AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಸಮಾಧಿ ವೀಕ್ಷಣೆಗೆ ಅಭಿಮಾನಿಯಿಂದ 600 ಕಿಲೋಮೀಟರ್ ಸೈಕಲ್ ಯಾತ್ರೆ

ಬಾದರದಿನ್ನಿ ಗ್ರಾಮದಿಂದ ಸುಮಾರು 600 ಕಿಲೋಮೀಟರ್ ಸೈಕಲ್ ಯಾತ್ರೆಯಲ್ಲಿ ಬೆಂಗಳೂರು ತಲುಪಲಿದ್ದಾರೆ. ಕನ್ನಡ ಧ್ವಜ ಸೈಕಲ್​ಗೆ ಸಿಕ್ಕಿಸಿ, ಸೈಕಲ್ ಹಿಂದೆ ಮುಂದೆ ಅಪ್ಪು ಭಾವಚಿತ್ರ ಕಟ್ಟಿಕೊಂಡು ಅಭಿಮಾನಿ ಸೈಕಲ್ ಯಾತ್ರೆ ನಡೆಸುತ್ತಿದ್ದಾರೆ.

ಪುನೀತ್ ಸಮಾಧಿ ವೀಕ್ಷಣೆಗೆ ಅಭಿಮಾನಿಯಿಂದ 600 ಕಿಲೋಮೀಟರ್ ಸೈಕಲ್ ಯಾತ್ರೆ
ಸೈಕಲ್ ಯಾತ್ರೆ ನಡೆಸುತ್ತಿರುವ ಪುನೀತ್ ಅಭಿಮಾನಿ
TV9 Web
| Edited By: |

Updated on: Nov 11, 2021 | 10:41 AM

Share

ಬಾಗಲಕೋಟೆ: ಸ್ಯಾಂಡಲ್​ವುಡ್​ ನಟ ಪುನೀತ್ ರಾಜ್​ಕುಮಾರ್ ಅಗಲಿಕೆ ನೋವು ಕಡಿಮೆಯಾಗುತ್ತಿಲ್ಲ. ಅಪ್ಪು ಸಮಾಧಿ ದರ್ಶನ ಮಾಡಲು ಕಂಠೀರವ ಸ್ಟೇಡಿಯಂಗೆ ಪ್ರತಿದಿನ ಜನ ಸಾಗರವೇ ಹರಿದು ಬರುತ್ತಿದೆ. ಸಮಾಧಿ ಮುಂದೆ ನಿಂತು ಕಣ್ಣೀರು ಹಾಕುತ್ತಿದ್ದಾರೆ. ಅಭಿಮಾನಿಗಳು ಬೇರೆ ಬೇರೆ ರೀತಿಯಲ್ಲಿ ಪುನೀತ್​ಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಈ ನಡುವೆ ಯುವರತ್ನನ ಅಭಿಮಾನಿಯೊಬ್ಬರು ಸಮಾಧಿ ಭೇಟಿಗೆ ಸೈಕಲ್ ಯಾತ್ರೆ ಮೂಲಕ ಬಾಗಲಕೋಟೆಯಿಂದ ಬರುತ್ತಿದ್ದಾರೆ.

ನಿನ್ನೆ (ನ.10) ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾದರದಿನ್ನಿ ಗ್ರಾಮದಿಂದ ಅಭಿಮಾನಿ ಸೈಕಲ್ ಯಾತ್ರೆಯನ್ನು ಆರಂಭಿಸಿದ್ದಾರೆ. ರಾಘವೇಂದ್ರ ಗಾಣಿಗೇರ ಎಂಬ ಅಭಿಮಾನಿ ಸೈಕಲ್ ಯಾತ್ರೆ ಹೊರಟಿದ್ದು, ನಿನ್ನೆ ರಾತ್ರಿ ಹುನಗುಂದ ತಲುಪಿ, ಅಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂದು ಬೆಳಿಗ್ಗೆ ಹುನಗುಂದ ಪಟ್ಟಣದಿಂದ ಸೈಕಲ್ ಯಾತ್ರೆ ಶುರುವಾಗಿದೆ. ಹುನಗುಂದ ಪಟ್ಡಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಅಪ್ಪು ಅಭಿಮಾನಿಗಳಿಂದ ಸೈಕಲ್ ಯಾತ್ರೆ ಹೊರಟ ಅಭಿಮಾನಿಗೆ ಸನ್ಮಾನ ಮಾಡಿದ್ದಾರೆ.

ಬಾದರದಿನ್ನಿ ಗ್ರಾಮದಿಂದ ಸುಮಾರು 600 ಕಿಲೋಮೀಟರ್ ಸೈಕಲ್ ಯಾತ್ರೆಯಲ್ಲಿ ಬೆಂಗಳೂರು ತಲುಪಲಿದ್ದಾರೆ. ಕನ್ನಡ ಧ್ವಜ ಸೈಕಲ್ಗೆ ಸಿಕ್ಕಿಸಿ, ಸೈಕಲ್ ಹಿಂದೆ ಮುಂದೆ ಅಪ್ಪು ಭಾವಚಿತ್ರ ಕಟ್ಟಿಕೊಂಡು ಅಭಿಮಾನಿ ಸೈಕಲ್ ಯಾತ್ರೆ ನಡೆಸುತ್ತಿದ್ದಾರೆ. ರಾಘವೇಂದ್ರ ಗಾಣಿಗೇರ ಪುನೀತ್ ಮೃತಪಟ್ಟ ದಿನವೇ ಹೋಗಬೇಕು ಅಂತ ಅಂದುಕೊಂಡಿದ್ದರಂತೆ. ಆದರೆ ಅನಾರೋಗ್ಯ ಕಾರಣದಿಂದ ಈಗ ಸೈಕಲ್ ಯಾತ್ರೆ ಮೂಲಕ ಸಮಾಧಿ ವೀಕ್ಷಣೆಗೆ ಹೊರಟಿದ್ದಾರೆ. ಹುನಗುಂದ, ಇಳಕಲ್, ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.

ಇದನ್ನೂ ಓದಿ

ಒನಕೆ ಓಬವ್ವ ಜಯಂತಿ: ಕನ್ನಡದಲ್ಲೇ ಟ್ವೀಟ್​ ಮಾಡಿ ವೀರವನಿತೆಯ ಶೌರ್ಯ ಸ್ಮರಿಸಿದ ಪ್ರಧಾನಿ ಮೋದಿ

ಪುನೀತ್​ ನಿಧನದ ಬಳಿಕ ಜಿಮ್​ಗೆ ತೆರಳಲು ಯುವಕರ ಹಿಂದೇಟು; ಪೋಷಕರಲ್ಲೂ ಆವರಿಸಿದೆ ಭಯ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್