ಸ್ವಾಮೀಜಿಗೆ ಕೋಟಿ ರೂ. ವಂಚನೆ ಕೇಸ್​; ಆರೋಪಿ ಜೆಡಿಎಸ್ ಮುಖಂಡನ ಮತ್ತಷ್ಟು ಹಗರಣ ಬಿಚ್ಚಿಟ್ಟ ಸಚಿವ ಆರ್.ಬಿ ತಿಮ್ಮಾಪುರ

ಅದು ರಾಮಾರೂಢ ಮಠ, ಆ ಮಠದ ಪರಮರಾಮಾರೂಢ ಸ್ವಾಮೀಜಿಗೆ ಜೆಡಿಎಸ್ ಪರಾಜಿತ ಅಭ್ಯರ್ಥಿ ಕೋಟಿ ರೂ. ಪಂಗನಾಮ‌ ಹಾಕಿದ್ದು, ಈಗಾಗಲೇ ಎಲ್ಲರಿಗೂ ಗೊತ್ತಾಗಿದೆ. ಇದೀಗ ಬಗೆದಷ್ಟು ಆರೋಪಿ ಪ್ರಕಾಶ್ ಮುಧೋಳ ಬಣ್ಣ ಬಯಲಾಗ್ತಿದ್ದು, ಸಚಿವ ಆರ್.ಬಿ. ತಿಮ್ಮಾಪುರ ಹೆಸರಲ್ಲೂ ಮೋಸ ಮಾಡಿರುವ ಕುರಿತು ಖುದ್ದು ತಿಮ್ಮಾಪುರ ಅವರು ಈ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಸ್ವಾಮೀಜಿಗೆ ಕೋಟಿ ರೂ. ವಂಚನೆ ಕೇಸ್​; ಆರೋಪಿ ಜೆಡಿಎಸ್ ಮುಖಂಡನ ಮತ್ತಷ್ಟು ಹಗರಣ ಬಿಚ್ಚಿಟ್ಟ ಸಚಿವ ಆರ್.ಬಿ ತಿಮ್ಮಾಪುರ
ಆರೋಪಿ ಜೆಡಿಎಸ್ ಮುಖಂಡನ ಮತ್ತಷ್ಟು ಹಗರಣವನ್ನ ಬಿಚ್ಚಿಟ್ಟ ಸಚಿವ ಆರ್.ಬಿ ತಿಮ್ಮಾಪುರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 02, 2024 | 2:47 PM

ಬಾಗಲಕೋಟೆ, ಅ.02: ಬಾಗಲಕೋಟೆ (Bagalkote) ತಾಲೂಕಿನ ತುಳಸಿಗೇರಿ ಬಳಿ ಇರುವ ರಾಮಾರೂಢ ಮಠದ ಪರಮರಾಮಾರೂಢ ಸ್ವಾಮೀಜಿ (Paramramarudh Swamiji) ಅವರಿಗೆ ಒಂದು ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಕಾಶ್ ಮುಧೋಳ ಬಣ್ಣ ಬಗೆದಷ್ಟು ಬಯಲಾಗುತ್ತಿದೆ. ಹೌದು, ಸಚಿವ ಆರ್.ಬಿ. ತಿಮ್ಮಾಪುರ(RB Timmapur) ಹೆಸರಲ್ಲೂ ಮೋಸ ಮಾಡಿರುವ ಕುರಿತು ಖುದ್ದು ತಿಮ್ಮಾಪುರ ಅವರು ಮಾಹಿತಿ ಬಿಚ್ಚಿಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ, ‘2018ರಲ್ಲಿ ನನ್ನ ಸಹೋದರಿಗೆ ಕಾರು ಕೊಡಿಸಬೇಕಿದೆ. ಹಾಗಾಗಿ ಹಣ ಬೇಕೆಂದು ಬ್ಯಾಂಕ್ ಮ್ಯಾನೇಜರ್ ಬಳಿ ಹಣ ವಸೂಲಿ ಮಾಡಿದ್ದನಂತೆ. ಅಷ್ಟೇ ಅಲ್ಲ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸಹೋದರನೆಂದು, ಬಾದಾಮಿ ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಹೆಸರಲ್ಲೂ ಆರೋಪಿ ದೋಖಾ ಮಾಡಿದ್ದಾನೆ. ಇದರ ಜೊತೆಗೆ ಹಾಲಿನ ಪುಡಿಯಲ್ಲಿ ಯೂರಿಯಾ ಮಿಕ್ಸ್ ಮಾಡಿದ್ದ ಪ್ರಕರಣದಲ್ಲೂ ಭಾಗಿಯಾಗಿದ್ದ.

ಇದನ್ನೂ ಓದಿ:ಸ್ವಾಮೀಜಿಗೆ ಕೋಟಿ ರೂ. ವಂಚನೆ ಕೇಸ್: ಆರೋಪಿ ಜೆಡಿಎಸ್​ ಮುಖಂಡನ ಕ್ರೈಂ ಡೈರಿ ಬಿಚ್ಚಿಟ್ಟ ಐಜಿಪಿ

ಜಗದೀಶ್ ಶೆಟ್ಟರ್ ಹೆಸರಲ್ಲೂ ವಂಚಿಸಲು ಪ್ರಯತ್ನ

ಈ ಹಿಂದೆ ಜಗದೀಶ್ ಶೆಟ್ಟರ್ ಹೆಸರಲ್ಲೂ ಬಾಗಲಕೋಟೆ ಜಿಲ್ಲೆಯ ಒಂದು ಸಿಮೆಂಟ್ ಫ್ಯಾಕ್ಟರಿಗೆ ಹೋಗಿದ್ದ. ಅಲ್ಲಿ ಜಗದೀಶ್ ಶೆಟ್ಟರ್ ಕಳಿಸಿದ್ದಾರೆ ಎಂದು ತಕ್ಷಣ 25 ಲಕ್ಷ ರೂ. ಕೊಟ್ಟು ಕಳಿಸಬೇಕಂತೆ ಎಂದು ಪ್ಯಾಕ್ಟರಿ ಆಡಳಿತ ಮಂಡಳಿ ಬಳಿ‌ ಕೇಳಿದ್ದ. ಸಿಮೆಂಟ್ ಪ್ಯಾಕ್ಟರಿಯವರು ಸಂಶಯ ಬಂದು ಕೂರಿಸಿ ಪೊಲೀಸರಿಗೆ ಕರೆ ಮಾಡಿ ವಿಚಾರಿಸಿದಾಗ ಬಣ್ಣ ಬಯಲಾಗಿತ್ತು. ಇನ್ನು 2019 ರ ಪ್ರವಾಹ ಸಂದರ್ಭದಲ್ಲಿ ಸಂತ್ರಸ್ತರಿಗೆ ತಂದಿಟ್ಟ ಅಕ್ಕಿಯನ್ನೂ ಕಳ್ಳತನ ಮಾಡಿದ್ದನಂತೆ. ಈ ಕುರಿತು ಆರೋಪಿ ಪ್ರಕಾಶ್ ಮುಧೋಳ ಹಗರಣಗಳನ್ನು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಬಿಚ್ಚಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ರಾಜ್​ಘಾಟ್​ನಲ್ಲಿ ರಾಷ್ಟ್ರಪಿತನಿಗೆ ಪುಷ್ಟನಮನ ಸಲ್ಲಿಸಿದ ಪ್ರಧಾನಿ ಮೋದಿ
ರಾಜ್​ಘಾಟ್​ನಲ್ಲಿ ರಾಷ್ಟ್ರಪಿತನಿಗೆ ಪುಷ್ಟನಮನ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ
ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ
ಕೇತುಗ್ರಸ್ತ ಸೂರ್ಯಗ್ರಹಣ ಪ್ರಭಾವ ಹೇಗಿರುತ್ತೆ ತಿಳಿಯಿರಿ
ಕೇತುಗ್ರಸ್ತ ಸೂರ್ಯಗ್ರಹಣ ಪ್ರಭಾವ ಹೇಗಿರುತ್ತೆ ತಿಳಿಯಿರಿ
Nithya Bhavishya: ಮಹಾಲಯ ಅಮವಾಸ್ಯೆ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಮಹಾಲಯ ಅಮವಾಸ್ಯೆ ದಿನದ ರಾಶಿ ಭವಿಷ್ಯ ತಿಳಿಯಿರಿ