AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳೆ ಹಾನಿ, ಬರ; ಬಾಗಲಕೋಟೆ ಜಿಲ್ಲೆಯಲ್ಲಿ ಒಂದೂವರೆ ವರ್ಷದಲ್ಲಿ 24 ರೈತರು ಆತ್ಮಹತ್ಯೆಗೆ ಶರಣು

ಕೃಷಿಯನ್ನು ಪ್ರಕೃತಿಯೊಂದಿಗಿನ‌ ಜೂಜಾಟ ಎಂದು ಕರೆಯುತ್ತಾರೆ. ಅತಿಯಾಗಿ ಮಳೆ ಸುರಿದರೂ ರೈತನಿಗೆ ಕಷ್ಟ, ಮಳೆಯಾಗದಿದ್ದರೂ ರೈತನಿಗೆ ಬಲು ಸಂಕಟ. ಎಲ್ಲ ಮಳೆ-ಬೆಳೆ ಚೆನ್ನಾಗಿ ಬಂದು ಕೊನೆಗೆ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದಂತಾಗಿ ಪರದಾಟ. ಇದರಿಂದ ರೈತ ಪದೇ ಪದೇ ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗೆ ಬರುತ್ತದೆ. ಅದರಂತೆ ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ ಒಂದೂವರೆ ವರ್ಷದಲ್ಲಿ 24 ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ.

ಬೆಳೆ ಹಾನಿ, ಬರ; ಬಾಗಲಕೋಟೆ ಜಿಲ್ಲೆಯಲ್ಲಿ ಒಂದೂವರೆ ವರ್ಷದಲ್ಲಿ 24 ರೈತರು ಆತ್ಮಹತ್ಯೆಗೆ ಶರಣು
ಬಾಗಲಕೋಟೆ ಜಿಲ್ಲೆಯಲ್ಲಿ ಒಂದೂವರೆ ವರ್ಷದಲ್ಲಿ 24 ರೈತರು ಆತ್ಮಹತ್ಯೆಗೆ ಶರಣು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 10, 2024 | 7:46 PM

Share

ಬಾಗಲಕೋಟೆ, ಜು.10: ಕಳೆದ ವರ್ಷ ಭೀಕರ ಬರದಿಂದ ಕಂಗೆಟ್ಟ ರೈತರು ತಲೆ‌ ಮೇಲೆ ಕೈ ಹೊತ್ತು ಕೂತಿದ್ದರು. ಈ ವರ್ಷ ಉತ್ತಮ ಮಳೆ ಆಗಿದೆ, ರೈತರು(Farmers)ಬಿತ್ತನೆ ಮಾಡಿದ್ದಾರೆ. ಅಲ್ಲೋ ಇಲ್ಲೋ ಕೆಲವೊಂದು ಕಡೆ ಅತಿಯಾದ ಮಳೆಯಿಂದ ಬೆಳೆ ಹಾಳಾಗಿದ್ದನ್ನು ಬಿಟ್ಟರೆ, ಬಹುತೇಕ ಕಡೆ ಉತ್ತಮವಾದ ಮಳೆ ಆಗಿರುವುದರಿಂದ ರೈತರು ಸಂಭ್ರಮದಲ್ಲಿದ್ದಾರೆ. ಆದರೆ, ಸಂಭ್ರಮದ ಮಧ್ಯೆ ರೈತರು ಆತಂಕ ಪಡುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಹೌದು, ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಬರೋಬ್ಬರಿ 24 ರೈತರು ಸಾಲ ಭಾದೆಯಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರೈತರು ಬೆಳೆದಂತಹ ಬೆಳೆಗೆ ಸರಿಯಾಗಿ ಬೆಲೆ ಸಿಗದೇ ಇರುವಂತದ್ದು, ಬಿತ್ತಿದ ಬೆಳೆ ಕೈಗೆ ಬಾರದಿರುವ ಹಿನ್ನೆಲೆಯಲ್ಲಿ ಸಾಲದ ಸುಳಿಗೆ ಸಿಲುಕಿದ್ದಾರೆ. ಸಾಲ ತೀರಿಸಲಾಗದ ಪರಿಸ್ಥಿತಿಯಲ್ಲಿ ಇಂತಹ ನಿರ್ಧಾರ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ರೈತರು ಪಡೆಯುವಂತಹ ಬೆಳೆ ಸಾಲದ ಪ್ರಮಾಣ ಕೂಡ ದ್ವಿಗುಣವಾಗಿದೆ. ಜೊತೆಗೆ ಬ್ಯಾಂಕ್​ಗಳಲ್ಲಿ ಸಾಲ ಪಡೆಯುವ ರೈತರ ಸಂಖ್ಯೆ ಹಾಗೂ ಸಾಲದ ಮೊತ್ತ ಗಣನೀಯ ಏರಿಕೆ ಕಂಡಿದೆ. 2017-18 ರಲ್ಲಿ 3‌ ಲಕ್ಷದ 2,000 ರೈತರು, 3,948 ಕೋಟಿ ರೂಪಾಯಿ ಬೆಳೆ ಸಾಲ ಪಡೆದಿದ್ದರು. ಆರು ವರ್ಷದಲ್ಲಿ ಬೆಳೆ ಸಾಲ ಪಡೆದ ರೈತರ ಸಂಖ್ಯೆ ನಾಲ್ಕು ಲಕ್ಷದ 53 ಸಾವಿರಕ್ಕೆ ಏರಿಕೆಯಾಗಿದ್ದು, 2024 ರಲ್ಲಿ 6,028 ಕೋಟಿ ಸಾಲ ಪಡೆದಿದ್ದಾರೆ.

ಇದನ್ನೂ ಓದಿ:ಬಳ್ಳಾರಿ: ದಲ್ಲಾಳಿಗಳ ಕಾಟದಿಂದ ಬೇಸತ್ತು ವಿಷಸೇವಿಸಿ ನಾಲ್ವರು ರೈತರು ಆತ್ಮಹತ್ಯೆಗೆ ಯತ್ನ

ಈ ಬಗ್ಗೆ ಮಾತಾಡಿದ ಲೀಡ್ ಬ್ಯಾಂಕ್ ಮ್ಯಾನೇಜರ್ ರಾಜಕುಮಾರ ಹೂಗಾರ, ‘ವರ್ಷದಿಂದ ವರ್ಷಕ್ಕೆ ಬೆಳೆ ಸಾಲ ನೀಡುವ ಪ್ರಮಾಣ ಏರಿಕೆಯಾಗುತ್ತಾ ಹೋಗುತ್ತಿದೆ. ಜೊತೆಗೆ ರೈತರ ಪ್ರಮಾಣವು ಹೆಚ್ಚಾಗುತ್ತಿದೆ. ಅದಕ್ಕೆ ಅನುಗುಣವಾಗಿ ಸಾಲದ ಮೊತ್ತವು ಏರಿಕೆಯಾಗಿದೆ. ಆದರೆ, ರೈತರಲ್ಲಿ ವಿನಂತಿ ಮಾಡುವುದೆನೆಂದರೆ ‘ಯಾವುದೇ ರೈತರು ಕೂಡ ಸಾಲದಿಂದ ಧೃತಿಗೆಡಬೇಕಾಗಿಲ್ಲ. ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರವನ್ನು ಕೈಗೊಳ್ಳಬೇಡಿ. ಏನೇ ಇದ್ದರೂ ಬ್ಯಾಂಕ್ ಮೇಲಾಧಿಕಾರಿಗಳನ್ನು ಸಂಪರ್ಕಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಯತ್ನಿಸಬೇಕು ಎಂದು ಮನವಿ ಮಾಡಿದ್ದಾರೆ. ಒಟ್ಟಿನಲ್ಲಿ ‌ಒಂದು ಕಡೆ‌‌ ಬೆಳೆ ಸಾಲದ ಮೊತ್ತ ದುಪ್ಪಟ್ಟಾಗುತ್ತಿದೆ. ಜೊತೆಗೆ ರೈತರ ಆತ್ಮಹತ್ಯೆ ಸಂಖ್ಯೆ ಇಂದುವರೆಗೆ ವರ್ಷದಲ್ಲಿ ಎರಡು ಡಜನ್ ಆಗಿದ್ದು ವಿಪರ್ಯಾಸದ ಸಂಗತಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 pm, Wed, 10 July 24

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ