AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ‘ಆರ್​ಎಂಡಿ’ ಗುಟ್ಕಾ ತಯಾರಿಕೆ ಜಾಲ ಪತ್ತೆ; 30 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

ಮುಧೋಳ ಪೊಲೀಸ(Mudhol Police)ರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ಆರ್​ಎಂಡಿ ಗುಟ್ಕಾ ತಯಾರಿಕೆ ಮಾಡುವ ಜಾಲವನ್ನು ಪತ್ತೆ ಮಾಡಿದ್ದಾರೆ. ಜೊತೆಗೆ ದೆಹಲಿ, ಹೈದ್ರಾಬಾದ್, ಬೆಳಗಾವಿ ಹಾಗೂ ನಿಪ್ಪಾಣಿ ಮೂಲದವರಾದ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ನಕಲಿ ‘ಆರ್​ಎಂಡಿ’ ಗುಟ್ಕಾ ತಯಾರಿಕೆ ಜಾಲ ಪತ್ತೆ; 30 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ
ಮುದೋಳದಲ್ಲಿ ನಕಲಿ ‘ಆರ್​ಎಂಡಿ’ ಗುಟ್ಕಾ ತಯಾರಿಕೆ ಜಾಲ ಪತ್ತೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jun 12, 2024 | 4:32 PM

Share

ಬಾಗಲಕೋಟೆ, ಜೂ.12: ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸ(Mudhol Police)ರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ಆರ್​ಎಂಡಿ ಗುಟ್ಕಾ ತಯಾರಿಕೆ ಮಾಡುವ ಜಾಲವನ್ನು ಪತ್ತೆ ಮಾಡಿದ್ದಾರೆ. ಮಹಾಂತೇಶ್ ಮೂಲಿಮನಿ ಎಂಬುವವರ ದೂರಿನ ಮೇಲೆ ಕಾರ್ಯಾಚರಣೆ ಆರಂಭಿಸಿದ್ದ ಪೊಲೀಸರು, ಆರ್​ಎಂಡಿ ಪಾನ್​ ಮಸಾಲಾ ಮತ್ತು ಎಂ ಗೋಲ್ಡ್ ಸೆಂಟೆಡ್ ಟೊಬ್ಯಾಕೋ ಹೆಸರಿನ ಪೌಚ್ ತಯಾರಿಕೆ ಮಾಡುತ್ತಿದ್ದವರ ದಾಳಿ ಮಾಡಿ, ಏಳು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮಹಮ್ಮದ ವಶೀಮ್ ಮುನೀರ, ಹಿಮಾಯತ, ಮಹ್ಮದ್, ವಿಕಾಸ್ ಚವ್ಹಾಣ, ಸಂತೋಷ ಬಳ್ಳೋಳ್ಳೆ, ಜಹೀರ , ಇಕ್ವಾಲ್ ಎಂಬ ಆರೋಪಿಗಳನ್ನ ವಶಕ್ಕೆ ಪಡೆದಿದ್ದು, ಬಂಧಿತರು ದೆಹಲಿ, ಹೈದ್ರಾಬಾದ್, ಬೆಳಗಾವಿ ಹಾಗೂ ನಿಪ್ಪಾಣಿ ಮೂಲದವರಾಗಿದ್ದಾರೆ. ಇವರಿಂದ ಸುಮಾರು 30 ಲಕ್ಷ ರೂ. ಮೌಲ್ಯದ ಎಂ ಗೋಲ್ಡ್ ಸೆಂಟೆಡ್ ಟೊಬ್ಯಾಕೋ ಹಾಗೂ ಆರ್​ಎಂಡಿ ಪಾನ್​ ಮಸಾಲಾ ಮತ್ತು ನಕಲಿಯಾಗಿ ತಯಾರಿಸಲು ಬಳಸುವ ಪ್ರಿಂಟೇಡ್ , ಕಟಿಂಗ್​​ ಮಶೀನ್​ಗಳನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ:ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ; ತಪ್ಪಿದರೆ ಕಾನೂನು ಕ್ರಮ

ಇಸ್ಪೇಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಬಿದ್ದು ಸಾವು

ಕೋಲಾರ: ಶ್ರೀನಿವಾಸಪುರ ತಾಲೂಕಿನ ಗುಡಸವಾರಪಲ್ಲಿ ಗ್ರಾಮದ ಬಳಿ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಹಾರಿದ್ದ ನಾಲ್ವರ ಪೈಕಿ ಗುರುವಲೋಳ್ಳಗಡ್ಡ ಗ್ರಾಮದ ನರಸಿಂಹ(45) ಎಂಬಾತ ಕೊನೆಯುಸಿರೆಳೆದಿದ್ದಾರೆ. ಇನ್ನುಳಿದ ಮೂವರು ಜೂಜುಕೋರರು ಈಜಿ ದಡ ಸೇರಿದ್ದಾರೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇತ್ತ ಮೃತರ‌ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ