AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: 2012ರಲ್ಲಿ ನಡೆದ ಕೊಲೆ ಪ್ರಕರಣದ 7 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ

ಯಲ್ಲಪ್ಪ ಗಾಳಿ (55) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಾಗಲಕೋಟೆ 2ನೇ ಹೆಚ್ಚುವರಿ ಕೋರ್ಟ್ ಜೀವಾವಧಿ ಶಿಕ್ಷೆಯ ಆದೇಶ ನೀಡಿದೆ. 2012 ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಶಿಕ್ಷೆ ನೀಡಲಾಗಿದೆ.

ಬಾಗಲಕೋಟೆ: 2012ರಲ್ಲಿ ನಡೆದ ಕೊಲೆ ಪ್ರಕರಣದ 7 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 24, 2021 | 6:03 PM

Share

ಬಾಗಲಕೋಟೆ: ಇಲ್ಲಿನ ಶಿರೂರು ಗ್ರಾಮದಲ್ಲಿ ಎಸ್‌ಡಿಎಸ್ ಅಧ್ಯಕ್ಷರ ಆಯ್ಕೆ ವೇಳೆ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 7 ಜನ ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಯಲ್ಲಪ್ಪ ಗಾಳಿ (55) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಾಗಲಕೋಟೆ 2ನೇ ಹೆಚ್ಚುವರಿ ಕೋರ್ಟ್ ಜೀವಾವಧಿ ಶಿಕ್ಷೆಯ ಆದೇಶ ನೀಡಿದೆ. 2012 ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಶಿಕ್ಷೆ ನೀಡಲಾಗಿದೆ. ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸಂತೋಷ ಸಿಬಿ ಅವರಿಂದ ಆದೇಶ ನೀಡಲಾಗಿದೆ.

ಸರಕಾರಿ ಅಭಿಯೋಜಕರಾದ ಸುನಿಲ್ ಹಂಜಿ ಕೊಲೆಯಾದವರ ಪರ ವಾದ ಮಂಡಿಸಿದ್ದರು. ಶಿರೂರು ಗ್ರಾಮದಲ್ಲಿ ಫೆಬ್ರವರಿ 1 2012 ರಂದು ರಾತ್ರಿ 1 ಗಂಟೆಗೆ ಕೊಲೆ ಪ್ರಕರಣ ನಡೆದಿತ್ತು. ಶಿರೂರು ಸರಕಾರಿ ಪ್ರಾಥಮಿಕ ಶಾಲೆ ಎಸ್​ಡಿಎಮ್​ಸಿ ಅಧ್ಯಕ್ಷ ಆಯ್ಕೆ ವೇಳೆ ಯಲ್ಲಪ್ಪ ಗಾಳಿ ಎಂಬುವರ ಕೊಲೆ ನಡೆದಿತ್ತು. ಮನೆಗೆ ಪೆಟ್ರೋಲ್ ಎರಚಲಾಗಿತ್ತು. ಇಡೀ ಕುಟುಂಬಕ್ಕೆ ಬೆಂಕಿ ಹಚ್ಚಿ ಕೊಲೆಗೈಯ್ಯವ ಉದ್ದೇಶವಿತ್ತು. ಜೀವನ್ಮರಣ ಹೋರಾಟದ ಮಧ್ಯೆ ಯಲ್ಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಫೆಬ್ರವರಿ 4 2012 ರಂದು ಮಿರಜ್​ನಲ್ಲಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದ ಯಲ್ಲಪ್ಪ ಗಾಳಿ ಸಾವನ್ನಪ್ಪಿದ್ದರು.

ರಾಯಚೂರು: ಇಬ್ಬರು ಹಂತಕರ ಬಂಧನ ನಿವೃತ್ತ ಶಿರಸ್ತೇದಾರನ ಹತ್ಯೆಗೈದಿದ್ದ ಇಬ್ಬರು ಹಂತಕರನ್ನು ಬಂಧಿಸಲಾಗಿದೆ. ರಾಯಚೂರು ಪಶ್ಚಿಮ ಠಾಣೆ ಪೊಲೀಸರಿಂದ ಇಬ್ಬರ ಬಂಧನ ಮಾಡಲಾಗಿದೆ. ನವೆಂಬರ್ 12 ರಂದು ನಿವೃತ್ತ ಶಿರಸ್ತೇದಾರ ಪಂಪಾಪತಿ ಬರ್ಬರ ಕೊಲೆ ಆಗಿದ್ದರು. ರಾಯಚೂರಿನ ನಿಜಲಿಂಗಪ್ಪ ಕಾಲೋನಿಯಲ್ಲಿ ಹತ್ಯೆ ನಡೆದಿತ್ತು. ಇದೀಗ ಪ್ರಕರಣ ಸಂಬಂಧ ಪಂಪಾಪತಿ ಮೊಮ್ಮಗ ಅಖಿಲೇಶ್, ಗೌತಮ್ ಬಂಧನ ಮಾಡಲಾಗಿದೆ. ಕುಡಿಯಲು ಹಣಕ್ಕಾಗಿ ಮೊಮ್ಮಗ ಅಖಿಲೇಶ್ ತಾತನ ಕತ್ತು‌ಸೀಳಿದ್ದ. ಗೌತಮ್, ದೋಚಿದ ಹಣದಿಂದ ಕಾಲೇಜು ಫೀಸ್ ಕಟ್ಟಿದ್ದ ಹಾಗೂ ಅದೇ ದುಡ್ಡಲ್ಲಿ ಗರ್ಲ್​​ಫ್ರೆಂಡ್​​​ಗೆ ಫೋನ್ ಕೊಡಿಸಿದ್ದ. ಈ ಬಗ್ಗೆ ರಾಯಚೂರು ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ದೇವನಹಳ್ಳಿ: ಮದ್ಯಸೇವಿಸಿ ಕೆರೆಯಲ್ಲಿ ಈಜಿಗಿಳಿದಿದ್ದ ವ್ಯಕ್ತಿ ಮುಳುಗಿ ಸಾವು ಮದ್ಯಸೇವಿಸಿ ಕೆರೆಯಲ್ಲಿ ಈಜಿಗಿಳಿದಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೂದಿಗೆರೆಯ ಕೆರೆಯಲ್ಲಿ ನಡೆದಿದೆ. ಮದ್ಯಸೇವಿಸಿ ಕೆರೆಗಿಳಿದಿದ್ದ ಕೇಶವ (36) ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ನಾಲ್ವರು ಅರೆಸ್ಟ್

ಇದನ್ನೂ ಓದಿ: ಬಾಗಲಕೋಟೆ: ದೊಡ್ಡಮ್ಮನ ಮಗನ ಜೊತೆ ಅನೈತಿಕ ಸಂಬಂಧ; ಪತಿ ಕೊಲೆ ಪ್ರಕರಣಕ್ಕೆ ಸಿಗ್ತು ಟ್ವಿಸ್ಟ್

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?