್ ಗಿರೀಶ್ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಕೊರೊನಾ ಲಸಿಕೆ 3ನೇ ಡೋಸ್​ಗಾಗಿ ಕಾರ್ಬೆವ್ಯಾಕ್ಸ್​ ಬಳಕೆ?-3ನೇ ಹಂತದ ಕ್ಲಿನಕಲ್​ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ

ಜನವರಿ 3 ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಪ್ರಾರಂಭ; ಮಕ್ಕಳ ವ್ಯಾಕ್ಸಿನೇಷನ್‌ ಕುರಿತು ಮಾರ್ಗಸೂಚಿ ಬಿಡುಗಡೆ

Published On - 10:02 am, Sun, 2 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ