ನಕಲಿ ‘ಆರ್​ಎಂಡಿ’ ಗುಟ್ಕಾ ತಯಾರಿಕೆ ಜಾಲ ಪತ್ತೆ; 30 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

ಮುಧೋಳ ಪೊಲೀಸ(Mudhol Police)ರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ಆರ್​ಎಂಡಿ ಗುಟ್ಕಾ ತಯಾರಿಕೆ ಮಾಡುವ ಜಾಲವನ್ನು ಪತ್ತೆ ಮಾಡಿದ್ದಾರೆ. ಜೊತೆಗೆ ದೆಹಲಿ, ಹೈದ್ರಾಬಾದ್, ಬೆಳಗಾವಿ ಹಾಗೂ ನಿಪ್ಪಾಣಿ ಮೂಲದವರಾದ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ನಕಲಿ ‘ಆರ್​ಎಂಡಿ’ ಗುಟ್ಕಾ ತಯಾರಿಕೆ ಜಾಲ ಪತ್ತೆ; 30 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ
ಮುದೋಳದಲ್ಲಿ ನಕಲಿ ‘ಆರ್​ಎಂಡಿ’ ಗುಟ್ಕಾ ತಯಾರಿಕೆ ಜಾಲ ಪತ್ತೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 12, 2024 | 4:32 PM

ಬಾಗಲಕೋಟೆ, ಜೂ.12: ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸ(Mudhol Police)ರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ಆರ್​ಎಂಡಿ ಗುಟ್ಕಾ ತಯಾರಿಕೆ ಮಾಡುವ ಜಾಲವನ್ನು ಪತ್ತೆ ಮಾಡಿದ್ದಾರೆ. ಮಹಾಂತೇಶ್ ಮೂಲಿಮನಿ ಎಂಬುವವರ ದೂರಿನ ಮೇಲೆ ಕಾರ್ಯಾಚರಣೆ ಆರಂಭಿಸಿದ್ದ ಪೊಲೀಸರು, ಆರ್​ಎಂಡಿ ಪಾನ್​ ಮಸಾಲಾ ಮತ್ತು ಎಂ ಗೋಲ್ಡ್ ಸೆಂಟೆಡ್ ಟೊಬ್ಯಾಕೋ ಹೆಸರಿನ ಪೌಚ್ ತಯಾರಿಕೆ ಮಾಡುತ್ತಿದ್ದವರ ದಾಳಿ ಮಾಡಿ, ಏಳು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮಹಮ್ಮದ ವಶೀಮ್ ಮುನೀರ, ಹಿಮಾಯತ, ಮಹ್ಮದ್, ವಿಕಾಸ್ ಚವ್ಹಾಣ, ಸಂತೋಷ ಬಳ್ಳೋಳ್ಳೆ, ಜಹೀರ , ಇಕ್ವಾಲ್ ಎಂಬ ಆರೋಪಿಗಳನ್ನ ವಶಕ್ಕೆ ಪಡೆದಿದ್ದು, ಬಂಧಿತರು ದೆಹಲಿ, ಹೈದ್ರಾಬಾದ್, ಬೆಳಗಾವಿ ಹಾಗೂ ನಿಪ್ಪಾಣಿ ಮೂಲದವರಾಗಿದ್ದಾರೆ. ಇವರಿಂದ ಸುಮಾರು 30 ಲಕ್ಷ ರೂ. ಮೌಲ್ಯದ ಎಂ ಗೋಲ್ಡ್ ಸೆಂಟೆಡ್ ಟೊಬ್ಯಾಕೋ ಹಾಗೂ ಆರ್​ಎಂಡಿ ಪಾನ್​ ಮಸಾಲಾ ಮತ್ತು ನಕಲಿಯಾಗಿ ತಯಾರಿಸಲು ಬಳಸುವ ಪ್ರಿಂಟೇಡ್ , ಕಟಿಂಗ್​​ ಮಶೀನ್​ಗಳನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ:ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ; ತಪ್ಪಿದರೆ ಕಾನೂನು ಕ್ರಮ

ಇಸ್ಪೇಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಬಿದ್ದು ಸಾವು

ಕೋಲಾರ: ಶ್ರೀನಿವಾಸಪುರ ತಾಲೂಕಿನ ಗುಡಸವಾರಪಲ್ಲಿ ಗ್ರಾಮದ ಬಳಿ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಹಾರಿದ್ದ ನಾಲ್ವರ ಪೈಕಿ ಗುರುವಲೋಳ್ಳಗಡ್ಡ ಗ್ರಾಮದ ನರಸಿಂಹ(45) ಎಂಬಾತ ಕೊನೆಯುಸಿರೆಳೆದಿದ್ದಾರೆ. ಇನ್ನುಳಿದ ಮೂವರು ಜೂಜುಕೋರರು ಈಜಿ ದಡ ಸೇರಿದ್ದಾರೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇತ್ತ ಮೃತರ‌ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ