AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಚಿ ರೈಲು ಮಾರ್ಗಕ್ಕಾಗಿ ಭೂಸ್ವಾಧೀನ: ಪರಿಹಾರ ನೀಡದಿದ್ದಕ್ಕೆ ಎಸಿ ಕಚೇರಿಯ ಪಿಠೋಪಕರಣ ಜಪ್ತಿಗೆ ಕೋರ್ಟ್ ಆದೇಶ

14 ಕೋಟಿ 23 ಲಕ್ಷ 70 ಸಾವಿರದ 807 ರೂ ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿತ್ತು. ಪರಿಹಾರ ನೀಡದ ಹಿನ್ನೆಲೆ ಎಸಿ ಕಚೇರಿ ಜಪ್ತಿಗೆ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಕುಡಚಿ ರೈಲು ಮಾರ್ಗಕ್ಕಾಗಿ ಭೂಸ್ವಾಧೀನ: ಪರಿಹಾರ ನೀಡದಿದ್ದಕ್ಕೆ ಎಸಿ ಕಚೇರಿಯ ಪಿಠೋಪಕರಣ ಜಪ್ತಿಗೆ ಕೋರ್ಟ್ ಆದೇಶ
ತಾಲೂಕು ಆಡಳಿತ ಕಚೇರಿ
Follow us
TV9 Web
| Updated By: ಆಯೇಷಾ ಬಾನು

Updated on:Jun 14, 2023 | 3:20 PM

ಬಾಗಲಕೋಟೆ: ಕುಡಚಿ ರೈಲು ಮಾರ್ಗಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದು ಪರಿಹಾರ ನೀಡದ ವಿಚಾರಕ್ಕೆ ಸಂಬಂಧಿಸಿ ಎಸಿ ಕಚೇರಿಯ ಪಿಠೋಪಕರಣಗಳನ್ನು ಜಪ್ತಿ ಮಾಡಲು ನ್ಯಾಯಾಲಯ ಆದೇಶ ನೀಡಿದೆ. 2ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶರಿಂದ ಆದೇಶ ಹೊರಡಿಸಲಾಗಿದೆ.

ಯಲ್ಲಪ್ಪ ಚೊಳಚಗುಡ್ಡ ಅವರಿಗೆ ಸೇರಿದ 3 ಎಕರೆ 8 ಗುಂಟೆ ಜಮೀನನ್ನು ಬಾಗಲಕೋಟೆ-ಕುಡಚಿ ರೈಲು ಮಾರ್ಗಕ್ಕಾಗಿ ಕಂದಾಯ ಇಲಾಖೆ ಸ್ವಾಧೀನ ಪಡಿಸಿಕೊಂಡಿತ್ತು. ಕೋರ್ಟ್ ಆದೇಶ ಇದ್ರೂ, ಮೂರು ತಿಂಗಳಿಂದ ಪರಿಹಾರ ನೀಡದ ವಿಚಾರ‌ಕ್ಕೆ ಸಂಬಂಧಿಸಿ ಬಾಗಲಕೋಟೆ 2ನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶರು ಎಸಿ ಕಚೇರಿ ಜಪ್ತಿಗೆ ಆದೇಶ ಹೊರಡಿಸಿದ್ದಾರೆ. ಭೂ ಮಾಲೀಕ ಯಲ್ಲಪ್ಪ ಚೊಳಚಗುಡ್ಡ ಅವರಿಗೆ 14 ಕೋಟಿ 23 ಲಕ್ಷ 70 ಸಾವಿರದ 807 ರೂ ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿತ್ತು. ಪರಿಹಾರ ನೀಡದ ಹಿನ್ನೆಲೆ ಎಸಿ ಕಚೇರಿ ಜಪ್ತಿಗೆ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಮೂರು ತಿಂಗಳ ಹಿಂದೆಯೇ ಎಸಿ ಕಚೇರಿ ಜಪ್ತಿ ಮಾಡುವಂತೆ ತಿಳಿಸಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಇಂದು ನ್ಯಾಯವಾದಿಗಳು ಕಚೇರಿ ಜಪ್ತಿ ಮಾಡಿದರು. ಹೆಚ್ಚುವರಿ ನ್ಯಾಯಾಲಯದ ಆದೇಶ ಪ್ರಶ್ನಿಸಿ, ಅಧಿಕಾರಿಗಳು ಹೈ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಿದ್ದಾರೆ.

court Order to confiscate furniture of AC office for land acquisition for Kudachi railway line and non-compensation bagalkot news

ಜಪ್ತಿ ಮಾಡಲಾಗಿರುವ ವಸ್ತು

ಇದನ್ನೂ ಓದಿ: Gruha Jyothi Scheme: ಕರ್ನಾಟಕ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

ಭೂಸ್ವಾಧೀನದ ಪರಿಹಾರ ನೀಡದ ಹಿನ್ನೆಲೆ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿಗೆ ಆದೇಶಿಸಿದ ಕೋರ್ಟ್

ಧಾರವಾಡ: ಗದಗ ಜಿಲ್ಲೆಯ ಹಳ್ಳಿಕೇರಿ ಗ್ರಾಮದ ರಾಮಚಂದ್ರಪ್ಪ ಅಡ್ಡೇದಾರ್ ಎನ್ನುವವರ 3 ಎಕರೆ ಜಮೀನನ್ನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆದ್ದಾರಿ 63ನ್ನು ನೀರ್ಮಾಣ ಮಾಡಲು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪ್ರತಿ ಚದರ ಅಡಿಗೆ 79 ರೂ. ಹಣವನ್ನ ನಿಗದಿ ಮಾಡಲಾಗಿತ್ತು. ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲ್ಲಿಯವರೆಗೆ ವಶಪಡಿಸಿಕೊಂಡ ಜಮೀನಿನ ಹಣವನ್ನ ನೀಡದ ಪರಿಣಾಮ ಕೋರ್ಟ್​ಗೆ ಹೋಗಿದ್ದ ರಾಮಚಂದ್ರಪ್ಪ ಅಡ್ಡೇದಾರ್ ಇದೀಗ ಕೋರ್ಟ್​, ಹೆದ್ದಾರಿ ಪ್ರಾಧಿಕಾರದ ಕಚೇರಿಯನ್ನ ಜಪ್ತಿ ಮಾಡಲು ಆದೇಶ ಹೊರಡಿಸಿದ್ದು, ಇಂದು ಜಪ್ತಿ ಮಾಡಲಾಗಿದೆ.

ಅತಿ ಕಡಿಮೆ ದರ ನಿಗದಿ ಮಾಡಿದ್ದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಕುರಿತು ಡಿಸಿ ಕೋರ್ಟ್​ಗೆ ಹೋಗಿದ್ದ ರಾಮಚಂದ್ರಪ್ಪ ಅಡ್ಡೇದಾರ್ ಡಿಸಿ ಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ನಂತರ ಡಿಸಿ ಕೋರ್ಟ್ ಪ್ರತಿ ಚದರ ಅಡಿಗೆ 79 ರೂ. ನೀಡಲು ಆದೇಶಿಸಿತ್ತು. ಆದರೂ ಅಧಿಕಾರಿಗಳು ಇನ್ನು ಪರಿಹಾರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಕೋರ್ಟ್ ಮೊರೆ ಹೋಗಿದ್ದ ರಾಮಚಂದ್ರಪ್ಪ, ಇದೀಗ ಕೋರ್ಟ್ ಕಚೇರಿ ಜಪ್ತಿಗೆ ಆದೇಶಿಸಿ ಕೋರ್ಟ್ ಸಿಬ್ಬಂದಿಯಿಂದ ಕಚೇರಿ ಪೀಠೋಪಕರಣ, ಕಂಪ್ಯೂಟರ್, ಪ್ರಿಂಟರ್ ಸೇರಿ ವಾಹನವನ್ನ ಜಪ್ತಿ ಮಾಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:17 pm, Wed, 14 June 23

ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!