AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಸಮಾಧಿ ವೀಕ್ಷಣೆಗೆ ಅಭಿಮಾನಿಯಿಂದ 600 ಕಿಲೋಮೀಟರ್ ಸೈಕಲ್ ಯಾತ್ರೆ

ಬಾದರದಿನ್ನಿ ಗ್ರಾಮದಿಂದ ಸುಮಾರು 600 ಕಿಲೋಮೀಟರ್ ಸೈಕಲ್ ಯಾತ್ರೆಯಲ್ಲಿ ಬೆಂಗಳೂರು ತಲುಪಲಿದ್ದಾರೆ. ಕನ್ನಡ ಧ್ವಜ ಸೈಕಲ್​ಗೆ ಸಿಕ್ಕಿಸಿ, ಸೈಕಲ್ ಹಿಂದೆ ಮುಂದೆ ಅಪ್ಪು ಭಾವಚಿತ್ರ ಕಟ್ಟಿಕೊಂಡು ಅಭಿಮಾನಿ ಸೈಕಲ್ ಯಾತ್ರೆ ನಡೆಸುತ್ತಿದ್ದಾರೆ.

ಪುನೀತ್ ಸಮಾಧಿ ವೀಕ್ಷಣೆಗೆ ಅಭಿಮಾನಿಯಿಂದ 600 ಕಿಲೋಮೀಟರ್ ಸೈಕಲ್ ಯಾತ್ರೆ
ಸೈಕಲ್ ಯಾತ್ರೆ ನಡೆಸುತ್ತಿರುವ ಪುನೀತ್ ಅಭಿಮಾನಿ
TV9 Web
| Updated By: sandhya thejappa|

Updated on: Nov 11, 2021 | 10:41 AM

Share

ಬಾಗಲಕೋಟೆ: ಸ್ಯಾಂಡಲ್​ವುಡ್​ ನಟ ಪುನೀತ್ ರಾಜ್​ಕುಮಾರ್ ಅಗಲಿಕೆ ನೋವು ಕಡಿಮೆಯಾಗುತ್ತಿಲ್ಲ. ಅಪ್ಪು ಸಮಾಧಿ ದರ್ಶನ ಮಾಡಲು ಕಂಠೀರವ ಸ್ಟೇಡಿಯಂಗೆ ಪ್ರತಿದಿನ ಜನ ಸಾಗರವೇ ಹರಿದು ಬರುತ್ತಿದೆ. ಸಮಾಧಿ ಮುಂದೆ ನಿಂತು ಕಣ್ಣೀರು ಹಾಕುತ್ತಿದ್ದಾರೆ. ಅಭಿಮಾನಿಗಳು ಬೇರೆ ಬೇರೆ ರೀತಿಯಲ್ಲಿ ಪುನೀತ್​ಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಈ ನಡುವೆ ಯುವರತ್ನನ ಅಭಿಮಾನಿಯೊಬ್ಬರು ಸಮಾಧಿ ಭೇಟಿಗೆ ಸೈಕಲ್ ಯಾತ್ರೆ ಮೂಲಕ ಬಾಗಲಕೋಟೆಯಿಂದ ಬರುತ್ತಿದ್ದಾರೆ.

ನಿನ್ನೆ (ನ.10) ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾದರದಿನ್ನಿ ಗ್ರಾಮದಿಂದ ಅಭಿಮಾನಿ ಸೈಕಲ್ ಯಾತ್ರೆಯನ್ನು ಆರಂಭಿಸಿದ್ದಾರೆ. ರಾಘವೇಂದ್ರ ಗಾಣಿಗೇರ ಎಂಬ ಅಭಿಮಾನಿ ಸೈಕಲ್ ಯಾತ್ರೆ ಹೊರಟಿದ್ದು, ನಿನ್ನೆ ರಾತ್ರಿ ಹುನಗುಂದ ತಲುಪಿ, ಅಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂದು ಬೆಳಿಗ್ಗೆ ಹುನಗುಂದ ಪಟ್ಟಣದಿಂದ ಸೈಕಲ್ ಯಾತ್ರೆ ಶುರುವಾಗಿದೆ. ಹುನಗುಂದ ಪಟ್ಡಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಅಪ್ಪು ಅಭಿಮಾನಿಗಳಿಂದ ಸೈಕಲ್ ಯಾತ್ರೆ ಹೊರಟ ಅಭಿಮಾನಿಗೆ ಸನ್ಮಾನ ಮಾಡಿದ್ದಾರೆ.

ಬಾದರದಿನ್ನಿ ಗ್ರಾಮದಿಂದ ಸುಮಾರು 600 ಕಿಲೋಮೀಟರ್ ಸೈಕಲ್ ಯಾತ್ರೆಯಲ್ಲಿ ಬೆಂಗಳೂರು ತಲುಪಲಿದ್ದಾರೆ. ಕನ್ನಡ ಧ್ವಜ ಸೈಕಲ್ಗೆ ಸಿಕ್ಕಿಸಿ, ಸೈಕಲ್ ಹಿಂದೆ ಮುಂದೆ ಅಪ್ಪು ಭಾವಚಿತ್ರ ಕಟ್ಟಿಕೊಂಡು ಅಭಿಮಾನಿ ಸೈಕಲ್ ಯಾತ್ರೆ ನಡೆಸುತ್ತಿದ್ದಾರೆ. ರಾಘವೇಂದ್ರ ಗಾಣಿಗೇರ ಪುನೀತ್ ಮೃತಪಟ್ಟ ದಿನವೇ ಹೋಗಬೇಕು ಅಂತ ಅಂದುಕೊಂಡಿದ್ದರಂತೆ. ಆದರೆ ಅನಾರೋಗ್ಯ ಕಾರಣದಿಂದ ಈಗ ಸೈಕಲ್ ಯಾತ್ರೆ ಮೂಲಕ ಸಮಾಧಿ ವೀಕ್ಷಣೆಗೆ ಹೊರಟಿದ್ದಾರೆ. ಹುನಗುಂದ, ಇಳಕಲ್, ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.

ಇದನ್ನೂ ಓದಿ

ಒನಕೆ ಓಬವ್ವ ಜಯಂತಿ: ಕನ್ನಡದಲ್ಲೇ ಟ್ವೀಟ್​ ಮಾಡಿ ವೀರವನಿತೆಯ ಶೌರ್ಯ ಸ್ಮರಿಸಿದ ಪ್ರಧಾನಿ ಮೋದಿ

ಪುನೀತ್​ ನಿಧನದ ಬಳಿಕ ಜಿಮ್​ಗೆ ತೆರಳಲು ಯುವಕರ ಹಿಂದೇಟು; ಪೋಷಕರಲ್ಲೂ ಆವರಿಸಿದೆ ಭಯ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ