AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಬಾಗಲಕೋಟೆಯಲ್ಲೂ ಭೂಕಂಪನ ಅನುಭವ; ಖಚಿತಪಡಿಸಿದ ಜಿಲ್ಲಾಡಳಿತ

ರಾತ್ರಿ 11.43 ರ ಸುಮಾರಿಗೆ ನಮಗೆ ಭೂಕಂಪನದ ಅನುಭವ ಆಗಿದೆ. ಹತ್ತರಿಂದ ಹನ್ನೆರಡು ಸೆಕೆಂಡುಗಳ ಕಾಲ ಭೂಕಂಪಿಸಿದ ಅನುಭವ ನಮಗೆ ಆಗಿದೆ. ರೋಲರ್ ಸಂಚರಿಸುವ ವೇಳೆ ಬರುವ ಶಬ್ದದ ಹಾಗೆ ಶಬ್ದ ಕೇಳಿಸಿದೆ.

Earthquake: ಬಾಗಲಕೋಟೆಯಲ್ಲೂ ಭೂಕಂಪನ ಅನುಭವ; ಖಚಿತಪಡಿಸಿದ ಜಿಲ್ಲಾಡಳಿತ
ಬಿರುಕು ಬಿಟ್ಟಿರುವ ಗೋಡೆ, ಭೂಕಂಪನದ ಅನುಭವವಾದ ಸ್ಥಳ
TV9 Web
| Edited By: |

Updated on:Sep 05, 2021 | 10:44 AM

Share

ಬಾಗಲಕೋಟೆ: ವಿಜಯಪುರ ಜಿಲ್ಲೆಯಾದ್ಯಂತ ಕಳೆದ ರಾತ್ರಿ 11.47ಕ್ಕೆ ಭೂಮಿ ಕಂಪಿಸಿದ (Earthquake) ಅನುಭವವಾಗಿದೆ. ಅದರಂತೆ ಬಾಗಲಕೋಟೆಯಲ್ಲೂ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ತಿಳಿದುಬಂದಿದೆ. ರಾತ್ರಿ 11.50ಕ್ಕೆ ಭೂಮಿ ಕಂಪಿಸಿದ ಅನುಭವಾಗಿದೆ ಎಂದು ಹೇಳಲಾಗುತ್ತಿದೆ. ಬಾಗಲಕೋಟೆ, ಜಮಖಂಡಿ ತಾಲೂಕಿನಲ್ಲಿ ಕಂಪನದ ಅನುಭವವಾಗಿದ್ದು, ಈ ಬಗ್ಗೆ ಬಾಗಲಕೋಟೆ ಜಿಲ್ಲಾಡಳಿತ ಖಚಿತಪಡಿಸಿದೆ. ಅಂಕಲಗಿ ಗ್ರಾಮದಲ್ಲಿ ಭೂಕಂಪನದ ಅನುಭವವಾದ ಹಿನ್ನೆಲೆ ಕೊಟ್ಟಿಗೆಯಲ್ಲಿ ದನಕರುಗಳು ಎದ್ದು ನಿಂತಿರುವುದು ತಿಳಿದುಬಂದಿದೆ. ಕೆ.ಎಲ್.ಬಿಲ್.ಕೇರಿ ಎಂಬುವರ ಕೊಟ್ಟಿಗೆಯಲ್ಲಿದ್ದ ಹಸುಗಳು ಭೂಕಂಪನ ಅನುಭವಕ್ಕೆ ದಿಢೀರನೆ ಎದ್ದು ನಿಂತಿದ್ದವು ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ರಾತ್ರಿ 11.43 ರ ಸುಮಾರಿಗೆ ನಮಗೆ ಭೂಕಂಪನದ ಅನುಭವ ಆಗಿದೆ. ಹತ್ತರಿಂದ ಹನ್ನೆರಡು ಸೆಕೆಂಡುಗಳ ಕಾಲ ಭೂಕಂಪಿಸಿದ ಅನುಭವ ನಮಗೆ ಆಗಿದೆ. ರೋಲರ್ ಸಂಚರಿಸುವ ವೇಳೆ ಬರುವ ಶಬ್ದದ ಹಾಗೆ ಶಬ್ದ ಕೇಳಿಸಿದೆ. 10ರಿಂದ 12 ಸೆಕೆಂಡ್‌ ಕಾಲ ಕಂಪನದ ಅನುಭವ ಆಗಿದೆ. ನಮ್ಮ ಮನೆಯ ಸದಸ್ಯರು ಹೊರಗೆ ಬಂದು ನಿಂತಿದ್ದೆವು. ಮಕ್ಕಳು, ಮನೆಮಂದಿ ಭಯಗೊಂಡಿದ್ದರು ಎಂದು ಬಾಗಲಕೋಟೆ ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ ಸಲೀಮ್ ಶೇಕ್ ತಿಳಿಸಿದ್ದಾರೆ. ಸಲೀಮ್ ಶೇಖ್ ಅವರ ಮನೆ ಗೋಡೆ ಮೇಲೆ ಚಿಕ್ಕದಾಗಿ ಬಿರುಕು ಕಾಣಿಸಿಕೊಂಡಿದೆ.

ವಿಜಯಪುರದಲ್ಲಿ ಕಂಪನದ ತೀವ್ರತೆ 3.9ರಷ್ಟು ದಾಖಲು ರಾತ್ರಿ 11.47ರ ಸುಮಾರಿಗೆ ವಿಜಯಪುರ ಸೇರಿದಂತೆ ಜಿಲ್ಲೆಯಾದ್ಯಂತ ಭೂಮಿ ಕಂಪಿಸಿದ ಅನುಭವ, ವಿಚಿತ್ರ ಶಬ್ದ ಎದುರಾಗಿದೆ. ಭಯದಿಂದ ಜನರು ತಮ್ಮ ಮನೆಗಳಿಂದ ಹೊರಗಡೆ ಓಡಿಬಂದಿದ್ದಾರೆ. 3 ರಿಂದ 4 ಸೆಕೆಂಡ್ ಕಾಲ ಭೂಮಿ‌ ನಡುಗಿದ ಅನುಭವವಾಗಿದ್ದು ಭೂಮಿಯಿಂದ ಕೇಳಿ‌ ಬಂದ ವಿಚಿತ್ರ ಶಬ್ದಕ್ಕೆ ಜನರಲ್ಲಿ ಭೀತಿ ಎದುರಾಗಿದೆ. ಸದ್ಯ ಗಣಿ, ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ

ನೈಜೀರಿಯಾ ಡ್ರಗ್ ಪೆಡ್ಲರ್​ನನ್ನು ಬಂಧಿಸಿದ ಸಿಸಿಬಿ, ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ವಶ

ಬೆಳಗಾವಿ: ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತ ಮೊಹಮ್ಮದ್ ಜಮಾದಾರ್ ತಯಾರಿಸುವ ಗಣಪತಿ

(Earthquake experience in Bagalkot and District Administration confirmed the earthquake)

Published On - 10:39 am, Sun, 5 September 21

Follow Us
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ