ನಕಲಿ ‘ಆರ್​ಎಂಡಿ’ ಗುಟ್ಕಾ ತಯಾರಿಕೆ ಜಾಲ ಪತ್ತೆ; 30 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

ಮುಧೋಳ ಪೊಲೀಸ(Mudhol Police)ರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ಆರ್​ಎಂಡಿ ಗುಟ್ಕಾ ತಯಾರಿಕೆ ಮಾಡುವ ಜಾಲವನ್ನು ಪತ್ತೆ ಮಾಡಿದ್ದಾರೆ. ಜೊತೆಗೆ ದೆಹಲಿ, ಹೈದ್ರಾಬಾದ್, ಬೆಳಗಾವಿ ಹಾಗೂ ನಿಪ್ಪಾಣಿ ಮೂಲದವರಾದ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ನಕಲಿ ‘ಆರ್​ಎಂಡಿ’ ಗುಟ್ಕಾ ತಯಾರಿಕೆ ಜಾಲ ಪತ್ತೆ; 30 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ
ಮುದೋಳದಲ್ಲಿ ನಕಲಿ ‘ಆರ್​ಎಂಡಿ’ ಗುಟ್ಕಾ ತಯಾರಿಕೆ ಜಾಲ ಪತ್ತೆ
Edited By:

Updated on: Jun 12, 2024 | 4:32 PM

ಬಾಗಲಕೋಟೆ, ಜೂ.12: ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸ(Mudhol Police)ರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ಆರ್​ಎಂಡಿ ಗುಟ್ಕಾ ತಯಾರಿಕೆ ಮಾಡುವ ಜಾಲವನ್ನು ಪತ್ತೆ ಮಾಡಿದ್ದಾರೆ. ಮಹಾಂತೇಶ್ ಮೂಲಿಮನಿ ಎಂಬುವವರ ದೂರಿನ ಮೇಲೆ ಕಾರ್ಯಾಚರಣೆ ಆರಂಭಿಸಿದ್ದ ಪೊಲೀಸರು, ಆರ್​ಎಂಡಿ ಪಾನ್​ ಮಸಾಲಾ ಮತ್ತು ಎಂ ಗೋಲ್ಡ್ ಸೆಂಟೆಡ್ ಟೊಬ್ಯಾಕೋ ಹೆಸರಿನ ಪೌಚ್ ತಯಾರಿಕೆ ಮಾಡುತ್ತಿದ್ದವರ ದಾಳಿ ಮಾಡಿ, ಏಳು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮಹಮ್ಮದ ವಶೀಮ್ ಮುನೀರ, ಹಿಮಾಯತ, ಮಹ್ಮದ್, ವಿಕಾಸ್ ಚವ್ಹಾಣ, ಸಂತೋಷ ಬಳ್ಳೋಳ್ಳೆ, ಜಹೀರ , ಇಕ್ವಾಲ್
ಎಂಬ ಆರೋಪಿಗಳನ್ನ ವಶಕ್ಕೆ ಪಡೆದಿದ್ದು, ಬಂಧಿತರು ದೆಹಲಿ, ಹೈದ್ರಾಬಾದ್, ಬೆಳಗಾವಿ ಹಾಗೂ ನಿಪ್ಪಾಣಿ ಮೂಲದವರಾಗಿದ್ದಾರೆ. ಇವರಿಂದ ಸುಮಾರು 30 ಲಕ್ಷ ರೂ. ಮೌಲ್ಯದ ಎಂ ಗೋಲ್ಡ್ ಸೆಂಟೆಡ್ ಟೊಬ್ಯಾಕೋ ಹಾಗೂ ಆರ್​ಎಂಡಿ ಪಾನ್​ ಮಸಾಲಾ ಮತ್ತು ನಕಲಿಯಾಗಿ ತಯಾರಿಸಲು ಬಳಸುವ ಪ್ರಿಂಟೇಡ್ , ಕಟಿಂಗ್​​ ಮಶೀನ್​ಗಳನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ:ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ; ತಪ್ಪಿದರೆ ಕಾನೂನು ಕ್ರಮ

ಇಸ್ಪೇಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಬಿದ್ದು ಸಾವು

ಕೋಲಾರ: ಶ್ರೀನಿವಾಸಪುರ ತಾಲೂಕಿನ ಗುಡಸವಾರಪಲ್ಲಿ ಗ್ರಾಮದ ಬಳಿ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಹಾರಿದ್ದ ನಾಲ್ವರ ಪೈಕಿ ಗುರುವಲೋಳ್ಳಗಡ್ಡ ಗ್ರಾಮದ ನರಸಿಂಹ(45) ಎಂಬಾತ ಕೊನೆಯುಸಿರೆಳೆದಿದ್ದಾರೆ. ಇನ್ನುಳಿದ ಮೂವರು ಜೂಜುಕೋರರು ಈಜಿ ದಡ ಸೇರಿದ್ದಾರೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇತ್ತ ಮೃತರ‌ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us